ಬ್ರೇಕಿಂಗ್ ನ್ಯೂಸ್
21-06-22 07:54 pm HK News Desk ಕರ್ನಾಟಕ
ಮಂಡ್ಯ, ಜೂ 21 : ಮಂಡ್ಯ ನಗರದ ಸರಕಾರಿ ಐಟಿಐ ಕಾಲೇಜಿನ ಪ್ರಾಂಶುಪಾಲರಿಗೆ ಮಂಡ್ಯ ಶಾಸಕ, ಜೆಡಿಎಸ್ ನಾಯಕ ಎಂ. ಶ್ರೀನಿವಾಸ್ ಕಪಾಳಮೋಕ್ಷ ಮಾಡಿರುವ ಘಟನೆ ಸೋಮವಾರ ನಡೆದಿದೆ.
ಮಂಡ್ಯದ ಉನ್ನತೀಕರಿಸಿದ ನಾಲ್ವಡಿ ಕೃಷ್ಣರಾಜ ಒಡೆಯರ್ ಐಟಿಐ ಕಾಲೇಜು ಉದ್ಘಾಟನೆ ವೇಳೆ ಶಾಸಕ ಎಂ. ಶ್ರೀನಿವಾಸ್ ಕೇಂದ್ರದ ಪ್ರಾಂಶುಪಾಲ ನಾಗಾನಂದ್ ಮೇಲೆ ಹಲ್ಲೆ ನಡೆಸಿದ್ದಾರೆ. ಐಟಿಐ ಕೇಂದ್ರಕ್ಕೆ ಆಗಮಿಸಿದ ಶಾಸಕ ಕೇಂದ್ರವನ್ನು ಉದ್ಘಾಟಿಸಿದರು. ನಂತರ ನಗರಸಭಾಧ್ಯಕ್ಷ ಎಚ್.ಎಸ್. ಮಂಜು ಕಂಪ್ಯೂಟರ್ ಲ್ಯಾಬ್ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಶಾಸಕ ಮತ್ತು ನಗರಸಭಾಧ್ಯಕ್ಷ ಪ್ರಯೋಗಾಲಯದ ಒಳಗೆ ತೆರಳಿದದರು, ಆದರೆ ಕಿರಿದಾದ ಜಾಗವಾಗಿದ್ದರಿಂದ ಪ್ರಾಂಶುಪಾಲರು ಮುಂದೆ ಬರಲು ಸಾಧ್ಯವಾಗಲಿಲ್ಲ. ಈ ವೇಳೆ ಕಂಪ್ಯೂಟರ್ ಕೊಠಡಿ ವೀಕ್ಷಣೆ ವೇಳೆ ಮಾಹಿತಿಗಾಗಿ ಪ್ರಾಂಶುಪಾಲರನ್ನು ಹುಡುಕಾಡಿದ್ದಾರೆ.

ತಡವಾಗಿ ಮುಂದೆ ಬಂದಿದ್ದರಿಂದ ಕುಪಿತಗೊಂಡ ಶ್ರೀನಿವಾಸ್ ಪ್ರಾಂಶುಪಾಲರಾದ ನಾಗಾನಂದ್ ಮುಂದೆ ಬರುತ್ತಿದ್ದಂತೆ ಅವರಿಗೆ ಮೂರ್ನಾಲ್ಕು ಏಟುಕೊಟ್ಟಿದ್ದಾರೆ. ಬಂದ ಅತಿಥಿಗಳಿಗೆ ಇಲ್ಲಿನ ಕಾರ್ಯಕ್ಷೇತ್ರ ಮತ್ತು ಕಾರ್ಯಕ್ಷಮತೆ ಬಗ್ಗೆ ವಿವರಿಸದ ಪ್ರಾಂಶುಪಾಲರ ಕ್ರಮಕ್ಕೆ ಶಾಸಕ ಕೋಪಗೊಂಡಿಡು ಕೈ ಮಾಡಿದ್ದಾರೆ.
ಶಾಸಕರ ದಿಢೀರ್ ಕೋಪದಿಂದ ಒಂದು ಕ್ಷಣ ಗಲಿಬಿಲಿಗೊಂಡ ಪ್ರಾಂಶುಪಾಲರು ನಗುತ್ತಲೇ ಪರಿಸ್ಥಿತಿ ತಿಳಿಗೊಳಿಸುವಲ್ಲಿ ಯಶಸ್ವಿಯಾದರು. ನಂತರ ಶಾಸಕರು ಮತ್ತು ಅತಿಥಿಗಳು ಕೇಂದ್ರದಲ್ಲಿರುವ ಎಲ್ಲಾ ವಿಭಾಗಗಳಿಗೂ ಭೇಟಿ ನೀಡಿ ಪ್ರಾಂಶುಪಾಲರು, ಅಧ್ಯಾಪಕರದಿಂದ ವಿವರಣೆ ಪಡೆದು ತೃಪ್ತರಾಗಿ ಹೊರನಡೆದರು.
A JD(S) MLA in Karnataka slapped a college principal who was not able to provide clear answer about the ongoing development work for a computer lab. The incident, which happened on Monday, has created a huge outrage among the public.
21-06-26 02:18 pm
HK News Staffer
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
21-06-26 08:59 pm
HK News Staffer
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm