ಬ್ರೇಕಿಂಗ್ ನ್ಯೂಸ್
28-06-22 04:42 pm Bangalore Correspondent ಕರ್ನಾಟಕ
ಬೆಂಗಳೂರು, ಜೂ 28: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ನಡುವೆ, ದೇಶದೆಲ್ಲೆಡೆ ಎಲೆಕ್ಟ್ರಾನಿಕ್ ವಾಹನಗಳು ದಿನದಿಂದ ದಿನಕ್ಕೆ ಪ್ರಾಮುಖ್ಯತೆ ಪಡೆದುಕೊಳ್ಳುತ್ತಲೇ ಇವೆ. ಕರ್ನಾಟಕವು ಇವಿ ವಾಹನಗಳ ಮಾರಾಟದಲ್ಲಿ ಮುಂಚೂಣಿಯಲ್ಲಿದೆ ಎಂದು ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಕೂ (KOO) ಮಾಡಿದ್ದಾರೆ.
ಬಳಕೆ ಖರ್ಚು ಕಡಿಮೆ ಮಾಡುವ ಜೊತೆಗೆ ಎಲೆಕ್ಟ್ರಾನಿಕ್ ವಾಹನಗಳು ಪರಿಸರ ಸ್ನೇಹಿ, ವಾಯುಮಾಲಿನ್ಯ ನಿಯಂತ್ರಣದಲ್ಲೂ ಪರಿಣಾಮಕಾರಿಯಾಗಲಿದೆ. ಹೀಗಾಗಿ ಸರ್ಕಾರವು ಇವಿ ವಾಹನಗಳ ಬಳಕೆಗೆ ಸಾಕಷ್ಟು ಉತ್ತೇಜನ ನೀಡುತ್ತಿದ್ದು, ಜನರು ಸಹ ಇವಿ ವಾಹನಗಳ ಕಡೆಗೆ ಒಲವು ಹೆಚ್ಚಿಸಿಕೊಂಡಿದ್ದಾರೆ.

ವಾಹನ ತಯಾರಿಕಾ ಕಂಪೆನಿಗಳೂ ಇವಿ ತಯಾರಿಕೆಗೆ ಹೆಚ್ಚು ಪ್ರಾಮುಖ್ಯತೆ ನೀಡುತ್ತಿವೆ. ಪ್ರೀ ಬುಕ್ಕಿಂಗ್ ಇರುವವರಿಗೆ ವಾಹನ ಒದಗಿಸಲು ಹೆಣಗಾಡುವಂತಹ ರೀತಿಯಲ್ಲಿ ಬೇಡಿಕೆ ಹೆಚ್ಚಾಗುತ್ತಿದೆ. ದೇಶದ ಎಲ್ಲ ಭಾಗಗಳಲ್ಲಿಯೂ ಇವಿ ಬಳಕೆ ಹೆಚ್ಚುತ್ತಿದೆ. ಕರ್ನಾಟಕವು ಇದಕ್ಕೆ ಹೊರತಾಗಿಲ್ಲ. ಈಗಾಗಲೇ 1 ಲಕ್ಷಕ್ಕೂ ಹೆಚ್ಚು ಇವಿ ವಾಹನಗಳು ನೋಂದಣಿಯಾಗಿವೆ ಎಂದು ಸಚಿವ ಮುರುಗೇಶ್ ನಿರಾಣಿ ತಮ್ಮ ಕೂ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

ಇವಿಗಳು ಭವಿಷ್ಯದಲ್ಲಿ ಕರ್ನಾಟಕದ ಪ್ರಮುಖ ಭಾಗವಾಗಿ ಮುಂದುವರೆಯಲಿದೆ. ಕರ್ನಾಟಕದಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಇವಿ ವಾಹನಗಳ ನೋಂದಣಿಯಾಗಿವೆ. ಕೈಗಾರಿಕಾ ಸ್ನೇಹಿ ವಾತಾವರಣ ಹಾಗೂ ಉದ್ಯಮ ಸ್ನೇಹಿ ನೀತಿಗಳು ಕರ್ನಾಟಕವು ಭಾರತದಲ್ಲಿ ಇವಿ ಹಬ್ ಆಗಿ ಬೆಳೆಯಲು ಪ್ರಮುಖ ಕಾರಣವಾಗಿದೆ' ಎಂದು ಹೇಳಿದ್ದಾರೆ.
Karnataka Over 1 lakh electric vehicles registered in Karnataka says minister Murugesh Nirani. Karnataka was the first state to issue an Electric Vehicle policy that included incentives for manufacturers and also encouraged EV startups.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
03-02-26 09:06 pm
HK News Desk
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
03-02-26 11:14 pm
Mangaluru Staffer
Mangalore, Volvo Driver Satish Shetty: ರಸ್ತೆ...
03-02-26 09:49 pm
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm