ಬ್ರೇಕಿಂಗ್ ನ್ಯೂಸ್
02-07-22 11:17 am HK News Desk ಕರ್ನಾಟಕ
ಕೊಪ್ಪಳ, ಜುಲೈ 2: ಸರಕಾರಿ ಶಾಲೆಯ ಶಿಕ್ಷಕನೊಬ್ಬ ಮಹಿಳೆಯರನ್ನು ಪುಸಲಾಯಿಸಿ ತನ್ನ ಕಾಮತೃಷೆಗೆ ಬಳಸಿಕೊಂಡಿದ್ದಲ್ಲದೆ, ಶಾಲಾ ಮಕ್ಕಳನ್ನು ಮನೆಗೆ ಕರೆಸಿಕೊಂಡು ವಿಕೃತವಾಗಿ ವರ್ತಿಸಿದ ವೀಡಿಯೋ ವೈರಲ್ ಆಗಿದ್ದು ಸಾರ್ವಜನಿಕರು ಶಿಕ್ಷಕನಿಗೆ ಧರ್ಮದೇಟು ನೀಡಿದ್ದಾರೆ.
ಕೊಪ್ಪಳ ಜಿಲ್ಲೆಯ ಕಾರಟಗಿ ಪಟ್ಟಣದಲ್ಲಿ ವಾಸವಾಗಿದ್ದ ಸರ್ಕಾರಿ ಶಾಲೆಯ ಶಿಕ್ಷಕ ಅಜರುದ್ಧೀನ್ ಸಾರ್ವಜನಿಕರಿಂದ ಗೂಸಾ ತಿಂದವನು. ರಾಯಚೂರು ಜಿಲ್ಲೆ ಸಿಂಧನೂರು ತಾಲೂಕಿನ ಸಿಂಗಾಪೂರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಈತ ಶಿಕ್ಷಕನಾಗಿ ಕೆಲಸ ಮಾಡುತ್ತಿದ್ದನು.
ಆಟ– ಪಾಠದ ನೆಪದಲ್ಲಿ ತನ್ನ ಕಾರಟಗಿಯ ಮನೆಗೆ ಮಕ್ಕಳನ್ನು ಕರೆಸಿಕೊಂಡು ಮಕ್ಕಳ ಬಟ್ಟೆ ಬಿಚ್ಚಿಸಿ, ಗುಪ್ತಾಂಗ ಮುಟ್ಟಿ ವಿಕೃತಿ ಮೆರೆದಿದ್ದಾನೆ. ಶಿಕ್ಷಕನ ವಿಕೃತಿಯ ವೀಡಿಯೋ ಮೊಬೈಲ್ನಲ್ಲಿ ಸೆರೆಯಾಗಿದ್ದು ವೈರಲ್ ಆಗಿವೆ. ಅಲ್ಲದೇ ನೆರೆ ಮನೆಯ ಮಹಿಳೆಯರನ್ನು ಪುಸಲಾಯಿಸಿ ಲೈಂಗಿಕವಾಗಿ ಬಳಸಿಕೊಂಡಿದ್ದಾನೆ ಎಂದೂ ಆರೋಪಿಸಲಾಗಿದೆ.
ಇಬ್ಬರು ಮಹಿಳೆಯರ ಜೊತೆಗಿನ ರಾಸಲೀಲೆಯನ್ನು ಸ್ವತಃ ತಾನೇ ತನ್ನ ಮೊಬೈಲ್ನಲ್ಲಿ ವೀಡಿಯೋ ಮಾಡಿಕೊಂಡಿದ್ದು, ಎಲ್ಲಾ ವೀಡಿಯೋ ಇದೀಗ ವೈರಲ್ ಆಗಿವೆ. ಈ ವೀಡಿಯೋ ತೋರಿಸಿ ಮಹಿಳೆಯರನ್ನು ಬೆದರಿಸುತ್ತಿದ್ದ ಕಾಮುಕ, ಅದೇ ಮಹಿಳೆಯರನ್ನು ಮುಂದಿಟ್ಟು ಇನ್ನಷ್ಟು ಮಹಿಳೆಯರನ್ನು ಕರೆಸಿಕೊಂಡು ಲೈಂಗಿಕವಾಗಿ ಬಳಸಿಕೊಂಡಿದ್ದಾನೆ. ಇಲ್ಲಿಯವರೆಗೂ ಸುಮಾರು 40 ಮಹಿಳೆಯರನ್ನು ಕಾಮುಕ ಬಳಸಿಕೊಂಡಿದ್ದಾನೆ ಎನ್ನುವ ಆರೋಪ ಕೇಳಿಬಂದಿದೆ.
ಸದ್ಯ ಸಾರ್ವಜನಿಕರು ಶಿಕ್ಷಕನಿಗೆ ಧರ್ಮದೇಟು ನೀಡಿರುವ ವೀಡಿಯೋ ವೈರಲ್ ಆದ ಬೆನ್ನಲ್ಲೇ ಆರೋಪಿ ಶಿಕ್ಷಕ ಅಜರುದ್ಧೀನ್ನನ್ನು ಅಮಾನತುಗೊಳಿಸಿ ಸಿಂಧನೂರು ಬಿಇಒ ಶರಣಪ್ಪ ವಟಗಲ್ ಆದೇಶ ಮಾಡಿದ್ದಾರೆ.
School teacher beaten for sexual assault on many girl students in Koppal. Also videos of romance with 40 different women has gone viral.
19-04-24 11:17 pm
HK NEWS
Actress Priya Savadi, Hubballi Neha Murder: ಅ...
19-04-24 07:58 pm
Hubbali Neha Murder, CM Siddaramaiah: ವೈಯಕ್ತಿ...
19-04-24 04:27 pm
Hubballi Murder Neha, Parameshwar: ಹುಬ್ಬಳ್ಳಿ...
19-04-24 04:08 pm
ಶಿವಮೊಗ್ಗ ಸಂಸದ ರಾಘವೇಂದ್ರ 73 ಕೋಟಿ ಆಸ್ತಿ ; ಪತ್ನಿ...
19-04-24 01:41 pm
17-04-24 08:42 pm
HK News Desk
Gujarat, Road Accident: ನಿಂತಿದ್ದ ಟ್ರಕ್ಗೆ ಗುದ...
17-04-24 07:07 pm
Dubai, Oman Rain, flood; ಧಾರಾಕಾರ ಮಳೆಗೆ ಕೊಚ್ಚಿ...
17-04-24 12:53 pm
29 Naxalites killed in Kanker encounter, Chha...
16-04-24 07:50 pm
ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ ; ಏಳು ಮಂದಿ ದುರ್...
16-04-24 05:09 pm
19-04-24 10:11 pm
Mangalore Correspondent
Mangalore accident, Kulur: ಕೋಡಿಕಲ್ ಕ್ರಾಸ್ ನಲ್...
19-04-24 09:55 pm
Mangalore election, 144 section: ಲೋಕಸಭೆ ಚುನಾವ...
19-04-24 08:32 pm
Kalakul, diploma course: ಕಲಾಕುಲ್ ನಾಟಕ ತಂಡದಿಂದ...
19-04-24 05:18 pm
Congress MP Padmaraj, Bantwal: ಬಂಟ್ವಾಳ ಕ್ಷೇತ್...
19-04-24 02:30 pm
19-04-24 10:25 pm
Mangalore Correspondent
Mangalore Acid Attack, EXAM: ಆ್ಯಸಿಡ್ ದಾಳಿಗೀಡಾ...
19-04-24 09:25 pm
Hubballi student Neha murder: ಹುಬ್ಬಳ್ಳಿ ಕಾಲೇ...
19-04-24 03:43 pm
Gadag Murder news, four killed; ನಗರ ಸಭೆ ಉಪಾಧ್...
19-04-24 09:27 am
Bangalore Double Murder: 'ಕರಿಮಣಿ ಮಾಲೀಕ'ನಿಗೆ ತ...
18-04-24 10:03 pm