ಬ್ರೇಕಿಂಗ್ ನ್ಯೂಸ್
29-09-20 09:41 pm Headline Karnataka News Network ಕರ್ನಾಟಕ
ಚಿಕ್ಕಮಗಳೂರು, ಸೆ.29: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಆಯ್ದೆಯಾಗಿರುವ ಸಚಿವ ಸಿ.ಟಿ.ರವಿ, ಪಕ್ಷ ಬಯಸಿದರೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಹೇಳಿದ್ದರು. ಈಗ ಮತ್ತೆ ಅದೇ ಮಾತನ್ನು ಸಿಟಿ ರವಿ ಪುನರುಚ್ಚರಿಸಿದ್ದು ರಾಜೀನಾಮೆ ನೀಡುವ ವಿಚಾರದಲ್ಲಿ ತನ್ನಲ್ಲಿ ಯಾವುದೇ ಗೊಂದಲವಿಲ್ಲ. ಈಗಾಗಲೇ ರಾಜೀನಾಮೆ ಪತ್ರವನ್ನು ಟೈಪ್ ಮಾಡಿ ಇಟ್ಟುಕೊಂಡಿದ್ದೇನೆ. ಅ.2ರ ನಂತರ ಮುಖ್ಯಮಂತ್ರಿ ಜೊತೆಗೆ ಚರ್ಚಿಸಿ, ಅಂತಿಮ ನಿರ್ಧಾರ ಕೈಗೊಳ್ಳುತ್ತೇನೆಂದು ಹೇಳಿದ್ದಾರೆ.
ರಾಜೀನಾಮೆ ವಿಚಾರದಲ್ಲಿ ಚರ್ಚೆಯ ಆವಶ್ಯಕತೆ ಇಲ್ಲ. ಇದೊಂದು ಸ್ವಾಭಾವಿಕ ಪ್ರಕ್ರಿಯೆಯಾಗಿದೆ. ಸಂಘಟನೆ ಮತ್ತು ಸರಕಾರ ಎಂಬ ವಿಚಾರ ನನ್ನ ಮುಂದೆ ಬಂದಲ್ಲಿ ನನ್ನ ಆದ್ಯತೆ ಸಂಘಟನೆಯಾಗಿರಲಿದೆ ಎಂಬುದನ್ನು ಈಗಾಗಲೇ ಸ್ಪಷ್ಟಪಡಿಸಿದ್ದೇನೆ. ರಾಜೀನಾಮೆ ವಿಚಾರ ತೀರ್ಮಾನ ಮಾಡಬೇಕಿರುವುದು ಪಕ್ಷದ ವರಿಷ್ಠರು. ಸಾಮಾನ್ಯ ಕಾರ್ಯಕರ್ತನಾಗಿ ಕೆಲಸ ಮಾಡಿಕೊಂಡು ಬಂದಿರುವುದರಿಂದ ರಾಜೀನಾಮೆ ವಿಚಾರದಲ್ಲಿ ನನ್ನಲ್ಲಿ ಯಾವುದೇ ಗೊಂದಲಗಳಿಲ್ಲ, ಅಧಿಕಾರ ಎನ್ನುವುದೊಂದು ಸಾಧನವಾಗಿದೆಯೇ ಹೊರತು ಅಧಿಕಾರವೇ ಜೀವನದ ಅಂತಿಮ ಗುರಿಯಲ್ಲ ಎಂದರು.
ನನಗೆ ಪಕ್ಷವೇ ಮುಖ್ಯ, ರಾಜಕೀಯದಲ್ಲಿ ಅಧಿಕಾರ ಸಾಮಾನ್ಯ. ಹಾಗಂತ ನಾನು ಸನ್ಯಾಸಿಯಲ್ಲ, ಅಧಿಕಾರವೇ ಜೀವನದ ಗುರಿ ಎಂದು ಭಾವಿಸಿದವನೂ ಅಲ್ಲ. 1 ವರ್ಷ ಮಂತ್ರಿಯಾಗಿ ನನ್ನ ಯೋಜನೆ ಪ್ರಕಾರ ಕೆಲವು ಕೆಲಸಗಳನ್ನು ಅನುಷ್ಠಾನಗೊಳಿಸಿದ್ದೇನೆ, ಕೆಲವು ಕೆಲಸಗಳನ್ನು ಅನುಷ್ಠಾನದ ಹಂತಕ್ಕೆ ತಂದಿದ್ದೇನೆ. ಅ.1ರಂದು ಕ್ಯಾಬಿನೆಟ್ ಸಭೆ ಇದೆ. ಅ.2ರಂದು ಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಜಿಲ್ಲೆಯ ವಾರ್ಷಿಕ ರಿಪೋರ್ಟ್ ಕಾರ್ಡ್ ಬಿಡುಗಡೆ ಮಾಡುತ್ತೇನೆ. ಆನಂತರ ಮುಖ್ಯಮಂತ್ರಿಯೊಂದಿಗೆ ಚರ್ಚಿಸಿ ರಾಜೀನಾಮೆ ವಿಚಾರದಲ್ಲಿ ಅಂತಿಮ ನಿರ್ಧಾರ ತೆಗೆದುಕೊಳ್ಳುತ್ತೇನೆ ಎಂದು ತಿಳಿಸಿದರು.
ಸಂಪುಟ ವಿಸ್ತರಣೆ ವೇಳೆ ಇಂತವರಿಗೇ ಮಂತ್ರಿಗಿರಿ ನೀಡಿ ಎಂದು ಹೇಳುವುದಿಲ್ಲ. ಅದು ಮುಖ್ಯಮಂತ್ರಿಯ ಜವಾಬ್ದಾರಿ. ಮುಖ್ಯಮಂತ್ರಿ ಯಡಿಯೂರಪ್ಪ ಅನುಭವಿಗಳು, ನಾವು ರಾಜಕೀಯಕ್ಕೆ ಬರುವ 20 ವರ್ಷ ಮುಂಚೇ ಅವರು ರಾಜಕೀಯದಲ್ಲಿದ್ದವರು. ಅವರು ಸಮರ್ಥರನ್ನೇ ಮಂತ್ರಿಯಾಗಿ ಮಾಡುತ್ತಾರೆ ಎಂದರು.
19-06-26 04:18 pm
HK News Staffer
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
19-06-26 09:05 pm
HK News Staffer
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
ಬಂಗ್ಲೆಗುಡ್ಡೆ ಅಸ್ಥಿಪಂಜರಗಳ ಗುರುತು ಪತ್ತೆಗಿಳಿದ ಎಸ...
19-06-26 03:31 pm
Mangalore police suspend, Bajpe: ಅಸ್ಸಾಂ ಕಾರ್ಮ...
19-06-26 12:24 pm
Bejai, Kadri Water Issue: ಬಿಜೈ, ಕದ್ರಿಗೆ ಕಲುಷಿ...
18-06-26 12:33 pm
19-06-26 09:07 pm
HK News Staffer
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm
Bhatkal News: ಭಟ್ಕಳದಲ್ಲಿ ಮತ್ತೆ ಕೋಮು ಸಂಘರ್ಷ ;...
18-06-26 01:20 pm
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm