ಬ್ರೇಕಿಂಗ್ ನ್ಯೂಸ್
02-10-20 03:01 pm Headline Karnataka News Network ಕರ್ನಾಟಕ
ಕಾಸರಗೋಡು, ಅ.2: ಕಳೆದ ಒಂದು ವಾರದಿಂದ ಕೊರೋನ ಸೋಂಕಿತರ ಸಂಖ್ಯೆ ಗಣನೀಯವಾಗಿ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಕೇರಳದಲ್ಲಿ ಅ.3ರಿಂದ ಅ.31ರ ತನಕ ಸೆಕ್ಷನ್ 144ರಂತೆ ನಿಷೇಧಾಜ್ಞೆ ಜಾರಿಗೊಳಿಸಿ ಸರಕಾರ ಆದೇಶ ಹೊರಡಿಸಿದೆ. ನಿಷೇಧಾಜ್ಞೆಯನ್ವಯ ಐದಕ್ಕಿಂತ ಅಧಿಕ ಮಂದಿ ಗುಂಪು ಸೇರುವುದನ್ನು ನಿಷೇಧಿಸಲಾಗಿದೆ.
ಅಕ್ಟೋಬರ್ 3 ರ ಬೆಳಗ್ಗೆ 9ರಿಂದ 31ರ ತನಕ ನಿಷೇಧಾಜ್ಞೆ ಜಾರಿಯಲ್ಲಿರಲಿದೆ. ಆಯಾ ಜಿಲ್ಲೆಗಳ ಸ್ಥಿತಿ ಗತಿ ಮನಗಂಡು ನಿಯಂತ್ರಣಗಳಲ್ಲಿ ಸಡಿಲಿಕೆ ಬೇಕೆ ಎಂಬ ಬಗ್ಗೆ ತೀರ್ಮಾನ ತೆಗೆದುಕೊಳ್ಳಲು ಜಿಲ್ಲಾಧಿಕಾರಿಗಳಿಗೆ ಅಧಿಕಾರ ನೀಡಲಾಗಿದೆ.

ವಿವಾಹ, ಮರಣ ನಂತರದ ಕಾರ್ಯಕ್ರಮ ಮೊದಲಾದವುಗಳಿಗೆ ವಿನಾಯಿತಿ ನೀಡಲಾಗಿದೆ. ಆದರೆ ಕೋವಿಡ್ ಮಾನದಂಡದಂತೆ ಈ ಕಾರ್ಯಕ್ರಮ ನಡೆಸಲು ಅನುಮತಿ ಸಿಗಲಿದೆ. ಜನರು ಸೇರುವ ಎಲ್ಲ ಕಾರ್ಯಕ್ರಮಗಳಿಗೆ ನಿಷೇಧ ಹೇರಲಾಗಿದೆ.
ಎರಡು ದಿನಗಳ ಹಿಂದೆ ನಡೆದ ಸರ್ವ ಪಕ್ಷ ಸಭೆಯಲ್ಲಿ ಪ್ರತಿಭಟನೆ ಸೇರಿದಂತೆ ಜನರು ಗುಂಪುಗೂಡುವ ಎಲ್ಲ ಕಾರ್ಯಕ್ರಮಗಳಿಗೂ ನಿರ್ಬಂಧ ಹೇರಲು ತೀರ್ಮಾನಿಸಲಾಗಿತ್ತು. ಅದರಂತೆ ಸರಕಾರ ಈ ಆದೇಶ ಹೊರಡಿಸಿದೆ.
ಕೇರಳದಲ್ಲಿ ಕೋವಿಡ್ -19 ಸೋಂಕಿತರ ಸಂಖ್ಯೆ ದಿನಂಪ್ರತಿ ಎಂಟು ಸಾವಿರವನ್ನು ದಾಟುತ್ತಿದ್ದು, ಕಾಸರಗೋಡು ಜಿಲ್ಲೆಯಲ್ಲೂ 500ರ ಗಡಿಗೆ ತಲುಪಿದೆ. ಕಳೆದ 20 ದಿನಗಳಿಂದ ಅನಿಯಂತ್ರಿತವಾಗಿ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವುದರಿಂದ ಲಾಕ್ ಡೌನ್ ಸಡಿಲಿಕೆಯನ್ನು ಮತ್ತೆ ಬಿಗಿ ಗೊಳಿಸಲು ಕೇರಳ ಸರಕಾರ ಈಗಾಗಲೇ ತೀರ್ಮಾ ನಿಸಿದೆ.
16-03-26 05:52 pm
HK News Staffer
ಐಎಎಸ್ ಅಧಿಕಾರಿಯೆಂದು ಪೋಸು ಕೊಟ್ಟು ಜನಸಾಮಾನ್ಯರಿಗೆ,...
16-03-26 03:36 pm
Chitradurga Accident: ಚಿತ್ರದುರ್ಗದಲ್ಲಿ ಭೀಕರ ಅಪ...
15-03-26 04:27 pm
ಲಿವರ್ ಸಿರೋಸಿಸ್ ಕಾಯಿಲೆಗೆ ತುತ್ತಾಗಿದ್ದ ತಂದೆ ; ತನ...
14-03-26 10:14 pm
ಮಲೆನಾಡಿಗೆ ಇಂಡಿಗೋ ಆಘಾತ ; ವಿಮಾನ ದುರಂತ ಹಿನ್ನೆಲೆ,...
13-03-26 12:09 pm
16-03-26 02:44 pm
HK News Staffer
ಯುಪಿಎಸ್ಸಿ ಪಾಸ್, ಐಎಎಸ್ ಅಧಿಕಾರಿ ಆಗುತ್ತೇನೆಂದು ನಂ...
16-03-26 12:38 pm
ಒಡಿಶಾದ ಕಟಕ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ ; I...
16-03-26 12:34 pm
ಇರಾನ್ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ರಷ್ಯಾಕ್ಕೆ ;...
15-03-26 05:37 pm
ಎಪ್ರಿಲ್ 9 ಮತ್ತು 23 ; ಕೇರಳ, ತಮಿಳುನಾಡಿನಲ್ಲಿ ಒಂದ...
15-03-26 05:08 pm
16-03-26 02:46 pm
HK News Staffer
Besant Evening College, Blood Donation: ಬೆಸೆಂ...
15-03-26 09:10 pm
Udupi Accident: ತಾಯಿ-ಮಗ ತೆರಳುತ್ತಿದ್ದ ಸ್ಕೂಟರ್...
14-03-26 09:26 pm
ಕಂದಾಯ- ಅರಣ್ಯ ಭೂಮಿ ಗುರುತಿಸಲು ಜಿಲ್ಲಾ ಮಟ್ಟದಲ್ಲಿ...
14-03-26 08:31 pm
ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ಬಂಟ್ವಾಳದ ಯುವ ಛಾಯಾ...
14-03-26 06:07 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am