ಬ್ರೇಕಿಂಗ್ ನ್ಯೂಸ್
25-07-22 10:49 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 25 : ಇತ್ತೀಚೆಗೆ ಯಡಿಯೂರಪ್ಪ ಕಾಲದಲ್ಲಿ ನೇಮಕಗೊಂಡಿದ್ದ ನಿಗಮ ಮಂಡಳಿ ಅಧ್ಯಕ್ಷರನ್ನು ವಜಾ ಮಾಡಲಾಗಿತ್ತು. ಇದೀಗ 22 ನಿಗಮ ಮಂಡಳಿಗಳಿಗೆ ಹೊಸ ಅಧ್ಯಕ್ಷರನ್ನ ನಾಮನಿರ್ದೇಶನ ಮಾಡಿ ರಾಜ್ಯ ಸರ್ಕಾರ ಸೋಮವಾರ ಆದೇಶ ಹೊರಡಿಸಿದೆ.
ಇತ್ತೀಚೆಗೆ ಶಾಸಕರು, ಮಾಜಿ ಶಾಸಕರು ಅಧ್ಯಕ್ಷರಿರುವ ನಿಗಮ ಮಂಡಳಿ ಬಿಟ್ಟು ಉಳಿದ 54 ನಿಗಮ ಮಂಡಳಿಗಳ ಅಧ್ಯಕ್ಷರ ನೇಮಕಾತಿಯನ್ನು ರಾಜ್ಯ ಸರ್ಕಾರ ವಾಪಸ್ ಪಡೆದಿತ್ತು. ಇದೀಗ ಆ ಪೈಕಿ 22 ನಿಗಮ ಮಂಡಳಿಗಳಿಗೆ ಅಧ್ಯಕ್ಷರ ನೇಮಕಾತಿ ಮಾಡಿದೆ. ಕರಾವಳಿ ಭಾಗದ ಇಬ್ಬರ ಹೆಸರು ಇದೆ. ಗೇರು ಅಭಿವೃದ್ಧಿ ನಿಗಮದ ಮಣಿರಾಜ ಶೆಟ್ಟಿ ಮೊನ್ನೆ ತೆರವಾದ ಪಟ್ಟಿಯಲ್ಲೂ ಇತ್ತು. ಇದೀಗ ಹೊಸ ಪಟ್ಟಿಯಲ್ಲಿ ಅದೇ ಹೆಸರು ಗೇರು ಅಭಿವೃದ್ಧಿ ನಿಗಮಕ್ಕಿದೆ. ಸುಳ್ಯ ಮೂಲದ ಎವಿ ತೀರ್ಥರಾಮ ಅವರನ್ನು ಮೀನುಗಾರಿಕಾ ನಿಗಮದ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ. ಸಾಮಾನ್ಯವಾಗಿ ಮೀನುಗಾರಿಕಾ ವೃತ್ತಿ ನಡೆಸುವ ಬೋವಿ, ಖಾರ್ವಿ, ಮೊಗವೀರ ಸಮುದಾಯದವರಿಗೆ ಈ ನಿಗಮದ ಹೊಣೆ ಕೊಡುತ್ತಿದ್ದರು. ಈ ಬಾರಿ ಸುಳ್ಯ ಮೂಲದ ವ್ಯಕ್ತಿಗೆ ನಿಗಮದ ಹೊಣೆ ನೀಡಿರುವುದು ಬಿಜೆಪಿಯಲ್ಲೇ ಅಸಮಾಧಾನಕ್ಕೆ ಕಾರಣವಾಗಿದೆ.
ನಿಗಮ-ಮಂಡಳಿಗೆ ಹೊಸ ಅಧ್ಯಕ್ಷರ ಪಟ್ಟಿ ಇಂತಿದೆ.
1. ಸಫಾಯಿ ಕರ್ಮಚಾರಿ ನಿಗಮ - ಕೆ.ಪಿ.ವೆಂಕಟೇಶ್
2. ಅಲೆಮಾರಿ ಅಭಿವೃದ್ಧಿ ನಿಗಮ-ದೇವೇಂದ್ರನಾಥ್.ಕೆ
3. ಕಾಡುಗೊಲ್ಲ ಅಭಿವೃದ್ಧಿ ನಿಗಮ-ಚಂಗಾವರ ಮಾರಣ್ಣ
4. ವಸ್ತುಪ್ರದರ್ಶನ ಪ್ರಾಧಿಕಾರ-ಮಿರ್ಲೆ ಶ್ರೀನಿವಾಸ
5. ಮಾವು ಅಭಿವೃದ್ಧಿ ನಿಗಮ-ಎಂ.ಕೆ.ವಾಸುದೇವ್
6. ದ್ರಾಕ್ಷಿ, ವೈನ್ ಬೋರ್ಡ್ - N.M.ರವಿ ನಾರಾಯಣ ರೆಡ್ಡಿ
7. ರೇಷ್ಮೆ ಮಾರಾಟ ಮಂಡಳಿ - ಬಿ.ಸಿ.ನಾರಾಯಣ ಸ್ವಾಮಿ
8. ಲಿಂಬೆ ಅಭಿವೃದ್ಧಿ ಮಂಡಳಿ-ಚಂದ್ರಶೇಖರ ಕವಟಗಿ
9. ಗೇರು ಅಭಿವೃದ್ಧಿ ನಿಗಮ-ಮಣಿರಾಜ ಶೆಟ್ಟಿ
10.ಪಶ್ಚಿಮ ಘಟ್ಟಗಳ ಕಾರ್ಯಪಡೆ - ಗೋವಿಂದ ನಾಯ್ಕ್
11. ಮೈಸೂರು ಮೃಗಾಲಯ ಪ್ರಾಧಿಕಾರ-M.ಶಿವಕುಮಾರ್
12. ಅರಣ್ಯ ಅಭಿವೃದ್ಧಿ ನಿಗಮ-ರೇವಣ್ಣಪ್ಪ ಕೋಳಗಿ
13. ಜೀವ ವೈವಿದ್ಯ ಮಂಡಳಿ - ರವಿಕಾಳಪ್ಪ
14. ಕುರಿ, ಉಣ್ಣೆ ಅಭಿವೃದ್ಧಿ ನಿಗಮ-ಧರ್ಮಣ್ಣ ದೊಡ್ಡಮನೆ
15. ಮೀನುಗಾರಿಕೆ ಅಭಿವೃದ್ಧಿ ನಿಗಮ- ಎ.ವಿ ತೀರ್ಥರಾಮ
16. ಪೇಂಟ್ಸ್, ವಾರ್ನಿಷ್ - ರಘು ಕೌಟಿಲ್ಯ
17. ಜವಳಿ ಅಭಿವೃದ್ಧಿ ನಿಗಮ- ವಿರೂಪಾಕ್ಷಗೌಡ
18. ಖಾದಿ, ಗ್ರಾಮೋದ್ಯೋಗ ಮಂಡಳಿ-K.V.ನಾಗರಾಜ್
19. ಕರಕುಶಲ ಅಭಿವೃದ್ಧಿ ನಿಗಮ-ಮಾರುತಿ ಅಷ್ಟಗಿ
20. ತುಂಗಾಭದ್ರ ಯೋಜನೆ (ಕಾಡಾ)-ಕೊಲ್ಲಾ ಶೇಷಗಿರಿ ರಾವ್
21. ಕಾವೇರಿ ಜಲಾನಯನ ಯೋಜನೆ-ನಿಜಗುಣರಾಜು
22. ಮದ್ಯಪಾನ ಸಂಯಮ ಮಂಡಳಿ-ಮಲ್ಲಿಕಾರ್ಜುನ ತುಬಾಕಿ
22 board and corporation presidents list announced by Karnataka state government.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm