ಬ್ರೇಕಿಂಗ್ ನ್ಯೂಸ್
25-07-22 03:18 pm HK News Desk ಕರ್ನಾಟಕ
ಶಿವಮೊಗ್ಗ, ಜುಲೈ 25 : ಬಿಜೆಪಿಯ ನಾಲ್ಕು ಜನ ಪಾಪಿಗಳು ಸೇರಿ ಬಿ.ಎಸ್ ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಿದ್ದಾರೆ ಎಂದು ಸಾಗರದ ಮಾಜಿ ಶಾಸಕ, ಕಾಂಗ್ರೆಸ್ ಮುಖಂಡ ಬೇಳೂರು ಗೋಪಾಲಕೃಷ್ಣ ಆರೋಪಿಸಿದ್ದಾರೆ.
ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ, ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್ ಸಂತೋಷ ಹಾಗೂ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಈ ನಾಲ್ಕು ಜನರು ಸೇರಿ ಯಡಿಯೂರಪ್ಪ ಕುಟುಂಬವನ್ನು ತೆಗೀಬೇಕು ಅಂತಾ ಕಣ್ಣೀರು ಹಾಕಿಸಿ ರಾಜೀನಾಮೆ ನೀಡುವಂತೆ ಮಾಡಿಸಿದ್ದರು. ಇವರಿಗೆ ಯಡಿಯೂರಪ್ಪರ ನೋವು, ಶಾಪ ತಟ್ಟದೆ ಬಿಡುವುದಿಲ್ಲ ಎಂದರು.

ಬಿಜೆಪಿಯವರೇ ಈಶ್ವರಪ್ಪ ಅವರಿಗೆ ಹೊಂಡ ತೆಗೆಯುತ್ತಾರೆ. ಈಶ್ವರಪ್ಪ ತಮ್ಮ ರಾಜಕೀಯ ನಾಯಕತ್ವ ಉಳಿಸಿಕೊಳ್ಳಲು ಮಾಡಿರುವ ಕುತಂತ್ರ ಇದು. ಬೆಳಗಾವಿಯ ಗುತ್ತಿಗೆದಾರ ಸಂತೋಷ ಪಾಟೀಲ್ ಕುಟುಂಬದ ಶಾಪ ಈಶ್ವರಪ್ಪನವರಿಗೆ ತಟ್ಟದೆ ಇರಲ್ಲ. ರಾಜ್ಯದಲ್ಲಿ ಅವರ ಸರ್ಕಾರ ಇದೆ. ಹಾಗಾಗಿ ಅವರಿಗೆ ಬೇಕಾದ ಹಾಗೇ ರಿಪೋರ್ಟ್ ಮಾಡಿಸಿಕೊಂಡಿದ್ದಾರೆ ಎಂದು ಬೇಳೂರು ಗೋಪಾಲಕೃಷ್ಣ ಆರೋಪಿಸಿದರು.

ಸಂತೋಷ ಪ್ರಕರಣವನ್ನು ಸಿಬಿಐಗೆ ಹಸ್ತಾಂತರಿಸಲಿ. ಹರ್ಷ ಒಬ್ಬನೇ ಹಿಂದೂ ನಾ? ಸಂತೋಷ್ ಪಾಟೀಲ್ ಕೂಡ ಹಿಂದೂ ತಾನೇ. ಅಲ್ಲದೇ ಅವರ ಪಕ್ಷದ ಕಾರ್ಯಕರ್ತ. ಅವರಿಗೇಕೆ ಬಿಜೆಪಿ ನಾಯಕರು ಆರ್ಥಿಕ ಸಹಾಯ ಮಾಡಲಿಲ್ಲ ಎಂದು ಪ್ರಶ್ನಿಸಿದರು.
ಧರ್ಮ ವಿರೋಧಿ ಹೇಳಿಕೆ ನೀಡುವವರನ್ನು ಬಂಧಿಸಲು ಕಠಿಣ ಕಾನೂನು ಜಾರಿಗೆ ತನ್ನಿ. ಜಿಲ್ಲಾ ಉಸ್ತುವಾರಿ ಸಚಿವರು ಜಿಲ್ಲೆಯಲ್ಲಿ ಅಷ್ಟು ಹಾನಿಯಾದರೂ ಒಮ್ಮೆ ಮಾತ್ರ ಭೇಟಿ ನೀಡಿ ಹೋಗಿದ್ದಾರೆ. ಇವರಿಗೆ ಜನರ ಹಿತ ಮುಖ್ಯ ಅಲ್ಲ ಎಂದು ಬೇಳೂರು ಗೋಪಾಲಕೃಷ್ಣ ವಾಗ್ದಾಳಿ ನಡೆಸಿದರು.
BSY Retirement, 4 people are the main reason and responsible for his Retirement from karnataka Poll Politics slams Belur Gopalkrishna in Shivamogga.
10-04-26 06:53 pm
HK News Desk
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
11-04-26 09:05 pm
Giridhar Shetty
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
11-04-26 05:05 pm
Mangalore Correspondent
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
Puc 2026, Result, Mangalore: ಮೂವರು ಮಕ್ಕಳಾದರೂ...
10-04-26 12:35 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm