ಬ್ರೇಕಿಂಗ್ ನ್ಯೂಸ್
20-06-22 01:45 pm Bengalore Correspondent ಕರ್ನಾಟಕ
ಬೆಂಗಳೂರು, ಜೂನ್ 20 : ಪ್ರಧಾನಿ ಮೋದಿ ಭದ್ರತೆಗೆ ನಿಯೋಜನೆಗೊಂಡಿದ್ದ ಬೆಂಗಳೂರು ದಕ್ಷಿಣ ವಿಭಾಗದ ಸೈಬರ್ ಕ್ರೈಂ ಠಾಣೆ ಪಿಎಸ್ಐ ಸುದರ್ಶನ್ ಶೆಟ್ಟಿ (51) ಅವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಯಶವಂತಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆಮ
ಹನುಮಂತನಗರ ಠಾಣೆ ಪಿಎಸ್ಐ ಆಗಿದ್ದ ಸುದರ್ಶನ್ ಅವರನ್ನು ಕೆಲ ತಿಂಗಳ ಹಿಂದೆಯಷ್ಟೇ ನಿಯೋಜನೆ ಮೇರೆಗೆ ಸೈಬರ್ ಕ್ರೈಂ ಠಾಣೆಗೆ ವರ್ಗಾಯಿಸಲಾಗಿತ್ತು. ಎರಡು ದಿನಗಳ ಹಿಂದೆ ಪ್ರಧಾನ ಮಂತ್ರಿಯವರ ಪ್ರವಾಸ ಕಾರ್ಯಕ್ರಮದ ಭದ್ರತೆಗಾಗಿ ಸುದರ್ಶನ್ ಅವರನ್ನು ನಿಯೋಜಿಸಲಾಗಿತ್ತು. ಆದರೆ ತಮಗೆ ಹುಷಾರಿಲ್ಲವೆಂದು ಹೇಳಿ ಕರ್ತವ್ಯಕ್ಕೆ ಗೈರಾಗಿದ್ದ ಅವರು, ಯಶವಂತಪುರದ ತನ್ನ ಮನೆಯಲ್ಲಿ ಉಳಿದುಕೊಂಡಿದ್ದರು.
ಭಾನುವಾರ ಜೂನ್ 19 ರಂದು ವಿಶ್ವ ಅಪ್ಪಂದಿರ ದಿನವಾಗಿದ್ದರಿಂದ, ಸುದರ್ಶನ್ ಅವರು ಮನೆಯಲ್ಲಿ ಮಗನ ಜೊತೆ ಕಾಲ ಕಳೆದಿದ್ದರು. ಮಗನೂ ಶುಭಾಶಯ ತಿಳಿಸಿದ್ದ ಎನ್ನಲಾಗಿದೆ. ಸುದರ್ಶನ್ ಬಳಿಕ ತನ್ನ ಕೊಠಡಿಗೆ ಹೋಗಿ ಬಾಗಿಲು ಹಾಕಿಕೊಂಡಿದ್ದರು. ಮಲಗಲು ಹೋಗಿರಬಹುದೆಂದು ಮಗ ಸುಮ್ಮನಾಗಿದ್ದರು. ಹೊರಗೆ ಬಾರದೇ ಇರುವುದನ್ನು ನೋಡಿ ಕೊಠಡಿ ತೆರೆದು ನೋಡಿದಾಗ ನೇಣು ಬಿಗಿದುಕೊಂಡಿದ್ದು ಕಂಡುಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಸುದರ್ಶನ್ ಶೆಟ್ಟಿ ಕೆಲವು ಸಮಯದಿಂದ ಕುಡಿತದ ಚಟ ಅಂಟಿಸಿಕೊಂಡಿದ್ದರು. ಕರ್ತವ್ಯದ ವೇಳೆಯಲ್ಲಿ ಕುಡಿದಿದ್ದ ಕಾರಣಕ್ಕೆ ಒಮ್ಮೆ ಸಸ್ಪೆಂಡ್ ಆಗಿದ್ದರು. ಇದರಿಂದ ಮಾನಸಿಕವಾಗಿ ನೊಂದಿದ್ದರು ಎನ್ನಲಾಗಿದೆ. ನಿವೃತ್ತ ಯೋಧರಾಗಿದ್ದ ಸುದರ್ಶನ್ ಪೊಲೀಸ್ ಇಲಾಖೆಯಲ್ಲಿ ಸಬ್ ಇನ್ಸ್ಪೆಕ್ಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದರು.
Police constable deployed in PM Modis security in Bangalore commits suicide. The deceased has been identified as Sudarshan Shetty (51).
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 04:39 pm
HK News Staffer
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm