ಬ್ರೇಕಿಂಗ್ ನ್ಯೂಸ್
03-08-20 09:30 am Bangalore Correspondent ಕರ್ನಾಟಕ
ಬೆಂಗಳೂರು (ಆ. 3): ವೈದ್ಯಕೀಯ ತಪಾಸಣೆ ವೇಳೆ ಕೊರೋನಾ ಪಾಸಿಟಿವ್ ದೃಢಪಟ್ಟಿದ್ದರಿಂದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರನ್ನು ನಿನ್ನೆ ರಾತ್ರಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದೀಗ ವಿಡಿಯೋ ಸಂದೇಶ ರವಾನಿಸಿರುವ ಸಿಎಂ ಯಡಿಯೂರಪ್ಪ, ವೈದ್ಯರು ತಪಾಸಣೆ ಮಾಡಿ ಯಾವುದೇ ರೀತಿಯ ಆರೋಗ್ಯ ಸಮಸ್ಯೆ ಇಲ್ಲ ಎಂದು ಹೇಳಿದ್ದಾರೆ.
ನನ್ನ ಆರೋಗ್ಯದ ಬಗ್ಗೆ ಕಾಳಜಿ ತೋರಿರುವ ಎಲ್ಲರಿಗೂ ಧನ್ಯವಾದ. ರಾಜ್ಯದ ಜನರೆಲ್ಲರೂ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಂಡು ನಿಮ್ಮ ಸುರಕ್ಷತೆಯ ಬಗ್ಗೆ ಗಮನಹರಿಸಿ ಎಂದು ಮನವಿ ಮಾಡಿದ್ದಾರೆ.
ನಿನ್ನೆ ರಾತ್ರಿ 8ರಿಂದ 9 ಗಂಟೆಗೆ ನನಗೆ ಕೊರೋನಾ ಪಾಸಿಟಿವ್ ಇದು ಎಂದು ತಿಳಿಯಿತು. ತಕ್ಷಣ ಆಸ್ಪತ್ರೆಗೆ ಬಂದು ಚಿಕಿತ್ಸೆ ಪಡೆಯುತ್ತಿದ್ದೇನೆ. ವೈದ್ಯರು ರಾತ್ರಿಯಿಂದ ಪರೀಕ್ಷೆ ಮಾಡಿದ್ದಾರೆ. ಯಾವುದೇ ಆರೋಗ್ಯ ಸಮಸ್ಯೆ ಇಲ್ಲ ಎಂದು ತಿಳಿಸಿದ್ದಾರೆ. ಬೇಗ ಗುಣಮುಖರಾಗಿ ಮನೆಗೆ ಹೋಗುತ್ತೀರಿ ಎಂದು ವೈದ್ಯರು ಹೇಳಿದ್ದಾರೆ. ಹೀಗಾಗಿ, ಯಾರೂ ಚಿಂತಿಸಬೇಕಾದ ಅಗತ್ಯವಿಲ್ಲ ಎಂದು ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.
ಕೊರೋನಾ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿರುವ ಸನ್ಮಾನ್ಯ ಮುಖ್ಯಮಂತ್ರಿ ಶ್ರೀ @BSYBJP ರವರು ತಮ್ಮ ಆರೋಗ್ಯದ ಬಗ್ಗೆ ತಾವೇ ಸ್ವತಃ ನಾಡಿನ ಜನತೆಯನ್ನು ಉದ್ದೇಶಿಸಿ ಮಾತನಾಡಿದ್ದಾರೆ.
— CM of Karnataka (@CMofKarnataka) August 3, 2020
ಜನತೆ ಎಲ್ಲಾ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡು ಸೋಂಕು ಹರಡದಂತೆ ತಡೆಯಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ.@BSYBJP pic.twitter.com/6MWKswinNU
ಈಗಾಗಲೇ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ ನಡ್ಡಾ, ಸಚಿವೆ ನಿರ್ಮಲಾ ಸೀತಾರಾಮನ್, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು, ಸಿದ್ದರಾಮಯ್ಯ, ಕುಮಾರಸ್ವಾಮಿ ಹಾಗೂ ಅನೇಕ ಮಠಾಧೀಶರು ಕರೆ ಮಾಡಿ ಆರೋಗ್ಯ ವಿಚಾರಿಸಿ, ಬೇಗ ಗುಣಮುಖರಾಗಿ ಬನ್ನಿ ಎಂದು ಹಾರೈಸಿದ್ದಾರೆ ಎಂದು ತಿಳಿಸಿದ್ದಾರೆ.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm