ಬ್ರೇಕಿಂಗ್ ನ್ಯೂಸ್
25-06-22 03:02 pm Bengalore Correspondent ಕರ್ನಾಟಕ
ಬೆಂಗಳೂರು, ಜೂ 25: ದಕ್ಷಿಣ ಭಾರತದ ದೊಡ್ಡ ರಿಯಲ್ ಎಸ್ಟೇಟ್ ಕಂಪನಿಗಳಲ್ಲಿ ಒಂದಾಗಿರುವ ಮಂತ್ರಿ ಗ್ರೂಪ್ ವ್ಯವಸ್ಥಾಪಕ ನಿರ್ದೇಶಕ ಸುಶೀಲ್ ಪಾಂಡುರಂಗ್ ಅವರನ್ನು ಜಾರಿ ನಿರ್ದೇಶನಾಲಯ(ಇಡಿ) ಬಂಧಿಸಿದೆ.
ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶುಕ್ರವಾರ ಹಾಜರಾಗುವಂತೆ ಇಡಿ ಸಮನ್ಸ್ ಜಾರಿ ಮಾಡಿತ್ತು. ನಿನ್ನೆ ವಿಚಾರಣೆಗೆ ಹಾಜರಾಗಿದ್ದ ಸುಶೀಲ್ ಪಾಂಡುರಂಗ್ ಅವರನ್ನು ಬಂಧಿಸಿದ್ದ ಇಡಿ ಅಧಿಕಾರಿಗಳು ಇಂದು ಕೋರ್ಟ್ಗೆ ಹಾಜರು ಪಡಿಸಿದರು. ಕೋರ್ಟ್ 10 ದಿನಗಳ ಕಾಲ ಇಡಿ ವಶಕ್ಕೆ ನೀಡಿದೆ.
![]()
ಜನರಿಂದ ಹಣ ಪಡೆದು ಫ್ಲಾಟ್ ಕೊಡದೇ ವಂಚನೆ ಮಾಡಿರುವ ಆರೋಪ ಕೇಳಿ ಬಂದಿತ್ತು. ಈ ಬಗ್ಗೆ ಸುಬ್ರಹ್ಮಣ್ಯನಗರ ಪೊಲೀಸ್ ಠಾಣೆಯಲ್ಲಿ ವಂಚನೆ ಪ್ರಕರಣ ದಾಖಲಾಗಿತ್ತು. ಸಾರ್ವಜನಿಕರು ಇಡಿಗೂ ದೂರು ನೀಡಿದ್ದರು.

ತೆರಿಗೆ ವಂಚನೆ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಕಳೆದ ವರ್ಷ ಆದಾಯ ತೆರಿಗೆ ಇಲಾಖೆ ಮಂತ್ರಿ ಗ್ರೂಪ್ ಕಟ್ಟಡಗಳ ಮೇಲೆ ದಾಳಿ ಮಾಡಿತ್ತು. ಈ ಸಂದರ್ಭದಲ್ಲಿ ಬಹುತೇಕ ವ್ಯವಹಾರಗಳು ನಗದು ರೂಪದಲ್ಲಿ ನಡೆದಿರುವುದು ಪತ್ತೆಯಾಗಿತ್ತು. ಐಟಿ ದಾಳಿ ವೇಳೆ ಹಲವು ಮಹತ್ವದ ದಾಖಲೆಗಳು ಲಭ್ಯವಾಗಿತ್ತು. ಅಷ್ಟೇ ಅಲ್ಲದೇ ಹವಾಲ ರೂಪದಲ್ಲಿ ಹಣ ವರ್ಗಾವಣೆ ಆಗಿರುವ ಬಗ್ಗೆಯೂ ಅನುಮಾನ ಬಂದಿತ್ತು.
ಸಾಕಷ್ಟು ಜನರಿಗೆ ಮಂತ್ರಿ ಗ್ರೂಪ್ನಲ್ಲಿ ಫ್ಲಾಟ್ ಮಾರಾಟ ಮಾಡಿದ್ದರೂ ಹಣಕಾಸು ವ್ಯವಹಾರದಲ್ಲಿ ಸಾಕಷ್ಟು ವ್ಯತ್ಯಾಸ ಕಂಡು ಬಂದಿತ್ತು. ಅ ಹಣದ ವ್ಯವಹಾರದ ಬಗ್ಗೆ ಐಟಿ ಅಧಿಕಾರಿಗಳಿಗೆ ಸೂಕ್ತ ದಾಖಲೆ ಕೊಡುವಲ್ಲಿ ಸುಶೀಲ್ ಪಾಂಡುರಂಗ್ ವಿಫಲರಾಗಿದ್ದರು. ಈ ಕಾರಣಕ್ಕೆ ಶುಕ್ರವಾರ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿಯಾಗಿತ್ತು.
Sushil Mantri, CEO and Managing Director of Mantri Developers, has been arrested by the Enforcement Directorate. Sources in the ED said that the south India's biggest real estate tycoon was held in a money laundering case. He has been produced before the judge who has remanded him to the ED custody for investigation.
09-04-26 09:30 pm
HK News Staffer
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆಯಾಗಿದೆ ಎಂಬ ವದಂತಿಗೆ...
08-04-26 09:35 pm
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
09-04-26 11:03 pm
HK News Staffer
ಹರ್ಮುಜ್ ಜಲಸಂಧಿಗೆ ಇರಾನ್ ಸುಂಕ ; ಭಾರತಕ್ಕೆ ಭಾರೀ...
09-04-26 07:43 pm
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
09-04-26 09:16 pm
HK News Staffer
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm