ಬ್ರೇಕಿಂಗ್ ನ್ಯೂಸ್
11-07-22 05:47 pm HK News Desk ಕರ್ನಾಟಕ
ಹಾಸನ, ಜುಲೈ 11: ಮಂಗಳೂರು- ಬೆಂಗಳೂರು ಸಂಪರ್ಕದ ಶಿರಾಡಿ ಘಾಟ್ ಹೆದ್ದಾರಿಯನ್ನು ಕಾಮಗಾರಿಯ ಉದ್ದೇಶಕ್ಕೆ ಸಂಪೂರ್ಣ ಬಂದ್ ಮಾಡುವುದಿಲ್ಲ. ಬದಲಿಗೆ ಒಂದು ಬದಿಯಲ್ಲಿ ವಾಹನ ಸಂಚಾರಕ್ಕೆ ಅವಕಾಶ ಕೊಟ್ಟು ಕಾಮಗಾರಿ ಮುಂದುವರಿಸಲಾಗುವುದು ಎಂದು ರಾಜ್ಯ ಲೋಕೋಪಯೋಗಿ ಸಚಿವ ಸಿಸಿ ಪಾಟೀಲ ಹೇಳಿದ್ದಾರೆ.
ಸಕಲೇಶಪುರ ತಾಲೂಕಿನ ದೋಣಿಗಲ್ ಸಮೀಪ ಹೆದ್ದಾರಿ ಕುಸಿತ ಆಗಿರುವ ಪ್ರದೇಶಕ್ಕೆ ಭೇಟಿ ನೀಡಿದ ಸಚಿವರು ಅಲ್ಲಿನ ಸ್ಥಳ ಪರಿಶೀಲನೆ ನಡೆಸಿದರು. ಇದೇ ವೇಳೆ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಅವರು, ದಿನವೊಂದಕ್ಕೆ ಈ ಹೆದ್ದಾರಿಯಲ್ಲಿ 30 ಸಾವಿರಕ್ಕೂ ಹೆಚ್ಚು ವಾಹನಗಳು ಸಾಗುತ್ತವೆ. ಮಂಗಳೂರನ್ನು ಸಂಪರ್ಕಿಸುವ ಪ್ರಮುಖ ಹೆದ್ದಾರಿಯಾಗಿದ್ದು ಇಲ್ಲಿ ರಸ್ತೆಯನ್ನು ಬಂದ್ ಮಾಡಿದರೆ ಸಂಚಾರಕ್ಕೆ ಕಷ್ಟವಾಗುತ್ತದೆ. ಒಂದು ಬದಿಯಲ್ಲಿ ಕಾಮಗಾರಿ ನಡೆಸಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಹೇಳಿದರು.
ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಬೆಂಗಳೂರಿನ ನೆಲಮಂಗಲದಿಂದ ಹಾಸನದ ವರೆಗೆ ಉತ್ತಮ ರಸ್ತೆ ಕಾಮಗಾರಿ ನಡೆದಿದೆ. ಆದರೆ ಸಕಲೇಶಪುರ ಭಾಗದಲ್ಲಿ ಹಲವು ವರ್ಷಗಳಿಂದ ರಸ್ತೆ ಕಾಮಗಾರಿ ಕುಂಟುತ್ತಾ ಸಾಗಿದೆ. ಅಲ್ಲಲ್ಲಿ ಕಳಪೆ ಕಾಮಗಾರಿ ನಡೆದಿರುವುದನ್ನೂ ವೀಕ್ಷಿಸಿದ್ದೇನೆ. ಹೆದ್ದಾರಿ ಕಾಮಗಾರಿ ವಿಚಾರ ಸದನದಲ್ಲಿಯೂ ಪ್ರಸ್ತಾಪವಾಗಿದ್ದು, ಅದಕ್ಕಾಗಿ ವೀಕ್ಷಣೆಗೆ ಬಂದಿದ್ದೇನೆ. 2024ರ ವೇಳೆಗೆ ಕಾಮಗಾರಿ ಪೂರ್ತಿಗೊಳಿಸುವ ಭರವಸೆಯನ್ನು ಗುತ್ತಿಗೆದಾರರು ನೀಡಿದ್ದಾರೆ ಎಂದರು.
ಹೆದ್ದಾರಿ ಕಾಮಗಾರಿ ಬಗ್ಗೆ ಕೇಂದ್ರ ಭೂಸಾರಿಗೆ ಸಚಿವ ನಿತಿನ್ ಗಡ್ಕರಿ ಗಮನಕ್ಕೂ ತರುತ್ತೇನೆ. ಕಾಮಗಾರಿ ಗುಣಮಟ್ಟದ ಬಗ್ಗೆ ನಿಗಾ ವಹಿಸಲು ಅಧಿಕಾರಿಯೊಬ್ಬರನ್ನು ನೇಮಿಸಲಾಗುವುದು. ಸಾರ್ವಜನಿಕರ ದೂರು, ಇತರೇ ಕಾಮಗಾರಿ ಸಮಸ್ಯೆ ಬಗ್ಗೆ ಗಮನ ಹರಿಸಲಿದ್ದಾರೆ ಎಂದು ಹೇಳಿದರು.
Shiradi Ghatt Road Never Close Minister CC Patil.
09-04-26 09:30 pm
HK News Staffer
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆಯಾಗಿದೆ ಎಂಬ ವದಂತಿಗೆ...
08-04-26 09:35 pm
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
09-04-26 11:03 pm
HK News Staffer
ಹರ್ಮುಜ್ ಜಲಸಂಧಿಗೆ ಇರಾನ್ ಸುಂಕ ; ಭಾರತಕ್ಕೆ ಭಾರೀ...
09-04-26 07:43 pm
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
10-04-26 12:35 pm
Dinesh Kumar, Mangaluru
Besant Evening College, BPL Cricket: ಬೆಸೆಂಟ್...
07-04-26 01:22 pm
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
09-04-26 09:16 pm
HK News Staffer
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm