ಬ್ರೇಕಿಂಗ್ ನ್ಯೂಸ್
05-07-22 10:27 pm HK News Desk ಕರ್ನಾಟಕ
ಹುಬ್ಬಳ್ಳಿ, ಜುಲೈ 5: ಸರಳ ವಾಸ್ತು ಖ್ಯಾತಿಯ ಚಂದ್ರಶೇಖರ ಗುರೂಜಿ ಹಂತಕರನ್ನು ಪತ್ತೆ ಮಾಡಲು ಕೊನೆಗೆ ಜೆಸಿಬಿ ಕೂಡ ನೆರವಿಗೆ ಬಂದಿತ್ತು ಅನ್ನೋ ವಿಚಾರ ಬಯಲಾಗಿದೆ. ಬೆಳಗಾವಿ ಪೊಲೀಸರು ಜೆಸಿಬಿ ಅಡ್ಡ ಇಟ್ಟು ಹಂತಕರನ್ನು ಕಾಲರ್ ಹಿಡಿದು ನಡುಬೀದಿಯಲ್ಲಿ ದರ ದರನೆ ಎಳೆ ತರುವ ವಿಡಿಯೋ ವೈರಲ್ ಆಗಿದೆ.
ಕೊಲೆ ವಿಷಯ ತಿಳಿಯುತ್ತಲೇ ಹಂತಕರ ಪತ್ತೆಗೆ ಹುಬ್ಬಳ್ಳಿ- ಧಾರವಾಡ ಅವಳಿ ನಗರದ ಪೊಲೀಸರು ಅಲರ್ಟ್ ಆಗಿದ್ದರು. ಹಂತಕರು ನಗರ ದಾಟಿ ಹೋಗಬಾರದು ಎಂದು ಎಲ್ಲ ಕಡೆ ನಾಕಾಬಂದಿ ಹಾಕಿದ್ದರು. ಆದರೆ, ಆರೋಪಿಗಳು ಯಾರೆಂದು ತಿಳಿಯುತ್ತಲೇ ಲೊಕೇಶನ್ ನೋಡಿದಾಗ, ನಗರ ಬಿಟ್ಟು ಹೋಗಿದ್ದು ಕನ್ಫರ್ಮ್ ಆಗಿತ್ತು. ಕಾರಿನಲ್ಲಿ ಹುಬ್ಬಳ್ಳಿ ನಗರ ದಾಟಿ ಬೆಳಗಾವಿ ರಸ್ತೆಯಲ್ಲಿ ಎಸ್ಕೇಪ್ ಆಗುತ್ತಿರುವುದು ಕಂಡುಬಂದಿತ್ತು.


ಆರೋಪಿಗಳು ಬೆಳಗಾವಿ ರಸ್ತೆಯಲ್ಲಿ ಗೋವಾ ಅಥವಾ ಮಹಾರಾಷ್ಟ್ರಕ್ಕೆ ತೆರಳುವುದು ಖಾತ್ರಿಯಾಗಿತ್ತು. ಕೂಡಲೇ ಹುಬ್ಬಳ್ಳಿ ಪೊಲೀಸರ ತಂಡ ರಾಮದುರ್ಗ ಪೊಲೀಸರಿಗೆ ಸುದ್ದಿ ಮುಟ್ಟಿಸಿತ್ತು. ಕಾರಿನಲ್ಲಿ ಆರೋಪಿಗಳು ತೆರಳುತ್ತಿರುವ ಮಾಹಿತಿ ತಿಳಿದು ಸ್ಥಳೀಯ ಪೊಲೀಸರು ಹೆದ್ದಾರಿಯ ಅಡ್ಡಲಾಗಿ ಜೆಸಿಬಿಯನ್ನೇ ಅಡ್ಡಕ್ಕಿಟ್ಟು ವಾಹನ ಸಂಚಾರವನ್ನು ತಡೆದು ಬಿಟ್ಟಿದ್ದರು. ಪೊಲೀಸರು ಅಡ್ಡಹಾಕಿದ್ದು ತಿಳಿಯುತ್ತಲೇ ಕಾರನ್ನು ರಿವರ್ಸ್ ತೆಗೆದು ಪರಾರಿಯಾಗಲು ಯತ್ನ ನಡೆದಿತ್ತು. ಆದರೆ ಪಿಸ್ತೂಲ್ ಹಿಡಿದೇ ಕಾರ್ಯಾಚರಣೆಗಿಳಿದಿದ್ದ ಪೊಲೀಸರು ಕಾರನ್ನು ಕೂಡಲೇ ಸುತ್ತುವರಿದರು. ಅದರಲ್ಲಿದ್ದ ಇಬ್ಬರನ್ನೂ ಕಾಲರ್ ಪಟ್ಟಿ ಹಿಡಿದು ಹೊರಕ್ಕೆಳೆದು ರಸ್ತೆಯಲ್ಲೇ ಎಳ್ಕೊಂಡು ಹೋಗಿ ಜೀಪಿಗೆ ಹತ್ತಿಸಿದ್ದಾರೆ.

ರಾಮದುರ್ಗ ಡಿವೈಎಸ್ಪಿ ರಾಮನಗೌಡ ಹಟ್ಟಿ, ಸಿಪಿಐ ಐ.ಆರ್.ಪಟ್ಟಣಶೆಟ್ಟಿ, ಪಿಎಸ್ಐ ಶಿವಾನಂದ ಕಾರಜೋಳ ನೇತೃತ್ವದಲ್ಲಿ 22ಕ್ಕೂ ಹೆಚ್ಚು ಪೊಲೀಸರು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದಲ್ಲದೆ, ರಾಜ್ಯ ಹೆದ್ದಾರಿಗೆ ಅಡ್ಡಲಾಗಿ ಜೆಸಿಬಿಯನ್ನಿಟ್ಟು ಅಡ್ಡಹಾಕಿದ್ದು ಕಾರ್ಯವೈಖರಿಗೆ ಸಾಕ್ಷಿಯಾಗಿತ್ತು. ಅಲ್ಲದೆ, ಇದರ ವಿಡಿಯೋ ಕೂಡ ವೈರಲ್ ಆಗಿದೆ.
ಸರಳ ವಾಸ್ತು ಚಂದ್ರಶೇಖರ್ ಗುರೂಜಿ ಭೀಕರ ಹತ್ಯೆ, ಗ್ರಾಹಕರ ಸೋಗಿನಲ್ಲಿ ಬಂದು ಹೊಟೇಲಿನಲ್ಲೇ ಕೃತ್ಯ
Police use JCB to block Chandrashekhar Guruji murder accused near Belgaum highway as they were trying to flee towards Maharashtra. A Vastu exponent from Karnataka who goes by the name Chandrashekhar Guruji has been stabbed to death in full public view by two men at a private hotel in the Hubballi district. Special teams were formed to catch the killers and both have now been arrested.
09-04-26 09:30 pm
HK News Staffer
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆಯಾಗಿದೆ ಎಂಬ ವದಂತಿಗೆ...
08-04-26 09:35 pm
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
09-04-26 11:03 pm
HK News Staffer
ಹರ್ಮುಜ್ ಜಲಸಂಧಿಗೆ ಇರಾನ್ ಸುಂಕ ; ಭಾರತಕ್ಕೆ ಭಾರೀ...
09-04-26 07:43 pm
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
10-04-26 12:35 pm
Dinesh Kumar, Mangaluru
Besant Evening College, BPL Cricket: ಬೆಸೆಂಟ್...
07-04-26 01:22 pm
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
09-04-26 09:16 pm
HK News Staffer
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm