ಬ್ರೇಕಿಂಗ್ ನ್ಯೂಸ್
24-07-22 01:28 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 24 : ಗಾಂಜಾ ಗ್ಯಾಂಗ್ ಬೆನ್ನತ್ತಿ ಆಂಧ್ರ ಪ್ರದೇಶಕ್ಕೆ ತೆರಳಿದ್ದ ಶಿವಾಜಿನಗರ ಠಾಣೆ ಪೊಲೀಸರ ಕಾರು ಚಿತ್ತೂರಿನ ಬಳಿ ಅಪಘಾತಕ್ಕೀಡಾಗಿದ್ದು ಪಿಎಸ್ಐ ಸೇರಿ ಮೂವರು ಪೊಲೀಸ್ ಸಿಬ್ಬಂದಿ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.
ಪೊಲೀಸ್ ಸಿಬ್ಬಂದಿಯ ಇನ್ನೋವಾ ಕಾರು ರಸ್ತೆ ಡಿವೈಡರ್ಗೆ ಡಿಕ್ಕಿಯಾಗಿ ಸುಮಾರು 30 ಅಡಿ ತಗ್ಗಿನಲ್ಲಿದ್ದ ಮತ್ತೊಂದು ರಸ್ತೆಗೆ ಪಲ್ಟಿಯಾಗಿ ಬಿದ್ದಿದೆ. ಇದರಿಂದ ತೀವ್ರ ಗಾಯಗೊಂಡ ಮೂವರು ಪೊಲೀಸ್ ಸಿಬಂದಿ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ ಮತ್ತು ಇನ್ನಿಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.


ಶಿವಾಜಿನಗರ ಠಾಣೆಯ ಪಿಎಸ್ಐ ಅವಿನಾಶ್, ಪ್ರೊಬೇಷನರಿ ಪಿಎಸ್ಐ ದೀಕ್ಷಿತ್, ಪೊಲೀಸ್ ಕಾನ್ಸ್ಟೇಬಲ್ ಅನಿಲ್ ಸೇರಿ ಆರು ಸಿಬಂದಿಯ ತಂಡವು ಖಾಸಗಿ ಏಜನ್ಸಿಯಿಂದ ಇನ್ನೋವಾ ಕಾರನ್ನು ಬಾಡಿಗೆ ಪಡೆದು ಗಾಂಜಾ ಗ್ಯಾಂಗ್ ಹಿಡಿಯಲು ಆಂಧ್ರಕ್ಕೆ ತೆರಳಿದ್ದರು. ನಸುಕಿನ ಜಾವ 3 ಗಂಟೆ ಸುಮಾರಿಗೆ ತಂಡವೊಂದನ್ನು ಬೆನ್ನಟ್ಟುವ ಧಾವಂತದಲ್ಲಿ ಪೊಲೀಸರ ಕಾರು ಡಿವೈಡರ್ ಹೊಡೆದು ಪಲ್ಟಿಯಾಗಿದೆ ಎನ್ನಲಾಗುತ್ತಿದೆ.

ಸಬ್ ಇನ್ಸ್ಪೆಕ್ಟರ್ ಅವಿನಾಶ್, ಕಾನ್ಸ್ಟೇಬಲ್ ಅನಿಲ್ ಹಾಗೂ ಖಾಸಗಿ ಕಾರು ಚಾಲಕ ಮೃತಪಟ್ಟಿದ್ದಾರೆ. ಪ್ರೊಬೆಷನರಿ ಪಿಎಸ್ಐ ದೀಕ್ಷಿತ್, ಕಾನ್ಸ್ಟೇಬಲ್ ಶರಣಬಸವ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಶನಿವಾರ ಹೊರಟಿದ್ದ ಪೊಲೀಸರ ತಂಡ ಚಿತ್ತೂರಿನಲ್ಲಿ ಆರೋಪಿಗಳು ಸಿಗದ ಹಿನ್ನೆಲೆಯಲ್ಲಿ ತಿರುಪತಿಯತ್ತ ಹೊರಟಿತ್ತು. ಈ ವೇಳೆ ರಸ್ತೆ ವಿಭಜಕಕ್ಕೆ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಇತ್ತ ಶಿವಾಜಿನಗರ ಪೊಲೀಸ್ ಠಾಣೆಯಲ್ಲಿ ಸಹೋದ್ಯೋಗಿಗಳ ದಾರುಣ ಸಾವು ಹಿನ್ನಲೆಯಲ್ಲಿ ನೀರವ ಮೌನ ಆವರಿಸಿದೆ.
Bangalore Shivajinagara police meet with a ghastly accident in Andhra by chasing Ganja Gang at Andhra, three dead on spot including Police Sub Inspector.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
03-02-26 09:06 pm
HK News Desk
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
04-02-26 12:29 pm
Mangalore Correspondent
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
Mangalore, Volvo Driver Satish Shetty: ರಸ್ತೆ...
03-02-26 09:49 pm
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm