ಬ್ರೇಕಿಂಗ್ ನ್ಯೂಸ್
07-08-22 09:19 pm HK News Desk ಕರ್ನಾಟಕ
ಹಾಸನ, ಆಗಸ್ಟ್ 7 : ಗಾಳಿ, ಮಳೆಗೆ ಬೃಹತ್ ಮರವೊಂದು ಬೈಕ್ ಮೇಲೆ ಬಿದ್ದಿದ್ದು ಸವಾರ ಸಹಾಯಕ್ಕಾಗಿ ಅಂಗಲಾಚಿ ನರಳಿ ನರಳಿ ಪ್ರಾಣ ಬಿಟ್ಟ ಘಟನೆ ಚನ್ನರಾಯಪಟ್ಟಣ ತಾಲ್ಲೂಕಿನ ಬಾಗೂರು ರಸ್ತೆಯ ಮಾಳೆಕೊಪ್ಪಲು ಗ್ರಾಮದಲ್ಲಿ ನಡೆದಿದೆ.
ಮೃತರನ್ನು ಕಲ್ಲಸೋಮನಹಳ್ಳಿ ಗ್ರಾಮದ ರಂಗಶೆಟ್ಟಿ (45) ಎಂದು ಗುರುತಿಸಲಾಗಿದೆ. ಅವರು ಚನ್ನರಾಯಪಟ್ಟಣದಿಂದ ಬೈಕ್ನಲ್ಲಿ ಕಲ್ಲಸೋಮನಹಳ್ಳಿ ಗ್ರಾಮಕ್ಕೆ ತೆರಳುತ್ತಿದ್ದರು. ಈ ವೇಳೆ ರಸ್ತೆ ಬದಿಯಲ್ಲಿದ್ದ ಬೃಹತ್ ಗಾತ್ರದ ಮರ ರಂಗಶೆಟ್ಟಿ ಅವರ ಬೈಕಿನ ಮೇಲೆ ಬಿದ್ದಿದೆ. ಬೈಕ್ ಹಾಗೂ ಮರದ ನಡುವೆ ಸಿಲುಕಿದ ರಂಗಶೆಟ್ಟಿ ಅರ್ಧ ಗಂಟೆಗೂ ಹೆಚ್ಚು ಕಾಲ ನರಳಾಡಿ ರಕ್ಷಿಸುವಂತೆ ಅಂಗಲಾಚಿದ್ದಾರೆ.
ಸ್ಥಳೀಯರು ಮರ ದೊಡ್ಡದಿದ್ದರಿಂದ ನೆರವು ನೀಡುವುದಕ್ಕಾಗದೇ ಅಸಹಾಯಕರಾಗಿದ್ದಾರೆ. ಬಳಿಕ ಜೆಸಿಬಿ ತರಿಸಿ ಮರವನ್ನು ಎತ್ತಿ ರಂಗಶೆಟ್ಟಿ ಅವರನ್ನು ಹೊರಕ್ಕೆಳೆದರೂ ರಕ್ಷಿಸಲು ಮಾತ್ರ ಸಾಧ್ಯವಾಗಿಲ್ಲ. ಅದಾಗಲೇ ರಕ್ತ ಕಾರಿ ರಂಗ ಶೆಟ್ಟಿ ಗಂಭೀರ ಸ್ಥಿತಿಗೆ ಒಳಗಾಗಿದ್ದರು. ಸ್ಥಳಕ್ಕೆ ಆಸ್ಪತ್ರೆಯ ಸಿಬ್ಬಂದಿ ಬಂದು ಪ್ರಥಮ ಚಿಕಿತ್ಸೆ ನೀಡಿದರೂ ಫಲ ನೀಡಲಿಲ್ಲ.
ಎರಡು ಜೆಸಿಬಿ, ಹಿಟಾಚಿ ಯಂತ್ರ ಬಳಸಿ ಅಗ್ನಿಶಾಮಕದಳದ ಸಿಬ್ಬಂದಿ ಶವ ಹೊರತೆಗೆದಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು ಚನ್ನರಾಯಪಟ್ಟಣ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Hassan heavy wind rains, huge tree falls on Man who was on his bike, suffers and dies on spot. The deceased has been identified as Rangashetty (40). A shocking video of this has gone viral on social media.
22-06-26 03:44 pm
HK News Staffer
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
22-06-26 12:55 pm
HK News Staffer
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
21-06-26 08:59 pm
HK News Staffer
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
22-06-26 12:53 pm
HK News Staffer
ಕಡಬ ; ಪತ್ನಿಯನ್ನು ಕಡಿದು ಕೊಂದು ನೇಣು ಬಿಗಿದು ಸಾವಿ...
20-06-26 09:13 pm
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm