ಬ್ರೇಕಿಂಗ್ ನ್ಯೂಸ್
10-08-22 07:45 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 10: ರಾಜ್ಯ ರಾಜಕೀಯದಲ್ಲಿ ದಿಢೀರ್ ಬೆಳವಣಿಗೆಗಳು ಆಗ್ತಾ ಇರೋದು ಪಕ್ಕಾ ಆಗಿದೆ. ದೆಹಲಿಗೆ ಬುಲಾವ್ ಆಗಿದ್ದ ಜಗದೀಶ ಶೆಟ್ಟರ್ ತುರ್ತಾಗಿ ಹೈಕಮಾಂಡ್ ಭೇಟಿಯಾಗಿ ಬೆಂಗಳೂರಿಗೆ ಹಿಂತಿರುಗಿದ್ದು, ನಗರದಲ್ಲಿ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಅವರನ್ನು ಭೇಟಿಯಾಗಿದ್ದಾರೆ.
ವಿಮಾನ ನಿಲ್ದಾಣದಿಂದ ನೇರವಾಗಿ ಯಡಿಯೂರಪ್ಪ ಅವರ ಬೆಂಗಳೂರಿನ ನಿವಾಸಕ್ಕೆ ಆಗಮಿಸಿದ ಶೆಟ್ಟರ್, ಕೆಲಕಾಲ ರಹಸ್ಯ ಮಾತುಕತೆ ನಡೆಸಿದ್ದಾರೆ. ಆದರೆ ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಲು ಜಗದೀಶ ಶೆಟ್ಟರ್ ನಿರಾಕರಿಸಿದ್ದಾರೆ. ಈ ಬಗ್ಗೆ ಮಾಧ್ಯಮ ಪ್ರತಿನಿಧಿಯೊಬ್ಬರು ಫೋನಲ್ಲಿ ಸಂಪರ್ಕಿಸಿದಾಗ, ಏನೋ ರಾಜಕೀಯ ಬೆಳವಣಿಗೆ ಆಗ್ತಾ ಇದೆ. ಏನೆಂದು ತನಗೂ ಗೊತ್ತಿಲ್ಲ ಎಂದು ಶೆಟ್ಟರ್ ಕಾಗೆ ಹಾರಿಸಿದ್ದಾರೆ. ಆದರೆ ಶೆಟ್ಟರ್ ದಿಢೀರ್ ಆಗಿ ದೆಹಲಿಗೆ ತೆರಳಿದ್ದು ಮತ್ತು ಹಿಂತಿರುಗಿ ಬಂದ ಕೂಡಲೇ ಯಡಿಯೂರಪ್ಪ ಅವರನ್ನು ಭೇಟಿಯಾಗಿರುವುದು ಕುತೂಹಲ ಮೂಡಿಸಿದೆ.

ಶೆಟ್ಟರ್ ಬಂದು ಹೋದ ಬಳಿಕ ಈ ಬಗ್ಗೆ ಮಾಧ್ಯಮ ಪ್ರತಿನಿಧಿಗಳು ಯಡಿಯೂರಪ್ಪ ಅವರನ್ನು ಪ್ರಶ್ನೆ ಮಾಡಿದಾಗ, ಸಿಎಂ ಬದಲಾವಣೆಯ ಪ್ರಶ್ನೆಯೇ ಇಲ್ಲ ಎಂದರು. ರಾಜ್ಯಾಧ್ಯಕ್ಷರ ಬದಲಾವಣೆ ಆಗುತ್ತಾ ಎಂಬ ಪ್ರಶ್ನೆಗೆ, ಸಹಜವಾಗಿ ಅವಧಿ ಮುಗಿದಾಗ ಬೇರೊಬ್ಬರ ನೇಮಕ ಆಗುತ್ತದೆ. ಯಾರನ್ನು ಮಾಡುತ್ತಾರೆಂದು ಹೈಕಮಾಂಡಿಗೆ ಬಿಟ್ಟದ್ದು. ಅವರೇ ಆಯ್ಕೆ ಮಾಡುತ್ತಾರೆ. ಅದರಲ್ಲಿ ಎರಡು ಮಾತಿಲ್ಲ ಎಂದು ಹೇಳಿದರು. ಶಿಕಾರಿಪುರದಲ್ಲಿ ವಿಜಯೇಂದ್ರ ಸ್ಪರ್ಧೆ ಮಾಡುತ್ತಾರೆಯೇ ಎಂಬ ಪ್ರಶ್ನೆಗೆ, ನನ್ನ ಇರಾದೆಯನ್ನು ಹೇಳಿದ್ದೇನೆ. ನನ್ನ ಸ್ಥಾನವನ್ನು ವಿಜಯೇಂದ್ರನಿಗೆ ಬಿಟ್ಟು ಕೊಡುತ್ತೇನೆಂದು. ಆದರೆ ಪಕ್ಷದ ಪ್ರಮುಖರು ವಿಜಯೇಂದ್ರ ಎಲ್ಲಿ ನಿಲ್ಲಬೇಕು ಅನ್ನೋದನ್ನು ನಿರ್ಧರಿಸುತ್ತಾರೆ ಎಂದು ಹೇಳಿದ್ದಾರೆ.

ಮೊನ್ನೆ ಅಮಿತ್ ಷಾ ರಾಜ್ಯಕ್ಕೆ ಬಂದು ಹೋದ ಬಳಿಕ ಸಿಎಂ ಬೊಮ್ಮಾಯಿ ಬದಲಾಗುತ್ತಾರೆ ಎನ್ನುವ ವದಂತಿ ಹಬ್ಬಿತ್ತು. ಅದಕ್ಕೆ ರೆಕ್ಕೆಪುಕ್ಕ ಎನ್ನುವಂತೆ ಕಾಂಗ್ರೆಸ್ ಟ್ವೀಟ್ ಮಾಡಿ ಕಾಲೆಳೆಯುವ ಕೆಲಸ ಮಾಡಿದೆ. ಬಿಜೆಪಿ ಸರಕಾರದಲ್ಲಿ ಶೀಘ್ರದಲ್ಲೇ ಮೂರನೇ ಸಿಎಂ ಬರಲಿದ್ದಾರೆ. ಕೇಶವ ಕೃಪಾದವರಿಗೆ ಜನತಾ ಪರಿವಾರದ ವ್ಯಕ್ತಿ ಹಿಡಿಸುವುದಿಲ್ಲ ಎಂದು ಟೀಕಿಸಿದ್ದರು. ಇದರ ಬೆನ್ನಲ್ಲೇ ರಾಜ್ಯ ರಾಜಕೀಯದಲ್ಲಿ ಸಿಎಂ ಬದಲಾಗುತ್ತಾರೆ ಅನ್ನುವ ಸುದ್ದಿಯೇ ಹೆಚ್ಚು ಪ್ರಚಲಿತಕ್ಕೆ ಬಂದಿತ್ತು. ಆದರೆ ಬಿಜೆಪಿ ನಾಯಕರು ಮಾತ್ರ ಸಿಎಂ ಬದಲಾಗಲ್ಲ. ಬೊಮ್ಮಾಯಿ ಅವರೇ ಪೂರ್ಣಾವಧಿ ಇರುತ್ತಾರೆಂದು ಹೇಳುತ್ತಾ ಬಂದಿದ್ದಾರೆ. ಇವೆಲ್ಲದರ ನಡುವೆ, ಜಗದೀಶ ಶೆಟ್ಟರ್ ದೆಹಲಿಗೆ ಹೋಗಿದ್ದು ಮತ್ತು ಅದರ ಬೆನ್ನಲ್ಲೇ ಯಡಿಯೂರಪ್ಪ ಅವರನ್ನು ಭೇಟಿಯಾಗಿರುವುದು ಕುತೂಹಲ ಮೂಡಿಸಿದೆ.
Jagadish Shettar goes to Delhi comes back and suddenly meets Yediyurappa in Bengaluru.
22-06-26 03:44 pm
HK News Staffer
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
22-06-26 12:55 pm
HK News Staffer
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
21-06-26 08:59 pm
HK News Staffer
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
22-06-26 12:53 pm
HK News Staffer
ಕಡಬ ; ಪತ್ನಿಯನ್ನು ಕಡಿದು ಕೊಂದು ನೇಣು ಬಿಗಿದು ಸಾವಿ...
20-06-26 09:13 pm
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm