ಬ್ರೇಕಿಂಗ್ ನ್ಯೂಸ್
25-07-22 03:18 pm HK News Desk ಕರ್ನಾಟಕ
ಶಿವಮೊಗ್ಗ, ಜುಲೈ 25 : ಬಿಜೆಪಿಯ ನಾಲ್ಕು ಜನ ಪಾಪಿಗಳು ಸೇರಿ ಬಿ.ಎಸ್ ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಿದ್ದಾರೆ ಎಂದು ಸಾಗರದ ಮಾಜಿ ಶಾಸಕ, ಕಾಂಗ್ರೆಸ್ ಮುಖಂಡ ಬೇಳೂರು ಗೋಪಾಲಕೃಷ್ಣ ಆರೋಪಿಸಿದ್ದಾರೆ.
ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ, ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್ ಸಂತೋಷ ಹಾಗೂ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಈ ನಾಲ್ಕು ಜನರು ಸೇರಿ ಯಡಿಯೂರಪ್ಪ ಕುಟುಂಬವನ್ನು ತೆಗೀಬೇಕು ಅಂತಾ ಕಣ್ಣೀರು ಹಾಕಿಸಿ ರಾಜೀನಾಮೆ ನೀಡುವಂತೆ ಮಾಡಿಸಿದ್ದರು. ಇವರಿಗೆ ಯಡಿಯೂರಪ್ಪರ ನೋವು, ಶಾಪ ತಟ್ಟದೆ ಬಿಡುವುದಿಲ್ಲ ಎಂದರು.

ಬಿಜೆಪಿಯವರೇ ಈಶ್ವರಪ್ಪ ಅವರಿಗೆ ಹೊಂಡ ತೆಗೆಯುತ್ತಾರೆ. ಈಶ್ವರಪ್ಪ ತಮ್ಮ ರಾಜಕೀಯ ನಾಯಕತ್ವ ಉಳಿಸಿಕೊಳ್ಳಲು ಮಾಡಿರುವ ಕುತಂತ್ರ ಇದು. ಬೆಳಗಾವಿಯ ಗುತ್ತಿಗೆದಾರ ಸಂತೋಷ ಪಾಟೀಲ್ ಕುಟುಂಬದ ಶಾಪ ಈಶ್ವರಪ್ಪನವರಿಗೆ ತಟ್ಟದೆ ಇರಲ್ಲ. ರಾಜ್ಯದಲ್ಲಿ ಅವರ ಸರ್ಕಾರ ಇದೆ. ಹಾಗಾಗಿ ಅವರಿಗೆ ಬೇಕಾದ ಹಾಗೇ ರಿಪೋರ್ಟ್ ಮಾಡಿಸಿಕೊಂಡಿದ್ದಾರೆ ಎಂದು ಬೇಳೂರು ಗೋಪಾಲಕೃಷ್ಣ ಆರೋಪಿಸಿದರು.

ಸಂತೋಷ ಪ್ರಕರಣವನ್ನು ಸಿಬಿಐಗೆ ಹಸ್ತಾಂತರಿಸಲಿ. ಹರ್ಷ ಒಬ್ಬನೇ ಹಿಂದೂ ನಾ? ಸಂತೋಷ್ ಪಾಟೀಲ್ ಕೂಡ ಹಿಂದೂ ತಾನೇ. ಅಲ್ಲದೇ ಅವರ ಪಕ್ಷದ ಕಾರ್ಯಕರ್ತ. ಅವರಿಗೇಕೆ ಬಿಜೆಪಿ ನಾಯಕರು ಆರ್ಥಿಕ ಸಹಾಯ ಮಾಡಲಿಲ್ಲ ಎಂದು ಪ್ರಶ್ನಿಸಿದರು.
ಧರ್ಮ ವಿರೋಧಿ ಹೇಳಿಕೆ ನೀಡುವವರನ್ನು ಬಂಧಿಸಲು ಕಠಿಣ ಕಾನೂನು ಜಾರಿಗೆ ತನ್ನಿ. ಜಿಲ್ಲಾ ಉಸ್ತುವಾರಿ ಸಚಿವರು ಜಿಲ್ಲೆಯಲ್ಲಿ ಅಷ್ಟು ಹಾನಿಯಾದರೂ ಒಮ್ಮೆ ಮಾತ್ರ ಭೇಟಿ ನೀಡಿ ಹೋಗಿದ್ದಾರೆ. ಇವರಿಗೆ ಜನರ ಹಿತ ಮುಖ್ಯ ಅಲ್ಲ ಎಂದು ಬೇಳೂರು ಗೋಪಾಲಕೃಷ್ಣ ವಾಗ್ದಾಳಿ ನಡೆಸಿದರು.
BSY Retirement, 4 people are the main reason and responsible for his Retirement from karnataka Poll Politics slams Belur Gopalkrishna in Shivamogga.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
03-02-26 09:06 pm
HK News Desk
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
04-02-26 12:29 pm
Mangalore Correspondent
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
Mangalore, Volvo Driver Satish Shetty: ರಸ್ತೆ...
03-02-26 09:49 pm
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm