ಬ್ರೇಕಿಂಗ್ ನ್ಯೂಸ್
02-07-22 11:17 am HK News Desk ಕರ್ನಾಟಕ
ಕೊಪ್ಪಳ, ಜುಲೈ 2: ಸರಕಾರಿ ಶಾಲೆಯ ಶಿಕ್ಷಕನೊಬ್ಬ ಮಹಿಳೆಯರನ್ನು ಪುಸಲಾಯಿಸಿ ತನ್ನ ಕಾಮತೃಷೆಗೆ ಬಳಸಿಕೊಂಡಿದ್ದಲ್ಲದೆ, ಶಾಲಾ ಮಕ್ಕಳನ್ನು ಮನೆಗೆ ಕರೆಸಿಕೊಂಡು ವಿಕೃತವಾಗಿ ವರ್ತಿಸಿದ ವೀಡಿಯೋ ವೈರಲ್ ಆಗಿದ್ದು ಸಾರ್ವಜನಿಕರು ಶಿಕ್ಷಕನಿಗೆ ಧರ್ಮದೇಟು ನೀಡಿದ್ದಾರೆ.
ಕೊಪ್ಪಳ ಜಿಲ್ಲೆಯ ಕಾರಟಗಿ ಪಟ್ಟಣದಲ್ಲಿ ವಾಸವಾಗಿದ್ದ ಸರ್ಕಾರಿ ಶಾಲೆಯ ಶಿಕ್ಷಕ ಅಜರುದ್ಧೀನ್ ಸಾರ್ವಜನಿಕರಿಂದ ಗೂಸಾ ತಿಂದವನು. ರಾಯಚೂರು ಜಿಲ್ಲೆ ಸಿಂಧನೂರು ತಾಲೂಕಿನ ಸಿಂಗಾಪೂರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಈತ ಶಿಕ್ಷಕನಾಗಿ ಕೆಲಸ ಮಾಡುತ್ತಿದ್ದನು.
ಆಟ– ಪಾಠದ ನೆಪದಲ್ಲಿ ತನ್ನ ಕಾರಟಗಿಯ ಮನೆಗೆ ಮಕ್ಕಳನ್ನು ಕರೆಸಿಕೊಂಡು ಮಕ್ಕಳ ಬಟ್ಟೆ ಬಿಚ್ಚಿಸಿ, ಗುಪ್ತಾಂಗ ಮುಟ್ಟಿ ವಿಕೃತಿ ಮೆರೆದಿದ್ದಾನೆ. ಶಿಕ್ಷಕನ ವಿಕೃತಿಯ ವೀಡಿಯೋ ಮೊಬೈಲ್ನಲ್ಲಿ ಸೆರೆಯಾಗಿದ್ದು ವೈರಲ್ ಆಗಿವೆ. ಅಲ್ಲದೇ ನೆರೆ ಮನೆಯ ಮಹಿಳೆಯರನ್ನು ಪುಸಲಾಯಿಸಿ ಲೈಂಗಿಕವಾಗಿ ಬಳಸಿಕೊಂಡಿದ್ದಾನೆ ಎಂದೂ ಆರೋಪಿಸಲಾಗಿದೆ.
ಇಬ್ಬರು ಮಹಿಳೆಯರ ಜೊತೆಗಿನ ರಾಸಲೀಲೆಯನ್ನು ಸ್ವತಃ ತಾನೇ ತನ್ನ ಮೊಬೈಲ್ನಲ್ಲಿ ವೀಡಿಯೋ ಮಾಡಿಕೊಂಡಿದ್ದು, ಎಲ್ಲಾ ವೀಡಿಯೋ ಇದೀಗ ವೈರಲ್ ಆಗಿವೆ. ಈ ವೀಡಿಯೋ ತೋರಿಸಿ ಮಹಿಳೆಯರನ್ನು ಬೆದರಿಸುತ್ತಿದ್ದ ಕಾಮುಕ, ಅದೇ ಮಹಿಳೆಯರನ್ನು ಮುಂದಿಟ್ಟು ಇನ್ನಷ್ಟು ಮಹಿಳೆಯರನ್ನು ಕರೆಸಿಕೊಂಡು ಲೈಂಗಿಕವಾಗಿ ಬಳಸಿಕೊಂಡಿದ್ದಾನೆ. ಇಲ್ಲಿಯವರೆಗೂ ಸುಮಾರು 40 ಮಹಿಳೆಯರನ್ನು ಕಾಮುಕ ಬಳಸಿಕೊಂಡಿದ್ದಾನೆ ಎನ್ನುವ ಆರೋಪ ಕೇಳಿಬಂದಿದೆ.
ಸದ್ಯ ಸಾರ್ವಜನಿಕರು ಶಿಕ್ಷಕನಿಗೆ ಧರ್ಮದೇಟು ನೀಡಿರುವ ವೀಡಿಯೋ ವೈರಲ್ ಆದ ಬೆನ್ನಲ್ಲೇ ಆರೋಪಿ ಶಿಕ್ಷಕ ಅಜರುದ್ಧೀನ್ನನ್ನು ಅಮಾನತುಗೊಳಿಸಿ ಸಿಂಧನೂರು ಬಿಇಒ ಶರಣಪ್ಪ ವಟಗಲ್ ಆದೇಶ ಮಾಡಿದ್ದಾರೆ.
School teacher beaten for sexual assault on many girl students in Koppal. Also videos of romance with 40 different women has gone viral.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 04:39 pm
HK News Staffer
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm