ಬ್ರೇಕಿಂಗ್ ನ್ಯೂಸ್
28-06-22 07:49 pm HK News Desk ಕರ್ನಾಟಕ
ಕಾರವಾರ, ಜೂನ್ 28 : ಒಂದೆಡೆ ಅಗ್ನಿಪಥ್ ಯೋಜನೆಯ ಬಗ್ಗೆ ಪರ-ವಿರೋಧ ಚರ್ಚೆಗಳು ನಡೆಯುತ್ತಲೇ ಇವೆ. ಇದೇ ವೇಳೆ, ಮತ್ತೊಂದೆಡೆ ದೇಶದ ರಕ್ಷಣಾ ಪಡೆಗಳು ಅಗ್ನಿಪಥ್ ಪ್ರಕಾರ ನೇಮಕಾತಿ ಪ್ರಕ್ರಿಯೆಗೂ ಚಾಲನೆ ನೀಡಿವೆ. ಆಕಾಂಕ್ಷಿಗಳು ಅರ್ಜಿ ಸಲ್ಲಿಸುವುದನ್ನೂ ಆರಂಭಿಸಿದ್ದಾರೆ.
ಇದೇ ವೇಳೆ, ಕರ್ನಾಟಕ ಸರಕಾರ ಮತ್ತೊಂದು ಹೆಜ್ಜೆ ಮುಂದಿಟ್ಟಿದ್ದು ಕರಾವಳಿಯ ಮೂರು ಜಿಲ್ಲೆಗಳಲ್ಲಿ ಹೊಸತಾಗಿ ಸೈನಿಕ ತರಬೇತಿ ಶಾಲೆಯನ್ನು ಆರಂಭಿಸಲು ಮುಂದಾಗಿದೆ. ರಾಜ್ಯ ಸರ್ಕಾರದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸೇನಾ ಪೂರ್ವ ತರಬೇತಿಗಾಗಿ ಸೈನಿಕ ತರಬೇತಿ ಶಾಲೆಗಳನ್ನು ಆರಂಭಿಸುತ್ತಿದೆ. ಈ ಶಾಲೆಗಳಲ್ಲಿ ಆಕಾಂಕ್ಷಿ ಯುವಕರಿಗೆ ಉಚಿತ ತರಬೇತಿ ನೀಡಲಾಗುತ್ತದೆ.

ಕೇಂದ್ರ ಸರ್ಕಾರದ ಅಗ್ನಿಪಥ್ ಯೋಜನೆಯಡಿ ಆಕಾಂಕ್ಷಿಗಳಿಗೆ ಸೇನಾ ಆಯ್ಕೆ ಪೂರ್ವ ತರಬೇತಿ ಸಲುವಾಗಿ ಕರಾವಳಿ ಜಿಲ್ಲೆಗಳಲ್ಲಿ ತರಬೇತಿ ಶಾಲೆ ಆರಂಭಿಸಲು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಮುಂದಾಗಿದ್ದು ಈ ಸಂಬಂಧ ಆದೇಶವನ್ನೂ ಹೊರಡಿಸಲಾಗಿದೆ. ಇನ್ನೊಂದು ತಿಂಗಳಲ್ಲೇ ಅನುಷ್ಠಾನ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎನ್ನುವ ಮಾಹಿತಿಗಳಿವೆ.
ಸೈನಿಕ ತರಬೇತಿ ಶಾಲೆಗಳಿಗೆ ಸ್ಥಳೀಯ ಸ್ವತಂತ್ರ ಹೋರಾಟಗಾರರು, ವೀರ ಪುರುಷರ ಹೆಸರನ್ನಿಡಲು ಸರಕಾರ ನಿರ್ಧರಿಸಿದ್ದು, ಉತ್ತರ ಕನ್ನಡ ಜಿಲ್ಲೆಯ ಶಾಲೆಗೆ ಬ್ರಿಟಿಷರ ವಿರುದ್ಧ ಹೋರಾಡಿದ ಹೆಂಜಾ ನಾಯ್ಕ, ಉಡುಪಿ ಜಿಲ್ಲೆಯಲ್ಲಿ ತುಳುನಾಡಿನ ವೀರ ಪುರುಷರಾದ ಕೋಟಿ ಚೆನ್ನಯ್ಯ, ದಕ್ಷಿಣ ಕನ್ನಡ ಜಿಲ್ಲೆಯ ಶಾಲೆಗೆ ವೀರರಾಣಿ ಅಬ್ಬಕ್ಕ ಹೆಸರಿಡಲಾಗುವುದು. ಶಾಲೆ ಪ್ರಾರಂಭಿಸಲು ಆಯಾ ಜಾಗದಲ್ಲಿ ಸೂಕ್ತ ಸ್ಥಳವನ್ನ ಶೋಧ ಮಾಡಲಾಗಿದೆ.

ರಾಜ್ಯದ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಸೇನೆ, ಇನ್ನಿತರ ಭದ್ರತಾ ವಿಭಾಗದ ಸೇವೆಗಳಿಗೆ ಸೇರಲು ಪ್ರೋತ್ಸಾಹಿಸುವುದಕ್ಕಾಗಿ ತರಬೇತಿ ಶಾಲೆಯನ್ನು ಆರಂಭಿಸಲಾಗುತ್ತಿದೆ. ರಾಜ್ಯದ ಎಲ್ಲಾ ಜಿಲ್ಲೆಯ ಹಿಂದುಳಿದ ವರ್ಗಗಳ ಮತ್ತು ಪರಿಶಿಷ್ಟ ಜಾತಿಯ ಅರ್ಹ ಅಭ್ಯರ್ಥಿಗಳು ಈ ಶಾಲೆಗಳಿಗೆ ಉಚಿತ ತರಬೇತಿಗೆ ಸೇರಬಹುದಾಗಿದ್ದು ಇದಕ್ಕೆ ತಗಲುವ ವೆಚ್ಚವನ್ನು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಭರಿಸಲಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಕಾರವಾರದಲ್ಲಿ ಶಾಲೆ ಪ್ರಾರಂಭಿಸುವ ಬಗ್ಗೆ ಚಿಂತನೆ ನಡೆದಿದೆ. ಇದರಿಂದ ಜಿಲ್ಲೆಯಲ್ಲಿರುವ ನಿರುದ್ಯೋಗಿ ಯುವಕರಿಗೆ ಹೆಚ್ಚು ಅನುಕೂಲವಾಗಲಿದೆ' ಎಂದು ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರಿನಿವಾಸ್ ಪೂಜಾರಿ ಹೇಳಿದ್ದಾರೆ.
Agneepath Recruitment free training school to open in Karavali regions for aspirants.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 04:39 pm
HK News Staffer
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm