ಬ್ರೇಕಿಂಗ್ ನ್ಯೂಸ್
15-07-22 10:28 pm HK News Desk ಕರ್ನಾಟಕ
ಹಾಸನ, ಜುಲೈ 15: ಸಕಲೇಶಪುರ ತಾಲೂಕಿನ ಮಾರನಹಳ್ಳಿಯಿಂದ ದೋಣಿಗಲ್ ವರೆಗಿನ ಹೆದ್ದಾರಿಯಲ್ಲಿ ಭೂಕುಸಿತ ಆಗಿರುವುದರಿಂದ ಮಂಗಳೂರು – ಬೆಂಗಳೂರು ಸಂಪರ್ಕಿಸುವ ಶಿರಾಡಿ ಘಾಟ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಎಲ್ಲ ರೀತಿಯ ವಾಹನಗಳನ್ನು ನಿಷೇಧಿಸಿ ಹಾಸನ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಜುಲೈ 15ರಿಂದ ಈ ಆದೇಶ ಜಾರಿಗೆ ಬರಲಿದ್ದು, ಮುಂದಿನ ಆದೇಶದ ವರೆಗೂ ಚಾಲ್ತಿಯಲ್ಲಿರಲಿದೆ.
ಜುಲೈ 14ರಂದು ಘನ ವಾಹನಗಳ ಸಂಚಾರವನ್ನು ಮಾತ್ರ ನಿಷೇಧ ಮಾಡಲಾಗಿತ್ತು. ಜುಲೈ 15ರ ಬೆಳಗ್ಗೆ ದೋಣಿಗಲ್ ಭಾಗದಲ್ಲಿ ಮತ್ತೆ ಭೂಕುಸಿತ ಆಗಿರುವುದರಿಂದ ಎಲ್ಲ ರೀತಿಯ ವಾಹನಗಳ ಸಂಚಾರವನ್ನು ನಿಷೇಧ ಮಾಡಲಾಗಿದೆ. ಪರ್ಯಾಯ ಮಾರ್ಗವಾಗಿ ಬೆಂಗಳೂರಿನಿಂದ ಹಾಸನ ಮೂಲಕ ಬರುವ ವಾಹನಗಳು ಹಾಸನ- ಅರಕಲಗೂಡು- ಕುಶಾಲನಗರ- ಸಂಪಾಜೆ ಹೆದ್ದಾರಿಯಾಗಿ ಮಂಗಳೂರು ಸೇರಬಹುದು. ಅಥವಾ ಹಾಸನ- ಬೇಲೂರು- ಮೂಡಿಗೆರೆ- ಚಾರ್ಮಾಡಿ ಮಾರ್ಗವಾಗಿ ಸಂಚಾರ ನಡೆಸಬಹುದು. ಇವರೆಡೂ ಹೆದ್ದಾರಿಗಳಲ್ಲಿ ಘನ ವಾಹನಗಳ ಸಂಚಾರಕ್ಕೆ ನಿಷೇಧ ಇರುತ್ತದೆ. ಸಾರಿಗೆ ಬಸ್ ಹೊರತುಪಡಿಸಿ ಇತರೇ ಘನ ವಾಹನಗಳು ಬದಲಿ ರಸ್ತೆಯನ್ನು ಸಂಚಾರಕ್ಕೆ ಬಳಸಿಕೊಳ್ಳಬೇಕು ಎಂಬುದಾಗಿ ಜಿಲ್ಲಾಧಿಕಾರಿ ಗಿರೀಶ್ ಆರ್. ಆದೇಶದಲ್ಲಿ ತಿಳಿಸಿದ್ದಾರೆ.
ಕಳೆದ ಬಾರಿಯೂ ಶಿರಾಡಿ ಘಾಟ್ ಹೆದ್ದಾರಿಯಲ್ಲಿ ಭೂಕುಸಿತ ಆಗಿದ್ದರಿಂದ ವಾಹನಗಳ ಸಂಚಾರವನ್ನು ನಿಷೇಧ ಮಾಡಲಾಗಿತ್ತು. ಈ ಬಾರಿಯೂ ವಾಹನ ಸಂಚಾರ ನಿಷೇಧಿಸಲಾಗಿದ್ದು, ಮಳೆ ಕಡಿಮೆಯಾಗುವ ವರೆಗೂ ಇದು ಮುಂದುವರಿಯುವ ಸಾಧ್ಯತೆ ಇದೆ.
Mangalore Vehicles banned moving to shiradi ghat due to extreme landslide orders Hassan dc.
22-06-26 12:51 pm
HK News Staffer
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
22-06-26 12:55 pm
HK News Staffer
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
21-06-26 08:59 pm
HK News Staffer
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
22-06-26 12:53 pm
HK News Staffer
ಕಡಬ ; ಪತ್ನಿಯನ್ನು ಕಡಿದು ಕೊಂದು ನೇಣು ಬಿಗಿದು ಸಾವಿ...
20-06-26 09:13 pm
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm