ಬ್ರೇಕಿಂಗ್ ನ್ಯೂಸ್
08-08-22 07:21 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 8 : ಮೊನ್ನೆಯಷ್ಟೇ ತಾಯಿಯೇ ಮಗುವನ್ನು ಮಹಡಿಯಿಂದ ತಳ್ಳಿ ಕೊಲೆಗೈದ ಭೀಭತ್ಸ ಘಟನೆ ನಡೆದಿತ್ತು. ಈಗ ವೃತ್ತಿಯಲ್ಲಿ ವೈದ್ಯೆಯಾಗಿದ್ದ ಮಹಿಳೆಯೊಬ್ಬರು ತನ್ನ ಹತ್ತು ವರ್ಷದ ಮಗುವನ್ನು ಕೊಂದು ತಾನೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬನಶಂಕರಿಯಲ್ಲಿ ಬೆಳಕಿಗೆ ಬಂದಿದೆ.
ಸೈಮಾ ಮುತ್ತಪ್ಪ ಆತ್ಮಹತ್ಯೆ ಮಾಡಿಕೊಂಡ ದಂತ ವೈದ್ಯೆ. ತನ್ನ 10 ವರ್ಷದ ಮಗಳು ಆರಾಧನಾಳನ್ನು ನೇಣಿಗೆ ಹಾಕಿಸಿ, ಹತ್ಯೆಗೈದ ಬಳಿಕ ಸೈಮಾ ತಾನು ಕೂಡ ಆತ್ಮಹತ್ಯೆಗೆ ಶರಣಾಗಿದ್ದಾಳೆ ಎನ್ನಲಾಗುತ್ತಿದೆ. ಪ್ರಸ್ತುತ ಪೊಲೀಸರು ಸೈಮಾ ಪತಿ ಕೋಲಾರ ಮೂಲದ ವೈದ್ಯ ನಾರಾಯಣ್ ಅವರನ್ನು ವಿಚಾರಣೆ ಮಾಡುತ್ತಿದ್ದಾರೆ. ಕೌಟುಂಬಿಕ ಕಲಹವೇ ಆತ್ಮಹತ್ಯೆಗೆ ಕಾರಣ ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಬನಶಂಕರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿರಾಜಪೇಟೆ ಮೂಲದ ಸೈಮಾ ಮುತ್ತಪ್ಪ ಹತ್ತು ವರ್ಷಗಳ ಹಿಂದೆ ಪರಿಚಯ ಆಗಿದ್ದ ಕೋಲಾರ ಮೂಲದ ನಾರಾಯಣ್ ಅವರನ್ನು ಪ್ರೀತಿಸಿ ಮದುವೆಯಾಗಿದ್ದರು. ಇಬ್ಬರೂ ಡೆಂಟಲ್ ಡಾಕ್ಟರ್ ಆಗಿದ್ದರು. ನಾರಾಯಣ್ ಮತ್ತು ಸೈಮಾ ಇಬ್ಬರೂ ಸೇರಿ ಬೆಂಗಳೂರಿನಲ್ಲಿ ಒಟ್ಟಿಗೆ ಕ್ಲಿನಿಕ್ ನಡೆಸುತ್ತಿದ್ದರು. ಎರಡು ದಿನಗಳ ಹಿಂದೆ ನಾರಾಯಣ್ ಮನೆಯಲ್ಲಿ ಇರಲಿಲ್ಲ. ಈ ವೇಳೆ ಸೈಮಾ ಮತ್ತು ಮಗಳು ಮನೆಯಲ್ಲೇ ಆತ್ಮಹತ್ಯೆಗೆ ಶರಣಾಗಿದ್ದಾರೆ. ಭಾನುವಾರ ಪತಿ ನಾರಾಯಣ್ ಮನೆಗೆ ಬಂದು ನೋಡಿದಾಗಲೇ ಕೃತ್ಯ ಬೆಳಕಿಗೆ ಬಂದಿದೆ ಎನ್ನಲಾಗಿದೆ.
ವಿಷಯ ತಿಳಿದ ತಕ್ಷಣ ಆಸ್ಟ್ರೇಲಿಯಾದಲ್ಲಿದ್ದ ಸೈಮಾ ಸಹೋದರ ಬೆಂಗಳೂರಿಗೆ ಬಂದಿದ್ದು ಪೊಲೀಸರಿಗೆ ದೂರು ನೀಡಿದ್ದಾರೆ. ಇವರ ದೂರಿನ ಆಧಾರದ ಮೇಲೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಶೈಮಾ ಕೊಡಗಿನ ಗೌಡ್ತಿಯಾಗಿದ್ದು ಈಕೆ ಪ್ರೀತಿಸಿ ಬೇರೊಬ್ಬರನ್ನು ಮದುವೆಯಾಗುವುದು ಮನೆಯವರಿಗೆ ಇಷ್ಟವಿರಲಿಲ್ಲ. ಆದರೆ, ಮನೆಯವರನ್ನು ಒಪ್ಪಿಸಿ ಆಕೆಯೇ ಮುಂದೆ ನಿಂತು ಮದುವೆಯಾಗಿದ್ದಳು. ಇವರ ದಾಂಪತ್ಯಕ್ಕೆ ಹೆಣ್ಣು ಮಗುವಾಗಿದ್ದು ಬೆಳೆದು ನಿಂತಿದ್ದಳು. ಸಾವಿನ ಬಗ್ಗೆ ಭಾರೀ ಅನುಮಾನಗಳಿದ್ದು ತಾಯಿಯೇ ಹತ್ತು ವರ್ಷದ ಮಗಳನ್ನು ಸಾಯಿಸಿರುವ ಬಗ್ಗೆ ಅನುಮಾನಗಳಿವೆ. ಈ ಬಗ್ಗೆ ಪೊಲೀಸರು ಗಂಡನನ್ನು ಗುರಿಯಾಗಿಸಿ ತನಿಖೆ ನಡೆಸುತ್ತಿದ್ದಾರೆ.
Dentist from Kodagu commits suicide by killing her 10 year old daughter in Bangalore. The deceased has been identified as Saima Muttappa and her daughter Aradana. It is said she had married the person whom she loved. The reason for their suicide is still not known.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 12:29 pm
Mangalore Correspondent
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
Mangalore, Volvo Driver Satish Shetty: ರಸ್ತೆ...
03-02-26 09:49 pm
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm