ಬ್ರೇಕಿಂಗ್ ನ್ಯೂಸ್
10-08-22 08:11 pm HK News Desk ಕರ್ನಾಟಕ
ಚಾಮರಾಜನಗರ, ಆಗಸ್ಟ್ 10 : ಖಾಸಗಿ ಕಾಲೇಜಿನ ಉಪನ್ಯಾಸಕಿಯಾಗಿದ್ದ ಚಂದನಾ(26) ಎಂಬ ಸ್ಫುರದ್ರೂಪಿ ಹೆಣ್ಮಗಳು ತನ್ನ ಹುಟ್ಟುಹಬ್ಬದ ದಿನವೇ ಆತ್ಮಹತ್ಯೆಗೆ ಶರಣಾಗಿದ್ದು ಭಾರೀ ಕುತೂಹಲ, ಸಂಶಯಕ್ಕೆ ಕಾರಣವಾಗಿದೆ. ಒಂದೆಡೆ ಕುಟುಂಬಸ್ಥರ ಆಕ್ರಂದನವೂ ಮುಗಿಲು ಮುಟ್ಟಿದ್ದರೆ, ಕಾಲೇಜಿನ ಹಾಸ್ಟೆಲ್ನಲ್ಲೇ ನೇಣು ಬಿಗಿದುಕೊಂಡು ಸಾವು ಕಂಡಿದ್ದು ಜೊತೆಗಿದ್ದವರನ್ನೇ ದಿಗ್ಭ್ರಾಂತಿಗೊಳಿಸಿತ್ತು.
ಆದರೆ ಸಾವಿಗೂ ಮುನ್ನ ತನ್ನೊಳಗಿನ ನೋವನ್ನು ಡೆತ್ ನೋಟಲ್ಲಿ ಬರೆದಿಟ್ಟಿದ್ದು ಏನೇನೋ ಮನಸ್ಸಿನ ತಳಮಳವನ್ನು ಹೇಳಿಕೊಂಡಿದ್ದಾರೆ. ಯಳಂದೂರು ತಾಲೂಕಿನ ಅಂಬಳೆ ಗ್ರಾಮದ ನಿವಾಸಿ ಮಹದೇವಸ್ವಾಮಿ ಮತ್ತು ಶೈಲಜಾ ಅವರ ಪುತ್ರಿ ಚಂದನಾ, ಚಾಮರಾಜನಗರದ ಖಾಸಗಿ ಕಾಲೇಜಿನಲ್ಲಿ ಎಂಎಸ್ಸಿ ವ್ಯಾಸಂಗ ಮುಗಿಸಿದ್ದರು. ಅದೇ ಕಾಲೇಜಿನಲ್ಲಿ ಉಪನ್ಯಾಸಕಿಯಾಗಿ ಕೆಲಸಕ್ಕೂ ಸೇರಿದ್ದರು. ಮನೆಗೆ ಹೋಗದೆ ಕಾಲೇಜಿನ ಹಾಸ್ಟೆಲ್ನಲ್ಲೇ ಉಳಿದುಕೊಂಡಿದ್ದರು. ಮಂಗಳವಾರ ಇವರ 26ನೇ ವರ್ಷದ ಜನ್ಮದಿನವಿತ್ತು. ಆದರೆ ಬೆಳಗ್ಗೆ ಕೊಠಡಿಯಲ್ಲಿ ನೇಣುಬಿಗಿದುಕೊಂಡು ಮೃತಪಟ್ಟಿರುವ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿತ್ತು. ಪೊಲೀಸರು ಪರಿಶೀಲನೆ ನಡೆಸಿದಾಗ ಡೆಟ್ನೋಟ್ ಪತ್ತೆಯಾಗಿದ್ದು ಅದರಲ್ಲಿ ಕುಟುಂಬಸ್ಥರಿಗೆಲ್ಲ ಸುದೀರ್ಘ ಪತ್ರವನ್ನೇ ಬರೆದಿರುವುದು ಕಂಡುಬಂದಿದೆ.
ಮೇಲ್ನೋಟಕ್ಕೆ ಚಂದನಾ ಬರೆದಿದ್ದಾರೆ ಎನ್ನಲಾದ ಡೆತ್ನೋಟ್ ನಲ್ಲಿ ತನ್ನ ಸಾವಿಗೆ ತಾನೇ ಕಾರಣ ಬರೆದಿರುವಂತಿದೆ. ಅದರ ಸ್ಥೂಲ ರೂಪ ಇಲ್ಲಿದೆ. 'ಯಾಕೆ ಯಾರೂ ನನ್ನನ್ನು ಅರ್ಥ ಮಾಡಿಕೊಳ್ಳುತ್ತಿಲ್ಲ. ನನ್ನ ಜೊತೆ ಒಬ್ಬೊಬ್ಬರು ಒಂದೊಂದು ಥರ ನಡೆದುಕೊಳ್ಳುತ್ತಿದ್ದೀರಾ? ನಾನು ಯಾರ ಪರ ಇರಲಿ, ಯಾರ ಮಾತು ಕೇಳಲಿ? ಎಂದು ಗೊತ್ತಾಗುತ್ತಿಲ್ಲ. ನಾನು ಏನು ಅಂದುಕೊಂಡರೂ ಮಾಡಲು ಆಗುತ್ತಿಲ್ಲ, ಮಾಡೋಕ್ಕೆ ಬಿಡುತ್ತಿಲ್ಲ. ಎಲ್ಲರೂ ಹೇಳಿದ್ದನ್ನು ಕೇಳಿ ಸಾಕಾಗಿದೆ. ಮುಂದೆ ಏನು ಮಾಡಬೇಕು? ಹೇಗೆ ಇರಬೇಕು? ಎಲ್ಲವೂ ಪ್ರಶ್ನೆಯಾಗಿಯೇ ಉಳಿದಿದೆ. ನನ್ನ ಮೈಂಡ್ ಫುಲ್ ಬ್ಲ್ಯಾಂಕ್ ಆಗಿದೆ. ಏನು ಮಾಡೋಕು ಆಗುತ್ತಿಲ್ಲ'.
'ಈ ಕಡೆ ಕಾಲೇಜು, ಆ ಕಡೆ ಮನೆ. ಎರಡೂ ಕಡೆ ಒಟ್ಟಿಗೆ ಹೇಗೆ ಇರೋದಿಕ್ಕೆ ಆಗುತ್ತೆ? ಕೆಲಸ ಹೊಸದು. ಮಕ್ಕಳಿಗೆ ಅರ್ಥ ಆಗೋ ಹಾಗೆ ಪಾಠ ಮಾಡಬೇಕು, ಓದಬೇಕು. ನೋಟ್ಸ್ ಮಾಡಬೇಕು. ನಾನು ಓದೋದು ನಿಧಾನ. ಟೈಂ ಹೇಗೆ ಮ್ಯಾನೇಜ್ ಮಾಡಬೇಕು ಗೊತ್ತಾಗುತ್ತಿಲ್ಲ. ಅದಕ್ಕೆ ನಾನು ಮನೆಗೂ ಬರ್ತಾ ಇರಲಿಲ್ಲ. ಸಾರಿ ಪಪ್ಪಾ.. ನನಗೆ ಆಗುತ್ತಿಲ್ಲ. ಯಾರೂ ನನ್ನ ಅರ್ಥ ಮಾಡಿಕೊಳ್ಳುತ್ತಿಲ್ಲ. ನಿಮ್ಮದೇ ಆದ ದೃಷ್ಟಿಯಲ್ಲಿ ನೋಡ್ತೀರಾ. ಸಾರಿ ಫ್ರೆಂಡ್ಸ್ ಆಲ್… ನಾನು ಯಾರನ್ನೂ ಪ್ರೀತಿ ಮಾಡ್ತಿಲ್ಲ. ನನ್ನ ಸಾವಿಗೆ ನಾನೇ ಕಾರಣ'.
'ಮೇಘ ಅಕ್ಕ ಯಾರಿಗೂ ಹಿಂಸೆ ಕೊಡಬೇಡ. ಅನು ಅಕ್ಕ ಸಾರಿ ಕಣೆ, ನೀನು ನನಗೆ ಎಲ್ಲ ಮಾಡಿದ್ರೂ ಯೂ ಆರ್ ಮೈ ಬೆಸ್ಟ್. ನಿತ್ಯ ಚೆನ್ನಾಗಿ ಓದಿ ಒಳ್ಳೆಯ ಕೆಲಸ ತೆಗೆದುಕೊ. ಈ ಕೆಲಸ ಬೇಡ. ಆರೋಗ್ಯ ಹಾಳಾಗುತ್ತೆ. ಅಜ್ಜಿ, ಅಮ್ಮ ಎಲ್ಲರೂ ಚೆನ್ನಾಗಿರಿ. ರಮ್ಯ ಮೇಡಂ ಸಾರಿ… ಮಿಸ್ ಯು ಆಲ್' ಎಂದು ಡೆತ್ನೋಟ್ನಲ್ಲಿ ಬರೆದಿರುವುದು ಕಂಡುಬಂದಿದೆ. ಪೊಲೀಸರು ಘಟನೆ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಇಷ್ಟಕ್ಕೇ ಆಕೆ ಸಾವು ಕಂಡಿದ್ದಾಳೆಯೇ, ಬೇರೆ ಏನಾದ್ರೂ ಇದೆಯಾ ಎನ್ನುವ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.
College professor commits suicide in Chamrajnagar detailed death note found says no one understood me not even my father. She committed suicide on the day of her Birthday.
10-04-26 06:53 pm
HK News Desk
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
11-04-26 09:05 pm
Giridhar Shetty
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
11-04-26 05:05 pm
Mangalore Correspondent
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
Puc 2026, Result, Mangalore: ಮೂವರು ಮಕ್ಕಳಾದರೂ...
10-04-26 12:35 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm