ಬ್ರೇಕಿಂಗ್ ನ್ಯೂಸ್
03-07-22 07:50 pm HK News Desk ಕರ್ನಾಟಕ
ಬೆಂಗಳೂರು, ಜುಲೈ 3: ದೇಶಕ್ಕೆ ಮಾತನಾಡುವ ರಾಷ್ಟ್ರಪತಿ ಬೇಕು. ಮೌನಿಯಾಗಿರುವ ಅಥವಾ ಯಾರದ್ದೋ ರಬ್ಬರ್ ಸ್ಟಾಂಪ್ ಆಗಿರುವ ರಾಷ್ಟ್ರಪತಿಯ ಅಗತ್ಯ ಇಲ್ಲ ಎಂದು ಕಾಂಗ್ರೆಸ್ ಮತ್ತು ಇತರ ವಿರೋಧ ಪಕ್ಷಗಳ ರಾಷ್ಟ್ರಪತಿ ಅಭ್ಯರ್ಥಿ ಯಶವಂತ ಸಿನ್ಹಾ ಪುನರುಚ್ಚರಿಸಿದ್ದಾರೆ.
ಜುಲೈ 18 ರಂದು ರಾಷ್ಟ್ರಪತಿ ಆಯ್ಕೆಗೆ ಚುನಾವಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಭಾನುವಾರ ನಗರದ ಶಾಂಗ್ರಿಲಾ ಹೋಟೆಲ್ನಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಯಶವಂತ ಸಿನ್ಹಾ ಮತ ಯಾಚಿಸಿ ಅವರು ಮಾತನಾಡಿದರು.
ವಿರೋಧ ಪಕ್ಷಗಳ ನಾಯಕರು ಮಾತನಾಡುವ ಪರಿಸ್ಥಿತಿ ಇಲ್ಲ. ಯಾರಾದರೂ ಏನಾದರೂ ಮಾತಾಡಿದರೆ ತನಿಖಾ ಸಂಸ್ಥೆಗಳಿಂದ ನೋಟಿಸ್ ಬರುತ್ತದೆ. ಮಹಾರಾಷ್ಟ್ರ, ಕರ್ನಾಟಕ, ಮಧ್ಯಪ್ರದೇಶ, ಗೋವಾ, ಅರುಣಾಚಲ ಪ್ರದೇಶದಲ್ಲಿ ಏನೇನಾಗಿದೆ ಎಂದು ಎಲ್ಲರಿಗೂ ಗೊತ್ತಿದೆ. ಹಾಲಿ ಸರ್ಕಾರಗಳನ್ನು ಉರುಳಿಸುವ ಕೆಲಸ ಪ್ರಜಾಪ್ರಭುತ್ವ ವಿರೋಧಿ ಕೆಲಸ. ಬಿಜೆಪಿಯು ಬೇರೆ ಸರ್ಕಾರಗಳನ್ನು ಉರುಳಿಸುವ ಕೆಲಸ ಮಾಡುತ್ತಿರುವುದು ಒಪ್ಪುವಂಥದ್ದಲ್ಲ’ ಎಂದರು.



ಎರಡು ದಿನಗಳ ಹಿಂದೆ ನೂಪುರ್ ಶರ್ಮಾ ಬಗ್ಗೆ ಸುಪ್ರೀಂ ಕೋರ್ಟ್ ಕೆಲವು ಅಭಿಪ್ರಾಯಗಳನ್ನು ವ್ಯಕ್ತಪಡಿಸಿದೆ. ನ್ಯಾಯಾಂಗವು ಸಂವಿಧಾನಕ್ಕೆ ಮಾತ್ರ ಉತ್ತರದಾಯಿ ಆಗಿರುತ್ತದೆ ಎಂದು ಸುಪ್ರೀಂ ಕೋರ್ಟ್ ಹೇಳಿತ್ತು. ಸುಪ್ರೀಂ ಕೋರ್ಟ್ ಅಭಿಪ್ರಾಯವನ್ನು ನಾನು ಸ್ವಾಗತಿಸುತ್ತೇನೆ. ಆದರೆ, ಸಾಮಾಜಿಕ ಮಾಧ್ಯಮಗಳಲ್ಲಿ ಸುಪ್ರೀಂಕೋರ್ಟ್ ಅಭಿಪ್ರಾಯದ ಬಗ್ಗೆ ಟೀಕೆ ಟಿಪ್ಪಣಿ ಮಾಡಲಾಗುತ್ತಿದೆ. ಕೆಟ್ಟದಾಗಿ ಟೀಕೆ ಮಾಡಲಾಗುತ್ತಿದೆ. ನ್ಯಾಯಾಂಗದ ಮೇಲಿನ ಇಂಥ ಟೀಕೆ ಪ್ರಜಾಪ್ರಭುತ್ವಕ್ಕೆ ಕಳಂಕ ಎಂದು ಹೇಳಿದರು.
ಸುಪ್ರೀಂ ಕೋರ್ಟ್ ತಮಗೆ ಅನುಕೂಲ ರೀತಿ ತೀರ್ಪು ಕೊಟ್ಟರೆ ಸಂಭ್ರಮ ಪಡುತ್ತಾರೆ. ತಮಗೆ ಬೇಡವಾದ ತೀರ್ಪು, ಅಭಿಮತ ಬಂದರೆ ತೆಗಳುವುದು ಸರಿಯಲ್ಲ. ಇದು ಪ್ರಜಾಪ್ರಭುತ್ವಕ್ಕೆ ಅಪಾಯಕಾರಿ. ಕೇಂದ್ರ ಸರ್ಕಾರ ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದರು.
ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಮಾತನಾಡಿ, ‘ದೇಶದ ಸಂವಿಧಾನ ಮತ್ತು ಪ್ರಜಾಪ್ರಭುತ್ವ ಅಪಾಯದಲ್ಲಿದೆ. ಇಂಥ ಸಂದರ್ಭದಲ್ಲಿ ರಾಷ್ಟ್ರಪತಿ ಚುನಾವಣೆ ನಡೆಯುತ್ತಿದೆ. ವಿರೋಧ ಪಕ್ಷಗಳು ಸಿನ್ಹಾ ಅವರನ್ನು ಅಭ್ಯರ್ಥಿ ಮಾಡಿವೆ. ಇಂದಿನ ರಾಜಕೀಯ ಪರಿಸ್ಥಿತಿಯಲ್ಲಿ ಸಿನ್ಹಾ ಅವರು ರಾಷ್ಟ್ರಪತಿ ಆಗುವ ಅಗತ್ಯ ಇದೆ’ ಎಂದರು.
‘ಯಶವಂತ್ ಸಿನ್ಹಾ ಅವರು ಈ ಹಿಂದೆ ಕೇಂದ್ರದಲ್ಲಿ ಪ್ರಮುಖ ಖಾತೆಗಳನ್ನು ನಿರ್ವಹಿಸಿದ್ದಾರೆ. ಇವತ್ತು ದೇಶದಲ್ಲಿ ಅವರು ಎತ್ತರದ ರಾಜಕಾರಣಿ, ಹಿರಿಯರು ಮತ್ತು ಮುತ್ಸದ್ಧಿಯಾಗಿದ್ದಾರೆ. ದೇಶದ ಜನರ ಸಮಸ್ಯೆಗಳನ್ನು ಅರ್ಥ ಮಾಡಿಕೊಂಡಿದ್ದಾರೆ. ಇಂಥ ವ್ಯಕ್ತಿ ರಾಷ್ಟ್ರಪತಿ ಸ್ಥಾನಕ್ಕೆ ಏರಬೇಕು ಎಂದು ಹೇಳಿದರು.
The opposition candidate for the presidential polls, former Union minister Yashwant Sinha, Sunday said that the BJP government in Karnataka was attempting to communalize school curriculum in the state. Sinha, who was in Bengaluru to meet Congress MLAs to canvas support for the presidential polls on July 17, said the government in Karnataka is “attempting to communalize the minds of the young generation by introducing a new school curriculum coloured by the ruling party’s ideological agenda.’’
09-04-26 09:30 pm
HK News Staffer
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆಯಾಗಿದೆ ಎಂಬ ವದಂತಿಗೆ...
08-04-26 09:35 pm
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
09-04-26 11:03 pm
HK News Staffer
ಹರ್ಮುಜ್ ಜಲಸಂಧಿಗೆ ಇರಾನ್ ಸುಂಕ ; ಭಾರತಕ್ಕೆ ಭಾರೀ...
09-04-26 07:43 pm
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
09-04-26 09:16 pm
HK News Staffer
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm