ಬ್ರೇಕಿಂಗ್ ನ್ಯೂಸ್
03-10-20 07:51 pm Bangalore Correspondent ಕರ್ನಾಟಕ
ಬೆಂಗಳೂರು, ಅಕ್ಟೋಬರ್ 3: ನಿರೂಪಕಿ, ನಟಿ ಅನುಶ್ರೀ ಪ್ರಕರಣದಲ್ಲಿ 'ಮಾಜಿ ಸಿಎಂ' ಒತ್ತಡ ಹಾಕಿದ್ದಾರೆ ಎಂದು ಸುದ್ದಿ ಪ್ರಸಾರ ಆಗಿದೆ. ಆ ಮಾಜಿ ಸಿಎಂ ಯಾರು ಎಂದು ರಾಜ್ಯದ ಜನರಿಗೆ ಗೊತ್ತಾಗಬೇಕು ಎಂದು ಹೆಚ್. ಡಿ ಕುಮಾರಸ್ವಾಮಿ ಆಗ್ರಹಿಸಿದ್ದಾರೆ.
ಬೆಂಗಳೂರಿನಲ್ಲಿ ಈ ಬಗ್ಗೆ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ದಿನಕ್ಕೊಂದು ಕಪೋಲಕಲ್ಪಿತ ವರದಿಗಳು ಬರುತ್ತಿವೆ. ಇತ್ತೀಚೆಗೆ ಟಿವಿ ಆ್ಯಂಕರ್ ಅನುಶ್ರೀ ವಿಚಾರವಾಗಿ ಏನೇನೋ ಲಿಂಕ್ ಮಾಡಿ ವರದಿಗಳು ಬರುತ್ತಿವೆ. ಮಂಗಳೂರು ಸಿಸಿಬಿ ನೋಟಿಸ್ ನೀಡಿದ ತಕ್ಷಣ ರಾಜ್ಯದ ಮೂವರು ಪ್ರಭಾವಿ ನಾಯಕರಿಗೆ ಒತ್ತಡ ತರಲು ಆ ಹೆಣ್ಣು ಮಗಳು ಫೋನ್ ಮಾಡಿದ್ದಾರೆಂದು ಸುದ್ದಿ ಪ್ರಸಾರ ಆಗಿದೆ. ಸಿಸಿಬಿ ಅಧಿಕಾರಿಗಳಿಗೆ ಮೂವರು ಪ್ರಭಾವಿಗಳ ನಂಬರ್ ಸಿಕ್ಕಿದೆ ಅಂತೆ. ಅವರ ಕಾಲ್ ಲಿಸ್ಟ್ನಲ್ಲಿ ಪ್ರಭಾವಿ ನಾಯಕರ ನಂಬರ್ ನೋಡಿ ಸಿಸಿಬಿ ಪೊಲೀಸ್ ಶಾಕ್ ಆಗಿದ್ದಾರಂತೆ ಎಂದು ವರದಿಯನ್ನು ನೋಡಿದ್ದೇನೆ. ಇದರಿಂದ ನನಗೂ ಶಾಕ್ ಆಗಿದೆ ಎಂದರು.

ಎರಡು ಬಾರಿ ರಾಜ್ಯದ ಮುಖ್ಯಮಂತ್ರಿಯಾಗಿದ್ದು ನಾನು. ಮಾಜಿ ಮುಖ್ಯಮಂತ್ರಿಗಳಲ್ಲಿ ನಾನು, ಸಿದ್ದರಾಮಯ್ಯ, ಎಸ್.ಎಂ.ಕೃಷ್ಣ, ಮೊಯ್ಲಿ, ಜಗದೀಶ್ ಶೆಟ್ಟರ್, ಡಿವಿಎಸ್ ಇನ್ನೂ ಇದ್ದೇವೆ. ಯಾವ ಅಧಿಕಾರಿ ಮಾಜಿ ಸಿಎಂ ಅಂತ ಮಾಹಿತಿ ಕೊಟ್ಟಿದ್ದಾರೆ. ಯಾವ ಆಧಾರದ ಮೇರೆಗೆ ಮಾಜಿ ಮುಖ್ಯಮಂತ್ರಿ ಹೆಸರು ಬಂದಿದೆ. ಯಾರು ಆ ಮಾಜಿ ಸಿಎಂ ಹೇಳಬೇಕು ಎಂದು ಬಹಿರಂಗ ಆಗಬೇಕು ಎಂದು ಕುಮಾರಸ್ವಾಮಿ ಹೇಳಿದರು.

ಆ ಹೆಣ್ಣು ಮಗಳು ಮಾಜಿ ಸಿಎಂ ಜೊತೆ ಮಾತಾಡಿದ್ದರೆ ಸತ್ಯ ಗೊತ್ತಾಗಲಿ. ಯಾರು ಆ ಮಾಜಿ ಸಿಎಂ ಅಂತ ಸಾರ್ವಜನಿಕವಾಗಿ ಮೊದಲು ಜನರ ಮುಂದೆ ಇಡಲಿ. ಯಾವ ಮಾಜಿ ಸಿಎಂ ಮಗನ ಹೆಸರು ಇದೆ ಗೊತ್ತಾಗಲಿ. ನಾನು ಯಾರು ಈ ವರದಿ ಕೊಟ್ಟಿದ್ದಾರೋ ಆ ವರದಿಗಾರರ ಬಳಿ ತಿಳಿದುಕೊಂಡಿದ್ದೇನೆ. ಒಂದು ನಂಬರ್ನಿಂದ ಮಾಹಿತಿ ಕೊಟ್ಟಿದ್ದಾಗಿ ನನಗೆ ವರದಿಗಾರ ಫೋನ್ ನಂಬರ್ ಕೊಟ್ಟಿದ್ದಾರೆ. ಆ ನಂಬರ್ ಯಾರದು ಎಂದು ಪರಿಶೀಲಿಸಿದೆ. ಇದು ಸಿಸಿಬಿಯ ಶಿವಪ್ರಕಾಶ್ ನಾಯಕ್ ಬಳಸುತ್ತಿದ್ದ ನಂಬರ್ ಆಗಿದೆ. ಹೀಗಾಗಿ ಇದರ ಬಗ್ಗೆ ಅಧಿಕಾರಿ ಶಿವಪ್ರಕಾಶ್ ನಾಯಕ್ ಸತ್ಯ ಹೇಳಬೇಕು. ಮಾಹಿತಿ ಕೊಟ್ಟಿರೋದು ಸತ್ಯನಾ ಅನ್ನೋದನ್ನ ಹೇಳಲಿ ಎಂದರು.
ಯಾವ ಮಾಜಿ ಸಿಎಂ ಅಂತ ಜನರು ತಿಳಿದುಕೊಳ್ಳಬೇಕು. ನಾನು ಸರ್ಕಾರಕ್ಕೆ, ಸಿಎಂಗೆ, ಗೃಹ ಸಚಿವರಿಗೆ ಪತ್ರ ಬರೆಯುತ್ತೇನೆ. ಮಾಧ್ಯಮಗಳಲ್ಲಿ ಬರುತ್ತಿರುವ ಸುದ್ದಿಗಳಲ್ಲಿ ಸತ್ಯಾಸತ್ಯತೆ ಏನು ಅನ್ನೋದು ಗೊತ್ತಾಗಬೇಕಿದೆ. ಯಾರು ಮಾಹಿತಿ ಕೊಟ್ಟಿದ್ದಾರೆ? ಯಾರು ಇದ್ದಾರೆ? ಯಾವ ಮಾಜಿ ಸಿಎಂ ಇದ್ದಾರೆ ಅನ್ನೋ ಸತ್ಯ ಗೊತ್ತಾಗಲಿ. ಆ ಮಾಜಿ ಮುಖ್ಯಮಂತ್ರಿ ಯಾರು ಎಂಬುದನ್ನು ಸರ್ಕಾರ ಹೊರ ತರಬೇಕು ಎಂದು ಕುಮಾರಸ್ವಾಮಿ ಆಗ್ರಹಿಸಿದರು.
ಈ ರೀತಿಯ ಕಪೋಲಕಲ್ಪಿತ ವರದಿಗಳನ್ನು ಸುಮ್ಮನೆ ಬಿಡಬಾರದು. ನಾನಂತೂ ಇದನ್ನು ತನಿಖೆಗೆ ಒತ್ತಾಯ ಮಾಡುತ್ತೇನೆ. ನಾನು ಅಷ್ಟು ಸುಲಭಕ್ಕೆ ಬಿಡೋನು ಅಲ್ಲ. ಯಾರು ಒತ್ತಡ ಹಾಕಿದವರು ಅನ್ನೋದು ಗೊತ್ತಾಗಬೇಕು? ಒತ್ತಡ ಹಾಕಿದವನು ಯಾವನೇ ಆಗಿರಲಿ, ಅವನನ್ನ ಒದ್ದು ಒಳಗೆ ಹಾಕಲಿ. ಮಂಗಳೂರು ಕಮಿಷನರ್ಗೂ ನಾನು ಕರೆ ಮಾಡಿ ಮಾತಾಡಿದ್ದೇನೆ ಎಂದು ಎಚ್ಡಿಕೆ ಹೇಳಿದರು.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm