ಬ್ರೇಕಿಂಗ್ ನ್ಯೂಸ್
21-06-22 07:54 pm HK News Desk ಕರ್ನಾಟಕ
ಮಂಡ್ಯ, ಜೂ 21 : ಮಂಡ್ಯ ನಗರದ ಸರಕಾರಿ ಐಟಿಐ ಕಾಲೇಜಿನ ಪ್ರಾಂಶುಪಾಲರಿಗೆ ಮಂಡ್ಯ ಶಾಸಕ, ಜೆಡಿಎಸ್ ನಾಯಕ ಎಂ. ಶ್ರೀನಿವಾಸ್ ಕಪಾಳಮೋಕ್ಷ ಮಾಡಿರುವ ಘಟನೆ ಸೋಮವಾರ ನಡೆದಿದೆ.
ಮಂಡ್ಯದ ಉನ್ನತೀಕರಿಸಿದ ನಾಲ್ವಡಿ ಕೃಷ್ಣರಾಜ ಒಡೆಯರ್ ಐಟಿಐ ಕಾಲೇಜು ಉದ್ಘಾಟನೆ ವೇಳೆ ಶಾಸಕ ಎಂ. ಶ್ರೀನಿವಾಸ್ ಕೇಂದ್ರದ ಪ್ರಾಂಶುಪಾಲ ನಾಗಾನಂದ್ ಮೇಲೆ ಹಲ್ಲೆ ನಡೆಸಿದ್ದಾರೆ. ಐಟಿಐ ಕೇಂದ್ರಕ್ಕೆ ಆಗಮಿಸಿದ ಶಾಸಕ ಕೇಂದ್ರವನ್ನು ಉದ್ಘಾಟಿಸಿದರು. ನಂತರ ನಗರಸಭಾಧ್ಯಕ್ಷ ಎಚ್.ಎಸ್. ಮಂಜು ಕಂಪ್ಯೂಟರ್ ಲ್ಯಾಬ್ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಶಾಸಕ ಮತ್ತು ನಗರಸಭಾಧ್ಯಕ್ಷ ಪ್ರಯೋಗಾಲಯದ ಒಳಗೆ ತೆರಳಿದದರು, ಆದರೆ ಕಿರಿದಾದ ಜಾಗವಾಗಿದ್ದರಿಂದ ಪ್ರಾಂಶುಪಾಲರು ಮುಂದೆ ಬರಲು ಸಾಧ್ಯವಾಗಲಿಲ್ಲ. ಈ ವೇಳೆ ಕಂಪ್ಯೂಟರ್ ಕೊಠಡಿ ವೀಕ್ಷಣೆ ವೇಳೆ ಮಾಹಿತಿಗಾಗಿ ಪ್ರಾಂಶುಪಾಲರನ್ನು ಹುಡುಕಾಡಿದ್ದಾರೆ.

ತಡವಾಗಿ ಮುಂದೆ ಬಂದಿದ್ದರಿಂದ ಕುಪಿತಗೊಂಡ ಶ್ರೀನಿವಾಸ್ ಪ್ರಾಂಶುಪಾಲರಾದ ನಾಗಾನಂದ್ ಮುಂದೆ ಬರುತ್ತಿದ್ದಂತೆ ಅವರಿಗೆ ಮೂರ್ನಾಲ್ಕು ಏಟುಕೊಟ್ಟಿದ್ದಾರೆ. ಬಂದ ಅತಿಥಿಗಳಿಗೆ ಇಲ್ಲಿನ ಕಾರ್ಯಕ್ಷೇತ್ರ ಮತ್ತು ಕಾರ್ಯಕ್ಷಮತೆ ಬಗ್ಗೆ ವಿವರಿಸದ ಪ್ರಾಂಶುಪಾಲರ ಕ್ರಮಕ್ಕೆ ಶಾಸಕ ಕೋಪಗೊಂಡಿಡು ಕೈ ಮಾಡಿದ್ದಾರೆ.
ಶಾಸಕರ ದಿಢೀರ್ ಕೋಪದಿಂದ ಒಂದು ಕ್ಷಣ ಗಲಿಬಿಲಿಗೊಂಡ ಪ್ರಾಂಶುಪಾಲರು ನಗುತ್ತಲೇ ಪರಿಸ್ಥಿತಿ ತಿಳಿಗೊಳಿಸುವಲ್ಲಿ ಯಶಸ್ವಿಯಾದರು. ನಂತರ ಶಾಸಕರು ಮತ್ತು ಅತಿಥಿಗಳು ಕೇಂದ್ರದಲ್ಲಿರುವ ಎಲ್ಲಾ ವಿಭಾಗಗಳಿಗೂ ಭೇಟಿ ನೀಡಿ ಪ್ರಾಂಶುಪಾಲರು, ಅಧ್ಯಾಪಕರದಿಂದ ವಿವರಣೆ ಪಡೆದು ತೃಪ್ತರಾಗಿ ಹೊರನಡೆದರು.
A JD(S) MLA in Karnataka slapped a college principal who was not able to provide clear answer about the ongoing development work for a computer lab. The incident, which happened on Monday, has created a huge outrage among the public.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
11-11-25 03:28 pm
HK News Desk
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
ದೆಹಲಿಯಲ್ಲಿ ಭಾರೀ ಬಾಂಬ್ ಸ್ಫೋಟ ; ಛಿದ್ರಗೊಂಡು ಚದುರ...
10-11-25 09:08 pm
ರಾಜಧಾನಿ ದೆಹಲಿಯಲ್ಲಿ ಪ್ರಬಲ ಬಾಂಬ್ ಸ್ಫೋಟ ; ಒಂಬತ್ತ...
10-11-25 08:23 pm
ಫರಿದಾಬಾದ್ ; ಕಾಶ್ಮೀರಿ ವೈದ್ಯನ ಮಾಹಿತಿಯಂತೆ 300 ಕ...
10-11-25 03:04 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm