ಬ್ರೇಕಿಂಗ್ ನ್ಯೂಸ್
18-06-22 01:01 pm Bengalore Correspondent ಕರ್ನಾಟಕ
ಬೆಂಗಳೂರು, ಜೂ 18: ರಾಜ್ಯದ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದೆ. ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು ಸುದ್ದಿಗೋಷ್ಠಿ ನಡೆಸಿ ಪರೀಕ್ಷೆ ಫಲಿತಾಂಶ ಪ್ರಕಟಿಸಿದ್ದಾರೆ. ಕಳೆದ ಬಾರಿಯಂತೆ ಈ ಬಾರಿಯೂ ದಕ್ಷಿಣ ಕನ್ನಡ ಜಿಲ್ಲೆ ಮೊದಲ ಸ್ಥಾನ ಗಳಿಸಿದೆ.
6,83,563 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. 4,22,966 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಉತ್ತೀರ್ಣ ಪ್ರಮಾಣ: ಬಾಲಕಿಯರು: ಶೇ.68.72 ಮತ್ತು ಬಾಲಕರು: ಶೇ.55.22 ಇದೆ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ತಿಳಿಸಿದರು.

ಪಿಯುಸಿ ಪರೀಕ್ಷೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶೇ.88.02 ವಿದ್ಯಾರ್ಥಿಗಳು ಪಾಸಾಗುವ ಮೂಲಕ ಮೊದಲ ಸ್ಥಾನದಲ್ಲಿದ್ದರೆ, ಎರಡನೇ ಸ್ಥಾನದಲ್ಲಿ ಉಡುಪಿ (ಶೇ. 86.38) ಇದ್ದರೆ, ಶೇ.49.31 ವಿದ್ಯಾರ್ಥಿಗಳು ಪಾಸಾಗುವ ಮೂಲಕ ಚಿತ್ರದುರ್ಗ ಕೊನೆಯ ಸ್ಥಾನದಲ್ಲಿದೆ.
ರಾಜ್ಯಕ್ಕೆ ಟಾಪರ್ ಇವರು:
ಕಲಾ ವಿಭಾಗದಲ್ಲಿ ಬಳ್ಳಾರಿ ಜಿಲ್ಲೆ ಕೂಡ್ಲಿಗು ತಾಲ್ಲೂಕು ಕೊಟ್ಟೂರು ಇಂದು ಇಂಡಿಪೆಂಡೆಂಟ್ ಪಿಯು ಕಾಲೇಜು ವಿದ್ಯಾರ್ಥಿನಿಯರಾದ ಶ್ವೇತಾ ಭೀಮಶಂಕರ್ ಬೈರಗೊಂಡ ಮತ್ತು ಮಡಿವಾಳರ ಸಹನಾ 600ಕ್ಕೆ 594 ಪಡೆದು ರಾಜ್ಯಕ್ಕೆ ಟಾಪರ್ ಆಗಿದ್ದಾರೆ.
ವಾಣಿಜ್ಯ ವಿಭಾಗದಲ್ಲಿ ಬೆಂಗಳೂರಿನ ದಾಸನಪುರದಲ್ಲಿರುವ ಬಿಜಿಎಸ್ ಪಿಯು ಕಾಲೇಜಿನ ನೀಲು ಸಿಂಗ್, ಜಾಲಹಳ್ಳಿಯಲ್ಲಿರುವ ಸೇಂಟ್ ಕ್ಲಾರೆಟ್ ಕಾಂಪೊಸಿಟ್ ಪಿಯು ಕಾಲೇಜು ವಿದ್ಯಾರ್ಥಿ ಆಕಾಶ್ ದಾಸ್, ಚಿಕ್ಕಬಳ್ಳಾಪುರ ಅಗಲಗುರ್ಕಿ ಎಸ್ಬಿಜಿಎನ್ಎಸ್ ರೂರಲ್ ಕಾಂಪೊಸಿಟ್ ಪಿಯು ಕಾಲೇಜು ವಿದ್ಯಾರ್ಥಿನಿ ನೇಹಾ ಬಿ.ಆರ್. ಮತ್ತು ಜಯನಗರ ಪಿಯು ಕಾಲೇಜಿನ ವಿದ್ಯಾರ್ಥಿ ಮಾನವ್ ವಿಜಯ್ ಕೇಜರಿವಾಲ್ 600ಕ್ಕೆ 596 ರಾಜ್ಯಕ್ಕೆ ಪ್ರಥಮ ಬಂದಿದ್ದಾರೆ.
ಇನ್ನು ವಿಜ್ಞಾನ ವಿಭಾಗದಲ್ಲಿ ಬೆಂಗಳೂರು ಜಯನಗರ ಆರ್.ವಿ. ಪಿಯು ಕಾಲೇಜಿನ ವಿದ್ಯಾರ್ಥಿನಿ ಸಿಮ್ರಾನ್ ಶೀಷಾ ರಾವ್ 600ಕ್ಕೆ 598 ಅಂಕ ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನದಲ್ಲಿದ್ದಾರೆ.
ಕಾಲೇಜುವಾರು ಫಲಿತಾಂಶವನ್ನು ಗಮನಿಸಿದಾಗ ಸರ್ಕಾರಿ ಪದವಿ ಪೂರ್ವ ಕಾಲೇಜು ಶೇ. 52.84, ಅನುದಾನಿತ ಪದವಿ ಪೂರ್ವ ಕಾಲೇಜು ಶೇ. 62.05, ಅನುದಾನ ರಹಿತ ಪದವಿ ಪೂರ್ವ ಕಾಲೇಜು 76.50, ಕಾರ್ಪೊರೇಷನ್ ಪದವಿ ಪೂರ್ವ ಕಾಲೇಜು 55.72, ವಿಭಜಿತ ಪದವಿ ಪೂರ್ವ ಕಾಲೇಜು 72.96 ಬಂದಿದೆ.
For Results visit:
http://karresult.nic.in/
The Department of Pre-University Education (DPUE) has announced the results for the Pre-university course (PUC) II 2022. The +2 result was announced today at 11 am via a press conference.The Karnataka PUC II examinations were successfully conducted from April 16 to May 4, 2022, in a centre based mode. The examination began at 10:15 am and was continued till 1:30 pm.
09-04-26 09:30 pm
HK News Staffer
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆಯಾಗಿದೆ ಎಂಬ ವದಂತಿಗೆ...
08-04-26 09:35 pm
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
09-04-26 11:03 pm
HK News Staffer
ಹರ್ಮುಜ್ ಜಲಸಂಧಿಗೆ ಇರಾನ್ ಸುಂಕ ; ಭಾರತಕ್ಕೆ ಭಾರೀ...
09-04-26 07:43 pm
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
09-04-26 09:16 pm
HK News Staffer
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm