ಬ್ರೇಕಿಂಗ್ ನ್ಯೂಸ್
23-06-22 02:02 pm HK News Desk ಕರ್ನಾಟಕ
ಬೆಳಗಾವಿ, ಜೂನ್ 23: ಗ್ರಾಮ ಪಂಚಾಯಿತಿ ಸದಸ್ಯರೊಬ್ಬರು ತಮ್ಮ ಸಾಕು ನಾಯಿಯ ಹುಟ್ಟುಹಬ್ಬವನ್ನು ಅದ್ಧೂರಿಯಾಗಿ ಆಚರಣೆ ಮಾಡುವ ಮೂಲಕ ಗಮನ ಸೆಳೆದಿದ್ದಾರೆ. ಬರೋಬ್ಬರಿ 5000 ಮಂದಿಗೆ ಊಟ ಹಾಕಿಸಿ ಪ್ರೀತಿ ಮರೆದಿದ್ದು ಚಾರ್ಲಿ ಸಿನಿಮಾ ಹಿನ್ನೆಲೆಯಲ್ಲಿ ಸುದ್ದಿಗೆ ಗ್ರಾಸವಾಗಿದೆ.
ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ತುಕ್ಕಾನಟ್ಟಿಯಲ್ಲಿ ಈ ಪ್ರಸಂಗ ನಡೆದಿದೆ. ಸ್ಥಳೀಯ ಗ್ರಾಮ ಪಂಚಾಯಿತಿಯಲ್ಲಿ 20 ವರ್ಷಗಳಿಂದ ಸದಸ್ಯರಾಗಿರುವ ಶಿವಪ್ಪ ಮರ್ದಿ ಎಂಬವರು, ತಮ್ಮ ಸಾಕು ನಾಯಿ 'ಕ್ರಿಶ್' ಹುಟ್ಟುಹಬ್ಬವನ್ನು ಅದ್ಧೂರಿಯಾಗಿ ಆಚರಿಸಿದ್ದಾರೆ.
ನಾಯಿಯ ಜನ್ಮದಿನಕ್ಕೆ 1 ಕ್ವಿಂಟಲ್ ತೂಕದ ಕೇಕ್ ಕತ್ತರಿಸಿದ್ದಲ್ಲದೇ ಗ್ರಾಮದ 5 ಸಾವಿರ ಮಂದಿಗೆ ಊಟ ಹಾಕಿಸಿದ್ದಾರೆ. 3 ಕ್ವಿಂಟಾಲ್ ಚಿಕನ್, 1 ಕ್ವಿಂಟಾಲ್ ಮೊಟ್ಟೆ, ಸಸ್ಯಾಹಾರಿಗಳಿಗೆ 50 ಕೆಜಿ ಕಾಜೂ ಕರಿ ಊಟ ಹಾಕಿಸಿದ್ದಾರೆ. ಕೇಕ್ ಕತ್ತರಿಸಿದ ನಂತರ ನಾಯಿಗೆ ಗ್ರಾಮದಲ್ಲಿ ವಾದ್ಯಗಳ ಮೂಲಕ ಅದ್ಧೂರಿಯಾಗಿ ಮೆರವಣಿಗೆಯನ್ನು ಸಹ ಮಾಡಿಸಲಾಗಿದೆ. ಈ ವೇಳೆ ಊರಿನ ಜನರೆಲ್ಲ ಭಾಗಿಯಾಗಿ ಕುಣಿದು ಕುಪ್ಪಳಿಸಿದ್ದಾರೆ.
ನಾಯಿ ಮಾಲೀಕ ಶಿವಪ್ಪ ಮರ್ದಿ ಕಳೆದ 20 ವರ್ಷಗಳಿಂದ ಸ್ಥಳೀಯ ಗ್ರಾಮ ಪಂಚಾಯತ್ ಸದಸ್ಯ. ಈ ವೇಳೆ ನೂತನ ಸದಸ್ಯರೊಬ್ಬರು ತಮ್ಮ ಹುಟ್ಟುಹಬ್ಬದ ಸಂದರ್ಭದಲ್ಲಿ ಹಳೆ ಸದಸ್ಯರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದರು. ಹಿಂದಿನ ಸದಸ್ಯರು ನಾಯಿಯಂತೆ ತಿಂದು ಹೋಗಿದ್ದಾರೆಂದು ಅವಮಾನ ಮಾಡಿದ್ದರು ಎನ್ನಲಾಗಿದೆ. ಹೀಗಾಗಿ ಅವರಿಗೆ ಪ್ರತ್ಯುತ್ತರ ಕೊಡುವ ಸಲುವಾಗಿ ಶಿವಪ್ಪ ಮರ್ದಿ ನಾಯಿಯ ಹುಟ್ಟು ಹಬ್ಬವನ್ನು ಅದ್ಧೂರಿಯಾಗಿ ಆಚರಣೆ ಮಾಡಿದ್ದಲ್ಲದೇ ಐದು ಸಾವಿರ ಜನರಿಗೆ ಬಾಡೂಟದ ವ್ಯವಸ್ಥೆ ಮಾಡಿದ್ದಾರೆ ಎನ್ನುವ ಮಾತು ಕೇಳಿಬಂದಿದೆ.
A man threw an extravagant #birthdayparty for his #petdog by cutting a 100 kg cake and feeding 4000 people with veg & non veg food in Mudalagi taluk #Belagavi #Karnataka. Later, Shivappa Mardi along with his dog Krish went on a procession with a music band. pic.twitter.com/NPX1M5iKk8
— Imran Khan (@KeypadGuerilla) June 23, 2022
A man threw an extravagant birthday party for his petdog by cutting a 100 kg cake and feeding 5000 people with veg & non veg food in Mudalagi taluk Belagavi Karnataka. Later, Shivappa Mardi along with his dog Krish went on a procession with a music band.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
03-02-26 09:06 pm
HK News Desk
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
03-02-26 11:14 pm
Mangaluru Staffer
Mangalore, Volvo Driver Satish Shetty: ರಸ್ತೆ...
03-02-26 09:49 pm
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm