ಬ್ರೇಕಿಂಗ್ ನ್ಯೂಸ್
05-08-22 07:47 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 5: ಕೇಂದ್ರ ಸರಕಾರ ಕಳೆದ ಎಪ್ರಿಲ್ ತಿಂಗಳಲ್ಲಿ ಜಾರಿಗೊಳಿಸಿದ್ದ ಹಳೆ ವಾಹನಗಳ ಗುಜರಿಗೆ ಹಾಕುವ ಸ್ಕ್ರಾಪಿಂಗ್ ನಿಯಮವನ್ನು ರಾಜ್ಯದಲ್ಲೂ ಜಾರಿಗೆ ತರಲಾಗಿದೆ. ಈ ಬಗ್ಗೆ ಸಾರಿಗೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಸೂಚನೆ ಹೊರಡಿಸಿದ್ದು ತಕ್ಷಣದಿಂದಲೇ ಜಾರಿಗೆ ತರುವಂತೆ ಸಾರಿಗೆ ಇಲಾಖೆಗೆ ಸೂಚಿಸಿದ್ದಾರೆ.
ಮೋಟಾರ್ ವಾಹನ ಕಾಯ್ದೆ - 2021 (ರಿಜಿಸ್ಟ್ರೇಷನ್ ಮತ್ತು ವಾಹನ ಚಾಲನಾ ಪರವಾನಗಿ ಸ್ಕ್ರಾಫ್ ಫೆಸಿಲಿಟಿ) ಜಾರಿಗೆ ತರುವ ಬಗ್ಗೆ ಕೇಂದ್ರ ಸರ್ಕಾರ ಕಳೆದ ಎಪ್ರಿಲ್ ತಿಂಗಳಲ್ಲಿ ಅಧಿಸೂಚನೆ ಹೊರಡಿಸಿತ್ತು. ಈ ನಿಯಮವನ್ನು ಇಂದಿನಿಂದಲೇ ಜಾರಿಗೆ ಬರುವಂತೆ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಮಾಲಿನ್ಯ ಮತ್ತು ಅಪಘಾತಗಳನ್ನು ಕಡಿಮೆ ಮಾಡುವ ಸಲುವಾಗಿ ಹಳೆಯ ವಾಹನಗಳನ್ನು ತೆರವುಗೊಳಿಸಲು ಹಳೆ ವಾಹನಗಳ ಗುಜರಿಗೆ ಹಾಕುವ ನೀತಿಯನ್ನು ಕಳೆದ ಏಪ್ರಿಲ್ 1ರಿಂದ ಅನ್ವಯವಾಗುವಂತೆ ಕೇಂದ್ರ ಸರ್ಕಾರ ಜಾರಿಗೆ ತಂದಿತ್ತು. ಈ ನಿಯಮದಡಿ ವಾಹನ ಮಾಲೀಕರು 15 ವರ್ಷಗಳ ನಂತರ ನೋಂದಣಿ ಮುಗಿದ ತಮ್ಮ ಹಳೆಯ ವಾಹನಗಳನ್ನು ಸ್ಕ್ರ್ಯಾಪ್ ಮಾಡಲು ಸಾಧ್ಯವಾಗುತ್ತದೆ. ದೆಹಲಿಯಲ್ಲಿ ಡೀಸೆಲ್ ವಾಹನಗಳಿಗೆ 10 ವರ್ಷಗಳ ನಂತರ ಮತ್ತು ಪೆಟ್ರೋಲ್ ವಾಹನಗಳಿಗೆ 15 ವರ್ಷಗಳಿಗೆ ನೋಂದಣಿ ಕೊನೆಗೊಳ್ಳುವಂತೆ ನೀತಿ ಮಾಡಲಾಗಿದೆ. ಆಬಳಿಕ ವಾಹನ ಸಾಮರ್ಥ್ಯ ಅನುಸರಿಸಿ ಪರವಾನಗಿ ನವೀಕರಿಸುವುದಿದ್ದರೆ ಹಲವು ಪಟ್ಟು ಹೆಚ್ಚು ದಂಡ ಕಟ್ಟಬೇಕಾಗುತ್ತದೆ.
ಇದೇ ವೇಳೆ, ಸ್ಕ್ರ್ಯಾಪೇಜ್ ನೀತಿಯು ಹಳೆಯ ವಾಹನಗಳನ್ನು ತೆಗೆದುಹಾಕುವುದರ ಜೊತೆಗೆ ಹೊಸ ಆಟೋಮೊಬೈಲ್ ಉದ್ಯಮಕ್ಕೆ ಉತ್ತೇಜನ ನೀಡುವ ಗುರಿಯನ್ನು ಹೊಂದಿದೆ. 2023ರ ಬಳಿಕ ಎಲ್ಲ ರೀತಿಯ ಭಾರೀ ವಾಣಿಜ್ಯ ವಾಹನಗಳು ಕಡ್ಡಾಯ ಫಿಟ್ನೆಸ್ ಪರೀಕ್ಷೆಗೆ ಒಳಗಾಗಬೇಕಾಗುತ್ತದೆ. ಇದೇ ನೀತಿಯು ಜೂನ್ 2024 ರಿಂದ ಖಾಸಗಿ ಮತ್ತು ಇತರ ವಾಹನಗಳಿಗೂ ಅನ್ವಯಿಸಲಿದೆ. ಆದರೆ ರಾಜ್ಯದಲ್ಲಿ ದೆಹಲಿಯ ನೀತಿಗಳೇ ಇರಲಿವೆಯಾ, ವಾಹನಗಳ ಪರವಾನಗಿ ಅವಧಿಯನ್ನು ಹೆಚ್ಚಿಸುತ್ತಾರಾ ಅನ್ನುವ ಬಗ್ಗೆ ರಾಜ್ಯ ಸರಕಾರ ಸ್ಪಷ್ಟ ಪಡಿಸಿಲ್ಲ.
Govt vehicle scrappage policy implements in Karnataka state
22-06-26 03:44 pm
HK News Staffer
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
22-06-26 12:55 pm
HK News Staffer
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
21-06-26 08:59 pm
HK News Staffer
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
22-06-26 12:53 pm
HK News Staffer
ಕಡಬ ; ಪತ್ನಿಯನ್ನು ಕಡಿದು ಕೊಂದು ನೇಣು ಬಿಗಿದು ಸಾವಿ...
20-06-26 09:13 pm
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm