ಬ್ರೇಕಿಂಗ್ ನ್ಯೂಸ್
11-07-22 05:47 pm HK News Desk ಕರ್ನಾಟಕ
ಹಾಸನ, ಜುಲೈ 11: ಮಂಗಳೂರು- ಬೆಂಗಳೂರು ಸಂಪರ್ಕದ ಶಿರಾಡಿ ಘಾಟ್ ಹೆದ್ದಾರಿಯನ್ನು ಕಾಮಗಾರಿಯ ಉದ್ದೇಶಕ್ಕೆ ಸಂಪೂರ್ಣ ಬಂದ್ ಮಾಡುವುದಿಲ್ಲ. ಬದಲಿಗೆ ಒಂದು ಬದಿಯಲ್ಲಿ ವಾಹನ ಸಂಚಾರಕ್ಕೆ ಅವಕಾಶ ಕೊಟ್ಟು ಕಾಮಗಾರಿ ಮುಂದುವರಿಸಲಾಗುವುದು ಎಂದು ರಾಜ್ಯ ಲೋಕೋಪಯೋಗಿ ಸಚಿವ ಸಿಸಿ ಪಾಟೀಲ ಹೇಳಿದ್ದಾರೆ.
ಸಕಲೇಶಪುರ ತಾಲೂಕಿನ ದೋಣಿಗಲ್ ಸಮೀಪ ಹೆದ್ದಾರಿ ಕುಸಿತ ಆಗಿರುವ ಪ್ರದೇಶಕ್ಕೆ ಭೇಟಿ ನೀಡಿದ ಸಚಿವರು ಅಲ್ಲಿನ ಸ್ಥಳ ಪರಿಶೀಲನೆ ನಡೆಸಿದರು. ಇದೇ ವೇಳೆ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಅವರು, ದಿನವೊಂದಕ್ಕೆ ಈ ಹೆದ್ದಾರಿಯಲ್ಲಿ 30 ಸಾವಿರಕ್ಕೂ ಹೆಚ್ಚು ವಾಹನಗಳು ಸಾಗುತ್ತವೆ. ಮಂಗಳೂರನ್ನು ಸಂಪರ್ಕಿಸುವ ಪ್ರಮುಖ ಹೆದ್ದಾರಿಯಾಗಿದ್ದು ಇಲ್ಲಿ ರಸ್ತೆಯನ್ನು ಬಂದ್ ಮಾಡಿದರೆ ಸಂಚಾರಕ್ಕೆ ಕಷ್ಟವಾಗುತ್ತದೆ. ಒಂದು ಬದಿಯಲ್ಲಿ ಕಾಮಗಾರಿ ನಡೆಸಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಹೇಳಿದರು.
ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಬೆಂಗಳೂರಿನ ನೆಲಮಂಗಲದಿಂದ ಹಾಸನದ ವರೆಗೆ ಉತ್ತಮ ರಸ್ತೆ ಕಾಮಗಾರಿ ನಡೆದಿದೆ. ಆದರೆ ಸಕಲೇಶಪುರ ಭಾಗದಲ್ಲಿ ಹಲವು ವರ್ಷಗಳಿಂದ ರಸ್ತೆ ಕಾಮಗಾರಿ ಕುಂಟುತ್ತಾ ಸಾಗಿದೆ. ಅಲ್ಲಲ್ಲಿ ಕಳಪೆ ಕಾಮಗಾರಿ ನಡೆದಿರುವುದನ್ನೂ ವೀಕ್ಷಿಸಿದ್ದೇನೆ. ಹೆದ್ದಾರಿ ಕಾಮಗಾರಿ ವಿಚಾರ ಸದನದಲ್ಲಿಯೂ ಪ್ರಸ್ತಾಪವಾಗಿದ್ದು, ಅದಕ್ಕಾಗಿ ವೀಕ್ಷಣೆಗೆ ಬಂದಿದ್ದೇನೆ. 2024ರ ವೇಳೆಗೆ ಕಾಮಗಾರಿ ಪೂರ್ತಿಗೊಳಿಸುವ ಭರವಸೆಯನ್ನು ಗುತ್ತಿಗೆದಾರರು ನೀಡಿದ್ದಾರೆ ಎಂದರು.
ಹೆದ್ದಾರಿ ಕಾಮಗಾರಿ ಬಗ್ಗೆ ಕೇಂದ್ರ ಭೂಸಾರಿಗೆ ಸಚಿವ ನಿತಿನ್ ಗಡ್ಕರಿ ಗಮನಕ್ಕೂ ತರುತ್ತೇನೆ. ಕಾಮಗಾರಿ ಗುಣಮಟ್ಟದ ಬಗ್ಗೆ ನಿಗಾ ವಹಿಸಲು ಅಧಿಕಾರಿಯೊಬ್ಬರನ್ನು ನೇಮಿಸಲಾಗುವುದು. ಸಾರ್ವಜನಿಕರ ದೂರು, ಇತರೇ ಕಾಮಗಾರಿ ಸಮಸ್ಯೆ ಬಗ್ಗೆ ಗಮನ ಹರಿಸಲಿದ್ದಾರೆ ಎಂದು ಹೇಳಿದರು.
Shiradi Ghatt Road Never Close Minister CC Patil.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 04:39 pm
HK News Staffer
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm