ಬ್ರೇಕಿಂಗ್ ನ್ಯೂಸ್
10-08-22 07:45 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 10: ರಾಜ್ಯ ರಾಜಕೀಯದಲ್ಲಿ ದಿಢೀರ್ ಬೆಳವಣಿಗೆಗಳು ಆಗ್ತಾ ಇರೋದು ಪಕ್ಕಾ ಆಗಿದೆ. ದೆಹಲಿಗೆ ಬುಲಾವ್ ಆಗಿದ್ದ ಜಗದೀಶ ಶೆಟ್ಟರ್ ತುರ್ತಾಗಿ ಹೈಕಮಾಂಡ್ ಭೇಟಿಯಾಗಿ ಬೆಂಗಳೂರಿಗೆ ಹಿಂತಿರುಗಿದ್ದು, ನಗರದಲ್ಲಿ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಅವರನ್ನು ಭೇಟಿಯಾಗಿದ್ದಾರೆ.
ವಿಮಾನ ನಿಲ್ದಾಣದಿಂದ ನೇರವಾಗಿ ಯಡಿಯೂರಪ್ಪ ಅವರ ಬೆಂಗಳೂರಿನ ನಿವಾಸಕ್ಕೆ ಆಗಮಿಸಿದ ಶೆಟ್ಟರ್, ಕೆಲಕಾಲ ರಹಸ್ಯ ಮಾತುಕತೆ ನಡೆಸಿದ್ದಾರೆ. ಆದರೆ ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಲು ಜಗದೀಶ ಶೆಟ್ಟರ್ ನಿರಾಕರಿಸಿದ್ದಾರೆ. ಈ ಬಗ್ಗೆ ಮಾಧ್ಯಮ ಪ್ರತಿನಿಧಿಯೊಬ್ಬರು ಫೋನಲ್ಲಿ ಸಂಪರ್ಕಿಸಿದಾಗ, ಏನೋ ರಾಜಕೀಯ ಬೆಳವಣಿಗೆ ಆಗ್ತಾ ಇದೆ. ಏನೆಂದು ತನಗೂ ಗೊತ್ತಿಲ್ಲ ಎಂದು ಶೆಟ್ಟರ್ ಕಾಗೆ ಹಾರಿಸಿದ್ದಾರೆ. ಆದರೆ ಶೆಟ್ಟರ್ ದಿಢೀರ್ ಆಗಿ ದೆಹಲಿಗೆ ತೆರಳಿದ್ದು ಮತ್ತು ಹಿಂತಿರುಗಿ ಬಂದ ಕೂಡಲೇ ಯಡಿಯೂರಪ್ಪ ಅವರನ್ನು ಭೇಟಿಯಾಗಿರುವುದು ಕುತೂಹಲ ಮೂಡಿಸಿದೆ.

ಶೆಟ್ಟರ್ ಬಂದು ಹೋದ ಬಳಿಕ ಈ ಬಗ್ಗೆ ಮಾಧ್ಯಮ ಪ್ರತಿನಿಧಿಗಳು ಯಡಿಯೂರಪ್ಪ ಅವರನ್ನು ಪ್ರಶ್ನೆ ಮಾಡಿದಾಗ, ಸಿಎಂ ಬದಲಾವಣೆಯ ಪ್ರಶ್ನೆಯೇ ಇಲ್ಲ ಎಂದರು. ರಾಜ್ಯಾಧ್ಯಕ್ಷರ ಬದಲಾವಣೆ ಆಗುತ್ತಾ ಎಂಬ ಪ್ರಶ್ನೆಗೆ, ಸಹಜವಾಗಿ ಅವಧಿ ಮುಗಿದಾಗ ಬೇರೊಬ್ಬರ ನೇಮಕ ಆಗುತ್ತದೆ. ಯಾರನ್ನು ಮಾಡುತ್ತಾರೆಂದು ಹೈಕಮಾಂಡಿಗೆ ಬಿಟ್ಟದ್ದು. ಅವರೇ ಆಯ್ಕೆ ಮಾಡುತ್ತಾರೆ. ಅದರಲ್ಲಿ ಎರಡು ಮಾತಿಲ್ಲ ಎಂದು ಹೇಳಿದರು. ಶಿಕಾರಿಪುರದಲ್ಲಿ ವಿಜಯೇಂದ್ರ ಸ್ಪರ್ಧೆ ಮಾಡುತ್ತಾರೆಯೇ ಎಂಬ ಪ್ರಶ್ನೆಗೆ, ನನ್ನ ಇರಾದೆಯನ್ನು ಹೇಳಿದ್ದೇನೆ. ನನ್ನ ಸ್ಥಾನವನ್ನು ವಿಜಯೇಂದ್ರನಿಗೆ ಬಿಟ್ಟು ಕೊಡುತ್ತೇನೆಂದು. ಆದರೆ ಪಕ್ಷದ ಪ್ರಮುಖರು ವಿಜಯೇಂದ್ರ ಎಲ್ಲಿ ನಿಲ್ಲಬೇಕು ಅನ್ನೋದನ್ನು ನಿರ್ಧರಿಸುತ್ತಾರೆ ಎಂದು ಹೇಳಿದ್ದಾರೆ.

ಮೊನ್ನೆ ಅಮಿತ್ ಷಾ ರಾಜ್ಯಕ್ಕೆ ಬಂದು ಹೋದ ಬಳಿಕ ಸಿಎಂ ಬೊಮ್ಮಾಯಿ ಬದಲಾಗುತ್ತಾರೆ ಎನ್ನುವ ವದಂತಿ ಹಬ್ಬಿತ್ತು. ಅದಕ್ಕೆ ರೆಕ್ಕೆಪುಕ್ಕ ಎನ್ನುವಂತೆ ಕಾಂಗ್ರೆಸ್ ಟ್ವೀಟ್ ಮಾಡಿ ಕಾಲೆಳೆಯುವ ಕೆಲಸ ಮಾಡಿದೆ. ಬಿಜೆಪಿ ಸರಕಾರದಲ್ಲಿ ಶೀಘ್ರದಲ್ಲೇ ಮೂರನೇ ಸಿಎಂ ಬರಲಿದ್ದಾರೆ. ಕೇಶವ ಕೃಪಾದವರಿಗೆ ಜನತಾ ಪರಿವಾರದ ವ್ಯಕ್ತಿ ಹಿಡಿಸುವುದಿಲ್ಲ ಎಂದು ಟೀಕಿಸಿದ್ದರು. ಇದರ ಬೆನ್ನಲ್ಲೇ ರಾಜ್ಯ ರಾಜಕೀಯದಲ್ಲಿ ಸಿಎಂ ಬದಲಾಗುತ್ತಾರೆ ಅನ್ನುವ ಸುದ್ದಿಯೇ ಹೆಚ್ಚು ಪ್ರಚಲಿತಕ್ಕೆ ಬಂದಿತ್ತು. ಆದರೆ ಬಿಜೆಪಿ ನಾಯಕರು ಮಾತ್ರ ಸಿಎಂ ಬದಲಾಗಲ್ಲ. ಬೊಮ್ಮಾಯಿ ಅವರೇ ಪೂರ್ಣಾವಧಿ ಇರುತ್ತಾರೆಂದು ಹೇಳುತ್ತಾ ಬಂದಿದ್ದಾರೆ. ಇವೆಲ್ಲದರ ನಡುವೆ, ಜಗದೀಶ ಶೆಟ್ಟರ್ ದೆಹಲಿಗೆ ಹೋಗಿದ್ದು ಮತ್ತು ಅದರ ಬೆನ್ನಲ್ಲೇ ಯಡಿಯೂರಪ್ಪ ಅವರನ್ನು ಭೇಟಿಯಾಗಿರುವುದು ಕುತೂಹಲ ಮೂಡಿಸಿದೆ.
Jagadish Shettar goes to Delhi comes back and suddenly meets Yediyurappa in Bengaluru.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 12:29 pm
Mangalore Correspondent
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
Mangalore, Volvo Driver Satish Shetty: ರಸ್ತೆ...
03-02-26 09:49 pm
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm