ಬ್ರೇಕಿಂಗ್ ನ್ಯೂಸ್
18-06-22 05:05 pm Bengalore Correspondent ಕರ್ನಾಟಕ
ಬೆಂಗಳೂರು, ಜೂನ್ 18: ಬೆಂಗಳೂರು ನಗರದಲ್ಲಿ ಶುಕ್ರವಾರ ರಾತ್ರಿ ಭಾರೀ ಮಳೆಯಾಗಿದ್ದು, ಹಲವು ಕಡೆಗಳಲ್ಲಿ ಜನವಸತಿ ಬಡಾವಣೆಗಳಿಗೆ ನೀರು ನುಗ್ಗಿದೆ. ಮಳೆಯ ಅನಾಹುತಕ್ಕೆ 24 ವರ್ಷದ ಯುವಕ ಮತ್ತು 55 ವರ್ಷದ ಮಹಿಳೆ ಸಾವು ಕಂಡಿದ್ದಾರೆ.
ಕೆ.ಆರ್ ಪುರಂ ಸಮೀಪದ ಗಾಯತ್ರಿ ಬಡಾವಣೆಯಲ್ಲಿ ರಾತ್ರಿ 12 ಗಂಟೆ ವೇಳೆಗೆ ರಾಜಕಾಲುವೆಯಲ್ಲಿ ನೀರು ಉಕ್ಕಿ ಬಂದಿದ್ದು, ಶಿವಮೊಗ್ಗ ಮೂಲದ ಮಿಥುನ್ (24) ತಾನು ವಾಸವಿದ್ದ ಕಟ್ಟಡದ ಬಳಿ ನೀರು ಬಂದು ಕಂಪೌಂಡ್ ಗೋಡೆ ಬಿದ್ದುದನ್ನು ನೋಡಲು ಹೋಗಿದ್ದ. ಅಲ್ಲಿ ನಿಲ್ಲಿಸಿದ್ದ ಬೈಕ್ ತೆರವು ಮಾಡಲು ಪ್ರಯತ್ನಿಸಿದ್ದು, ಈ ವೇಳೆ ಬೈಕ್ ಸಹಿತ ನೀರಿನಲ್ಲಿ ಯುವಕ ಕೊಚ್ಚಿ ಹೋಗಿದ್ದಾನೆ. ಮಿಥುನ್ ಮತ್ತು ಇತರ ನಾಲ್ವರು ಒಂದೇ ರೂಮಿನಲ್ಲಿದ್ದು ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು.

ಇಂದು ಬೆಳಗ್ಗೆ ಅಗ್ನಿಶಾಮಕ ದಳ ಮತ್ತು ಎಸ್ ಡಿಆರ್ ಎಫ್ ಸಿಬಂದಿ ರಾಜಕಾಲುವೆಯಲ್ಲಿ ಹುಡುಕಾಟ ನಡೆಸಿದ್ದಾರೆ. ರಾಜಕಾಲುವೆ ನಡುವಿನ ಕಬ್ಬಿಣದ ಜಾಲರಿಯಲ್ಲಿ ಹುಡುಕಾಟ ನಡೆಸಿದ್ದು ಯುವಕನ ಪತ್ತೆಯಾಗಿಲ್ಲ. ಬೆಂಗಳೂರು ಪೂರ್ವ ಭಾಗದಲ್ಲಿ ರಾತ್ರಿಯಿಂದ ಬೆಳಗ್ಗಿನ ವರೆಗೂ ಮಳೆಯಾಗಿದ್ದು, ರಾಮಮೂರ್ತಿ ನಗರ, ಕೆ.ಆರ್ ಪುರಂ, ಕಲ್ಕೆರೆ ಭಾಗದಲ್ಲಿ ಮನೆಗಳಿಗೆ ನೀರು ನುಗ್ಗಿದೆ.


ಇದೇ ವೇಳೆ, ರಾತ್ರಿ ಸುರಿದ ಮಳೆಗೆ ಗರುಡಾಚಾರ್ ಪಾಳ್ಯ ಸಮೀಪದ ಕಾವೇರಿ ನಗರದಲ್ಲಿ ಮನೆಯ ಗೋಡೆ ಕುಸಿದು ಮಹಿಳೆ ಮೃತಪಟ್ಟಿದ್ದಾರೆ. ಮುನಿಯಮ್ಮ (55) ಮೃತ ಮಹಿಳೆ. ಮಳೆಗೆ ಮನೆಯ ಗೋಡೆ ಕುಸಿದಿದ್ದು, ಅದರ ಅವಶೇಷಗಳಡಿ ಸಿಲುಕಿ ಮಹಿಳೆ ಸಾವು ಕಂಡಿದ್ದಾರೆ. ಮಹದೇವರ ಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಪ್ರಕರಣ ದಾಖಲಾಗಿದೆ. ಮೊದಲ ಮಳೆಗೇ ಬೆಂಗಳೂರು ನಲುಗಿದ್ದು, ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಅವಾಂತರ ಉಂಟಾಗಿದೆ.
Bangalore heavy rains, water enters into houses, two dead. Bengaluru saw monsoon rainfall for the second consecutive day, making this June one of the wettest on record after a brief lull. On Friday night, much of eastern, western, central, and northern Bengaluru got moderate to heavy rain. According to the BBMP control room, there were no rain-related complaints.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
03-02-26 09:06 pm
HK News Desk
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
03-02-26 11:14 pm
Mangaluru Staffer
Mangalore, Volvo Driver Satish Shetty: ರಸ್ತೆ...
03-02-26 09:49 pm
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm