ಬ್ರೇಕಿಂಗ್ ನ್ಯೂಸ್
03-08-20 11:25 am Bangalore Correspondent ಕರ್ನಾಟಕ
ಬೆಂಗಳೂರು : ಎಂಥಹ ಕಾಲ ಬಂದಿದೆ ನೋಡಿ, ವೈದ್ಯೋ ನಾರಾಯಣ ಅಂತ ಹೇಳ್ತೀವಿ. ಆದರೆ ಅವರೇ ಕಾಮುಕರಾದರೆ. ಹೌದು, ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯ ಟ್ರಾಮಾ ಕೇರ್ ಸೆಂಟರ್ನಲ್ಲಿ ಕೆಲಸ ಮಾಡುತ್ತಿದ್ದ ವೈದ್ಯರೊಬ್ಬರು ಕರೋನಾ ರೋಗಿಯ ಮೇಲೂ ಕಾಮದ ವಕ್ರ ದೃಷ್ಟಿ ಬೀರಿದ್ದಾರೆ. ಜುಲೈ 25ರಂದು ನಡೆದ ಈ ಘಟನೆ ಈಗ ಮುನ್ನೆಲೆಗೆ ಬಂದಿದೆ.
ಕರೋನಾದಿಂದ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಮಹಿಳಾ ರೋಗಿಗೆ ವೈದ್ಯರು ಲೈಂಗಿಕ ಕಿರುಕುಳ ನೀಡಿರುವುದಾಗಿ ವಿಕ್ಟೋರಿಯಾ ಆಸ್ಪತ್ರೆಯ ಅಧಿಕಾರಿಗಳೇ ವಿವಿ ಪುರಂ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ರಾತ್ರಿ ಹೊತ್ತು ರೋಗಿಯಿದ್ದ ವಾರ್ಡ್ಗೆ ಬಂದಿದ್ದ ವೈದ್ಯರು ಆಕೆಯ ಖಾಸಗಿ ಭಾಗಗಳನ್ನು ಮುಟ್ಟಿ, ಅಸಹಜವಾಗಿ ವರ್ತಿಸಿದ್ದರು ಎಂದು ಮೂಲಗಳ ಪ್ರಕಾರ ತಿಳಿದು ಬಂದಿದೆ.

ವಿಕ್ಟೋರಿಯಾ ಆಸ್ಪತ್ರೆಯ ಟ್ರಾಮಾ ಕೇರ್ ಸೆಂಟರ್ನಲ್ಲಿ ದಾಖಲಾಗಿದ್ದ ರೋಗಿ ತನಗಾದ ಕೆಟ್ಟ ಅನುಭವವನ್ನು ಅಲ್ಲಿನ ನೋಡಲ್ ಆಫೀಸರ್ ಬಳಿ ಹೇಳಿಕೊಂಡಿದ್ದರು. ನಂತರ ನೋಡಲ್ ಅಧಿಕಾರಿ ಈ ವಿಷಯವನ್ನು ವಿಕ್ಟೋರಿಯಾ ಆಸ್ಪತ್ರೆಯ ಆಡಳಿತ ಮಂಡಳಿಗೆ ತಿಳಿಸಿದ್ದರು. ಪೊಲೀಸರ ಪ್ರಕಾರ, ಆಸ್ಪತ್ರೆಯ ಅಧಿಕಾರಿಗಳು ಆ ಘಟನೆಯ ಬಗೆಗಾಗಲಿ ಅಥವಾ ಆರೋಪಿ ವೈದ್ಯರ ಬಗ್ಗೆಯಾಗಲಿ ಸಂಪೂರ್ಣ ಮಾಹಿತಿ ನೀಡಿಲ್ಲ.
ಈ ಘಟನೆಯ ಬಗ್ಗೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಆಂತರಿಕ ತನಿಖೆ ನಡೆಸಲಾಗುತ್ತಿದೆ. ಅದಾದ ಬಳಿಕ ನಾಲ್ಕೈದು ದಿನಗಳಲ್ಲಿ ಸಂಪೂರ್ಣ ಮಾಹಿತಿಯನ್ನು ಪೊಲೀಸರಿಗೆ ನೀಡಲಾಗುವುದು ಎಂದು ವಿಕ್ಟೋರಿಯಾ ಆಸ್ಪತ್ರೆಯ ಅಧಿಕಾರಿಗಳು ತಿಳಿಸಿದ್ದಾರೆ. ಕರೋನಾ ಸೋಂಕಿತರಿಗೆ ಮೊದಲೇ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಸಿಗುತ್ತಿಲ್ಲ. ಇನ್ನು ಚಿಕಿತ್ಸೆ ಕೊಡುವ ಆಸ್ಪತ್ರೆಗಳಲ್ಲಿ ಇಂತಹ ಘಟನೆಗಳು ನಡೆದರೆ ಕರೋನಾ ಸೋಂಕಿತರು ಯಾವ ನಂಬಿಕೆಯ ಮೇಲೆ ಆಸ್ಪತ್ರೆಗೆ ದಾಖಲಾಗಬೇಕು ಅನ್ನೋದೇ ಈಗ ಯಕ್ಷ ಪ್ರಶ್ನೆ.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm