ಬ್ರೇಕಿಂಗ್ ನ್ಯೂಸ್
25-06-22 03:02 pm Bengalore Correspondent ಕರ್ನಾಟಕ
ಬೆಂಗಳೂರು, ಜೂ 25: ದಕ್ಷಿಣ ಭಾರತದ ದೊಡ್ಡ ರಿಯಲ್ ಎಸ್ಟೇಟ್ ಕಂಪನಿಗಳಲ್ಲಿ ಒಂದಾಗಿರುವ ಮಂತ್ರಿ ಗ್ರೂಪ್ ವ್ಯವಸ್ಥಾಪಕ ನಿರ್ದೇಶಕ ಸುಶೀಲ್ ಪಾಂಡುರಂಗ್ ಅವರನ್ನು ಜಾರಿ ನಿರ್ದೇಶನಾಲಯ(ಇಡಿ) ಬಂಧಿಸಿದೆ.
ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶುಕ್ರವಾರ ಹಾಜರಾಗುವಂತೆ ಇಡಿ ಸಮನ್ಸ್ ಜಾರಿ ಮಾಡಿತ್ತು. ನಿನ್ನೆ ವಿಚಾರಣೆಗೆ ಹಾಜರಾಗಿದ್ದ ಸುಶೀಲ್ ಪಾಂಡುರಂಗ್ ಅವರನ್ನು ಬಂಧಿಸಿದ್ದ ಇಡಿ ಅಧಿಕಾರಿಗಳು ಇಂದು ಕೋರ್ಟ್ಗೆ ಹಾಜರು ಪಡಿಸಿದರು. ಕೋರ್ಟ್ 10 ದಿನಗಳ ಕಾಲ ಇಡಿ ವಶಕ್ಕೆ ನೀಡಿದೆ.
![]()
ಜನರಿಂದ ಹಣ ಪಡೆದು ಫ್ಲಾಟ್ ಕೊಡದೇ ವಂಚನೆ ಮಾಡಿರುವ ಆರೋಪ ಕೇಳಿ ಬಂದಿತ್ತು. ಈ ಬಗ್ಗೆ ಸುಬ್ರಹ್ಮಣ್ಯನಗರ ಪೊಲೀಸ್ ಠಾಣೆಯಲ್ಲಿ ವಂಚನೆ ಪ್ರಕರಣ ದಾಖಲಾಗಿತ್ತು. ಸಾರ್ವಜನಿಕರು ಇಡಿಗೂ ದೂರು ನೀಡಿದ್ದರು.

ತೆರಿಗೆ ವಂಚನೆ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಕಳೆದ ವರ್ಷ ಆದಾಯ ತೆರಿಗೆ ಇಲಾಖೆ ಮಂತ್ರಿ ಗ್ರೂಪ್ ಕಟ್ಟಡಗಳ ಮೇಲೆ ದಾಳಿ ಮಾಡಿತ್ತು. ಈ ಸಂದರ್ಭದಲ್ಲಿ ಬಹುತೇಕ ವ್ಯವಹಾರಗಳು ನಗದು ರೂಪದಲ್ಲಿ ನಡೆದಿರುವುದು ಪತ್ತೆಯಾಗಿತ್ತು. ಐಟಿ ದಾಳಿ ವೇಳೆ ಹಲವು ಮಹತ್ವದ ದಾಖಲೆಗಳು ಲಭ್ಯವಾಗಿತ್ತು. ಅಷ್ಟೇ ಅಲ್ಲದೇ ಹವಾಲ ರೂಪದಲ್ಲಿ ಹಣ ವರ್ಗಾವಣೆ ಆಗಿರುವ ಬಗ್ಗೆಯೂ ಅನುಮಾನ ಬಂದಿತ್ತು.
ಸಾಕಷ್ಟು ಜನರಿಗೆ ಮಂತ್ರಿ ಗ್ರೂಪ್ನಲ್ಲಿ ಫ್ಲಾಟ್ ಮಾರಾಟ ಮಾಡಿದ್ದರೂ ಹಣಕಾಸು ವ್ಯವಹಾರದಲ್ಲಿ ಸಾಕಷ್ಟು ವ್ಯತ್ಯಾಸ ಕಂಡು ಬಂದಿತ್ತು. ಅ ಹಣದ ವ್ಯವಹಾರದ ಬಗ್ಗೆ ಐಟಿ ಅಧಿಕಾರಿಗಳಿಗೆ ಸೂಕ್ತ ದಾಖಲೆ ಕೊಡುವಲ್ಲಿ ಸುಶೀಲ್ ಪಾಂಡುರಂಗ್ ವಿಫಲರಾಗಿದ್ದರು. ಈ ಕಾರಣಕ್ಕೆ ಶುಕ್ರವಾರ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿಯಾಗಿತ್ತು.
Sushil Mantri, CEO and Managing Director of Mantri Developers, has been arrested by the Enforcement Directorate. Sources in the ED said that the south India's biggest real estate tycoon was held in a money laundering case. He has been produced before the judge who has remanded him to the ED custody for investigation.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
03-02-26 09:06 pm
HK News Desk
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
03-02-26 11:14 pm
Mangaluru Staffer
Mangalore, Volvo Driver Satish Shetty: ರಸ್ತೆ...
03-02-26 09:49 pm
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm