ಬ್ರೇಕಿಂಗ್ ನ್ಯೂಸ್
08-08-22 07:21 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 8 : ಮೊನ್ನೆಯಷ್ಟೇ ತಾಯಿಯೇ ಮಗುವನ್ನು ಮಹಡಿಯಿಂದ ತಳ್ಳಿ ಕೊಲೆಗೈದ ಭೀಭತ್ಸ ಘಟನೆ ನಡೆದಿತ್ತು. ಈಗ ವೃತ್ತಿಯಲ್ಲಿ ವೈದ್ಯೆಯಾಗಿದ್ದ ಮಹಿಳೆಯೊಬ್ಬರು ತನ್ನ ಹತ್ತು ವರ್ಷದ ಮಗುವನ್ನು ಕೊಂದು ತಾನೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬನಶಂಕರಿಯಲ್ಲಿ ಬೆಳಕಿಗೆ ಬಂದಿದೆ.
ಸೈಮಾ ಮುತ್ತಪ್ಪ ಆತ್ಮಹತ್ಯೆ ಮಾಡಿಕೊಂಡ ದಂತ ವೈದ್ಯೆ. ತನ್ನ 10 ವರ್ಷದ ಮಗಳು ಆರಾಧನಾಳನ್ನು ನೇಣಿಗೆ ಹಾಕಿಸಿ, ಹತ್ಯೆಗೈದ ಬಳಿಕ ಸೈಮಾ ತಾನು ಕೂಡ ಆತ್ಮಹತ್ಯೆಗೆ ಶರಣಾಗಿದ್ದಾಳೆ ಎನ್ನಲಾಗುತ್ತಿದೆ. ಪ್ರಸ್ತುತ ಪೊಲೀಸರು ಸೈಮಾ ಪತಿ ಕೋಲಾರ ಮೂಲದ ವೈದ್ಯ ನಾರಾಯಣ್ ಅವರನ್ನು ವಿಚಾರಣೆ ಮಾಡುತ್ತಿದ್ದಾರೆ. ಕೌಟುಂಬಿಕ ಕಲಹವೇ ಆತ್ಮಹತ್ಯೆಗೆ ಕಾರಣ ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಬನಶಂಕರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿರಾಜಪೇಟೆ ಮೂಲದ ಸೈಮಾ ಮುತ್ತಪ್ಪ ಹತ್ತು ವರ್ಷಗಳ ಹಿಂದೆ ಪರಿಚಯ ಆಗಿದ್ದ ಕೋಲಾರ ಮೂಲದ ನಾರಾಯಣ್ ಅವರನ್ನು ಪ್ರೀತಿಸಿ ಮದುವೆಯಾಗಿದ್ದರು. ಇಬ್ಬರೂ ಡೆಂಟಲ್ ಡಾಕ್ಟರ್ ಆಗಿದ್ದರು. ನಾರಾಯಣ್ ಮತ್ತು ಸೈಮಾ ಇಬ್ಬರೂ ಸೇರಿ ಬೆಂಗಳೂರಿನಲ್ಲಿ ಒಟ್ಟಿಗೆ ಕ್ಲಿನಿಕ್ ನಡೆಸುತ್ತಿದ್ದರು. ಎರಡು ದಿನಗಳ ಹಿಂದೆ ನಾರಾಯಣ್ ಮನೆಯಲ್ಲಿ ಇರಲಿಲ್ಲ. ಈ ವೇಳೆ ಸೈಮಾ ಮತ್ತು ಮಗಳು ಮನೆಯಲ್ಲೇ ಆತ್ಮಹತ್ಯೆಗೆ ಶರಣಾಗಿದ್ದಾರೆ. ಭಾನುವಾರ ಪತಿ ನಾರಾಯಣ್ ಮನೆಗೆ ಬಂದು ನೋಡಿದಾಗಲೇ ಕೃತ್ಯ ಬೆಳಕಿಗೆ ಬಂದಿದೆ ಎನ್ನಲಾಗಿದೆ.
ವಿಷಯ ತಿಳಿದ ತಕ್ಷಣ ಆಸ್ಟ್ರೇಲಿಯಾದಲ್ಲಿದ್ದ ಸೈಮಾ ಸಹೋದರ ಬೆಂಗಳೂರಿಗೆ ಬಂದಿದ್ದು ಪೊಲೀಸರಿಗೆ ದೂರು ನೀಡಿದ್ದಾರೆ. ಇವರ ದೂರಿನ ಆಧಾರದ ಮೇಲೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಶೈಮಾ ಕೊಡಗಿನ ಗೌಡ್ತಿಯಾಗಿದ್ದು ಈಕೆ ಪ್ರೀತಿಸಿ ಬೇರೊಬ್ಬರನ್ನು ಮದುವೆಯಾಗುವುದು ಮನೆಯವರಿಗೆ ಇಷ್ಟವಿರಲಿಲ್ಲ. ಆದರೆ, ಮನೆಯವರನ್ನು ಒಪ್ಪಿಸಿ ಆಕೆಯೇ ಮುಂದೆ ನಿಂತು ಮದುವೆಯಾಗಿದ್ದಳು. ಇವರ ದಾಂಪತ್ಯಕ್ಕೆ ಹೆಣ್ಣು ಮಗುವಾಗಿದ್ದು ಬೆಳೆದು ನಿಂತಿದ್ದಳು. ಸಾವಿನ ಬಗ್ಗೆ ಭಾರೀ ಅನುಮಾನಗಳಿದ್ದು ತಾಯಿಯೇ ಹತ್ತು ವರ್ಷದ ಮಗಳನ್ನು ಸಾಯಿಸಿರುವ ಬಗ್ಗೆ ಅನುಮಾನಗಳಿವೆ. ಈ ಬಗ್ಗೆ ಪೊಲೀಸರು ಗಂಡನನ್ನು ಗುರಿಯಾಗಿಸಿ ತನಿಖೆ ನಡೆಸುತ್ತಿದ್ದಾರೆ.
Dentist from Kodagu commits suicide by killing her 10 year old daughter in Bangalore. The deceased has been identified as Saima Muttappa and her daughter Aradana. It is said she had married the person whom she loved. The reason for their suicide is still not known.
22-06-26 03:44 pm
HK News Staffer
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
22-06-26 12:55 pm
HK News Staffer
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
21-06-26 08:59 pm
HK News Staffer
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
22-06-26 12:53 pm
HK News Staffer
ಕಡಬ ; ಪತ್ನಿಯನ್ನು ಕಡಿದು ಕೊಂದು ನೇಣು ಬಿಗಿದು ಸಾವಿ...
20-06-26 09:13 pm
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm