ಬ್ರೇಕಿಂಗ್ ನ್ಯೂಸ್
15-07-22 10:28 pm HK News Desk ಕರ್ನಾಟಕ
ಹಾಸನ, ಜುಲೈ 15: ಸಕಲೇಶಪುರ ತಾಲೂಕಿನ ಮಾರನಹಳ್ಳಿಯಿಂದ ದೋಣಿಗಲ್ ವರೆಗಿನ ಹೆದ್ದಾರಿಯಲ್ಲಿ ಭೂಕುಸಿತ ಆಗಿರುವುದರಿಂದ ಮಂಗಳೂರು – ಬೆಂಗಳೂರು ಸಂಪರ್ಕಿಸುವ ಶಿರಾಡಿ ಘಾಟ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಎಲ್ಲ ರೀತಿಯ ವಾಹನಗಳನ್ನು ನಿಷೇಧಿಸಿ ಹಾಸನ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಜುಲೈ 15ರಿಂದ ಈ ಆದೇಶ ಜಾರಿಗೆ ಬರಲಿದ್ದು, ಮುಂದಿನ ಆದೇಶದ ವರೆಗೂ ಚಾಲ್ತಿಯಲ್ಲಿರಲಿದೆ.
ಜುಲೈ 14ರಂದು ಘನ ವಾಹನಗಳ ಸಂಚಾರವನ್ನು ಮಾತ್ರ ನಿಷೇಧ ಮಾಡಲಾಗಿತ್ತು. ಜುಲೈ 15ರ ಬೆಳಗ್ಗೆ ದೋಣಿಗಲ್ ಭಾಗದಲ್ಲಿ ಮತ್ತೆ ಭೂಕುಸಿತ ಆಗಿರುವುದರಿಂದ ಎಲ್ಲ ರೀತಿಯ ವಾಹನಗಳ ಸಂಚಾರವನ್ನು ನಿಷೇಧ ಮಾಡಲಾಗಿದೆ. ಪರ್ಯಾಯ ಮಾರ್ಗವಾಗಿ ಬೆಂಗಳೂರಿನಿಂದ ಹಾಸನ ಮೂಲಕ ಬರುವ ವಾಹನಗಳು ಹಾಸನ- ಅರಕಲಗೂಡು- ಕುಶಾಲನಗರ- ಸಂಪಾಜೆ ಹೆದ್ದಾರಿಯಾಗಿ ಮಂಗಳೂರು ಸೇರಬಹುದು. ಅಥವಾ ಹಾಸನ- ಬೇಲೂರು- ಮೂಡಿಗೆರೆ- ಚಾರ್ಮಾಡಿ ಮಾರ್ಗವಾಗಿ ಸಂಚಾರ ನಡೆಸಬಹುದು. ಇವರೆಡೂ ಹೆದ್ದಾರಿಗಳಲ್ಲಿ ಘನ ವಾಹನಗಳ ಸಂಚಾರಕ್ಕೆ ನಿಷೇಧ ಇರುತ್ತದೆ. ಸಾರಿಗೆ ಬಸ್ ಹೊರತುಪಡಿಸಿ ಇತರೇ ಘನ ವಾಹನಗಳು ಬದಲಿ ರಸ್ತೆಯನ್ನು ಸಂಚಾರಕ್ಕೆ ಬಳಸಿಕೊಳ್ಳಬೇಕು ಎಂಬುದಾಗಿ ಜಿಲ್ಲಾಧಿಕಾರಿ ಗಿರೀಶ್ ಆರ್. ಆದೇಶದಲ್ಲಿ ತಿಳಿಸಿದ್ದಾರೆ.
ಕಳೆದ ಬಾರಿಯೂ ಶಿರಾಡಿ ಘಾಟ್ ಹೆದ್ದಾರಿಯಲ್ಲಿ ಭೂಕುಸಿತ ಆಗಿದ್ದರಿಂದ ವಾಹನಗಳ ಸಂಚಾರವನ್ನು ನಿಷೇಧ ಮಾಡಲಾಗಿತ್ತು. ಈ ಬಾರಿಯೂ ವಾಹನ ಸಂಚಾರ ನಿಷೇಧಿಸಲಾಗಿದ್ದು, ಮಳೆ ಕಡಿಮೆಯಾಗುವ ವರೆಗೂ ಇದು ಮುಂದುವರಿಯುವ ಸಾಧ್ಯತೆ ಇದೆ.
Mangalore Vehicles banned moving to shiradi ghat due to extreme landslide orders Hassan dc.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
03-02-26 09:06 pm
HK News Desk
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
04-02-26 12:29 pm
Mangalore Correspondent
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
Mangalore, Volvo Driver Satish Shetty: ರಸ್ತೆ...
03-02-26 09:49 pm
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm