ಬ್ರೇಕಿಂಗ್ ನ್ಯೂಸ್
02-08-22 11:26 am HK News Desk ಕರ್ನಾಟಕ
ಕಾರವಾರ, ಆಗಸ್ಟ್ 2: ಉತ್ತರ ಕನ್ನಡ ಜಿಲ್ಲೆ ಭಟ್ಕಳ ತಾಲ್ಲೂಕಿನ ಮುಟ್ಟಳ್ಳಿ ಗ್ರಾಮದಲ್ಲಿ ಮನೆ ಮೇಲೆ ಗುಡ್ಡ ಕುಸಿದಿದೆ. ಮನೆಯಲ್ಲಿದ್ದ ನಾಲ್ವರು ಮೃತಪಟ್ಟಿರಬಹುದು ಎಂದು ಶಂಕಿಸಲಾಗಿದೆ ಆದರೆ ಈವರೆಗೆ ಅವರ ಸ್ಥಿತಿಗತಿ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ.
ಅಗ್ನಿಶಾಮಕ ಮತ್ತು ತುರ್ತುಸೇವೆಗಳು, ರಾಜ್ಯ ಮತ್ತು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಸ್ಥಳಕ್ಕೆ ಧಾವಿಸಿದೆ. ಆದರೆ ಮಳೆನೀರು ರಸ್ತೆ ಮೇಲೆ ಹರಿಯುತ್ತಿರುವುದರಿಂದ ದುರಂತ ಸ್ಥಳ ತಲುಪಲು ಈವರೆಗೆ ಸಾಧ್ಯವಾಗಿಲ್ಲ. ಸ್ಥಳೀಯ ಗ್ರಾಮ ಪಂಚಾಯಿತಿಯು ಸ್ಥಳಕ್ಕೆ ಜೆಸಿಬಿ ಕಳಿಸಲು ಯತ್ನಿಸುತ್ತಿದೆ. ಆದರೆ ರಸ್ತೆ ಹಾಳಾಗಿರುವುದರಿಂದ ಅದೂ ಸಾಧ್ಯವಾಗಿಲ್ಲ. ಮನೆಯ ಮೇಲೆ ಕುಸಿದಿರುವ ಮಣ್ಣು ತೆರವುಗೊಳಿಸಿ, ಸಿಲುಕಿರುವವರನ್ನು ಕಾಪಾಡಲು ಅಕ್ಕಪಕ್ಕದ ಜನರೂ ಶ್ರಮಿಸುತ್ತಿದ್ದಾರೆ.

ಮನೆಯ ಮೇಲೆ ಗುಡ್ಡ ಕುಸಿದಾಗ ಯಜಮಾನಿ ಲಕ್ಷ್ಮೀ ನಾರಾಯಣ ನಾಯ್ಕ (60), ಮಗಳು ಲಕ್ಷ್ಮೀ ನಾರಾಯಣ ನಾಯ್ಕ (45), ಮಗ ಅನಂತ ನಾರಾಯಣ ನಾಯ್ಕ (38), ಹಾಡುವಳ್ಳಿ ಬಡಬಾಗಿಲಿನ ತಂಗಿಮಗ ಪ್ರವೀಣ್ ರಾಮಕೃಷ್ಣ ನಾಯ್ಕ (16) ಇದ್ದರು ಎಂದು ಸ್ಥಳೀಯರು ಹೇಳಿದ್ದಾರೆ.

ಘಟನೆ ಕುರಿತು ಪ್ರತಿಕ್ರಿಯಿಸಿರುವ ಉತ್ತರ ಕನ್ನಡ ಜಿಲ್ಲಾಧಿಕಾರಿ ಮುಲೈ ಮುಗಿಲನ್, ಗುಡ್ಡ ಕುಸಿದು ನಾಲ್ವರು ಮೃತಪಟ್ಟಿರುವ ಸಾಧ್ಯತೆ ಇದೆ. ಅಧಿಕೃತವಾಗಿ ಇನ್ನೂ ನಮಗೆ ಮಾಹಿತಿ ಸಿಕ್ಕಿಲ್ಲ. ಜಿಲ್ಲೆಯ ವಿವಿಧೆಡೆ ಸಂತ್ರಸ್ತರನ್ನು ಕಾಪಾಡುವ, ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸುವ ಕೆಲಸ ನಡೆಯುತ್ತಿದೆ’ ಎಂದು ಹೇಳಿದರು.

ಉಪವಿಭಾಗಾಧಿಕಾರಿ ಮಮತಾ ದೇವಿ ಮಾತನಾಡಿ, ‘ಮಳೆ ಪ್ರಮಾಣ ಬೆಳಿಗ್ಗೆಗೆ ಹೋಲಿಸಿದರೆ ಕಡಿಮೆಯಾಗಿದೆ. ರಸ್ತೆಗಳು ಮುಳುಗಿರುವುದರಿಂದ ಮುಟ್ಟಳ್ಳಿ ತಲುಪಲು ರಕ್ಷಣಾ ತಂಡಗಳಿಗೆ ಈವರೆಗೆ ಸಾಧ್ಯವಾಗಿಲ್ಲ. ಬದಲಿ ಮಾರ್ಗದಿಂದ ಸ್ಥಳ ತಲುಪಲು ಇದೀದ ಪ್ರಯತ್ನ ಆರಂಭಿಸಲಾಗಿದೆ. ಕುಂದಾಪುರದಿಂದಲೂ ಅಗ್ನಿಶಾಮಕ ದಳದ ಸಿಬ್ಬಂದಿ ಬಂದಿದ್ದಾರೆ’ ಎಂದು ವಿವರಿಸಿದರು.

ಉತ್ತರ ಕನ್ನಡ ಜಿಲ್ಲೆ ಭಟ್ಕಳ ತಾಲೂಕಿನಲ್ಲಿ ಮಳೆಯಿಂದಾಗಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸಂಚಾರ ಸ್ಥಗಿತಗೊಂಡಿದೆ. ಶಿರಾಲಿ ಮತ್ತು ರಂಗಿನಕಟ್ಟೆ ಗ್ರಾಮಗಳು ಹೊರ ಜಗತ್ತಿನೊಂದಿಗೆ ಸಂಪರ್ಕ ಕಳೆದುಕೊಂಡಿವೆ. ಬೈಂದೂರು ರಸ್ತೆ ಸಂಪೂರ್ಣ ಬಂದ್ ಆಗಿರುವುದರಿಂದ ಜನರು ಪರದಾಡುತ್ತಿದ್ದಾರೆ. ಕಾರವಾರ-ಭಟ್ಕಳ ರಸ್ತೆಯಲ್ಲಿ ಸಂಚಾರ ಸ್ಥಗಿತಗೊಂಡು ಕಿಲೊಮೀಟರ್ಗಟ್ಟಲೇ ವಾಹನಗಳು ಸಾಲುಗಟ್ಟಿ ನಿಂತಿವೆ.
Due to heavy rain 🌧 in bhatkal pic.twitter.com/cG9impWWTb
— saifulla khateeb (@saiyyfu) August 2, 2022
Pray for coastal Karnataka, it is raining non-stop since yesterday evening.
— Syed Maqbool (@maqbool_sm) August 2, 2022
Historic flooding is reported from many areas.
IMD predicts heavy rain till August 6.#CoastalKarnataka
The video is from the Bhatkal. pic.twitter.com/VidkFxEGGO
Due to heavy rain 🌧 in bhatkal pic.twitter.com/cG9impWWTb
— saifulla khateeb (@saiyyfu) August 2, 2022
Pray for coastal Karnataka, it is raining non-stop since yesterday evening.
— Syed Maqbool (@maqbool_sm) August 2, 2022
Historic flooding is reported from many areas.
IMD predicts heavy rain till August 6.#CoastalKarnataka
The video is from the Bhatkal. pic.twitter.com/VidkFxEGGO
Heavy rain has been lashing Uttara Kannada district since the last 14 hours. A hill collapsed and slid on a house on Tuesday, August 2 morning at Muttalli in the taluk. Four people are feared dead.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 12:29 pm
Mangalore Correspondent
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
Mangalore, Volvo Driver Satish Shetty: ರಸ್ತೆ...
03-02-26 09:49 pm
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm