ಬ್ರೇಕಿಂಗ್ ನ್ಯೂಸ್
12-08-22 11:45 am Bengalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 12: ಕೋಡಗನ ಕೋಳಿ ನುಂಗಿತ್ತಾ.. ಕಾಡು ಕುದುರೆ ಓಡಿ ಬಂದಿತ್ತಾ.. ಇತ್ಯಾದಿ ಶಿಶುನಾಳ ಶರೀಫರ ಪ್ರಸಿದ್ಧ ತತ್ವಪದಗಳನ್ನು ಹಾಡಿ ಜನಮಾನಸದಲ್ಲಿ ಖ್ಯಾತಿ ಗಳಿಸಿದ್ದ ಕನ್ನಡದ ಖ್ಯಾತ ಸುಗಮ ಸಂಗೀತ ಗಾಯಕ ಶಿವಮೊಗ್ಗ ಸುಬ್ಬಣ್ಣ (83) ಹೃದಯಾಘಾತದಿಂದ ಗುರುವಾರ ರಾತ್ರಿ ನಿಧನರಾಗಿದ್ದಾರೆ.
ಸುಬ್ಬಣ್ಣ ಅವರಿಗೆ ಉಸಿರಾಟದ ತೊಂದರೆ ಇದ್ದುದರಿಂದ ಜಯನಗರದ ಶಾಂತಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಅವರಿಗೆ ಹೃದಯಾಘಾತ ಆಗಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ಜಯದೇವ ಹೃದ್ರೋಗ ಆಸ್ಪತ್ರೆಗೆ ದಾಖಲಿಸಲು ಆಯಂಬುಲೆನ್ಸ್ ನಲ್ಲಿ ಒಯ್ಯುತ್ತಿದ್ದಾಗಲೇ ಮಾರ್ಗಮಧ್ಯೆ ಕೊನೆಯುಸಿರೆಳೆದಿದ್ದಾರೆ.
ಸುಬ್ಬಣ್ಣ ಅವರ ಮೂಲ ಹೆಸರು ಜಿ.ಸುಬ್ರಹ್ಮಣ್ಯಂ. ಗಣೇಶ್ ರಾವ್ ಹಾಗೂ ರಂಗನಾಯಕಮ್ಮ ಅವರ ಮಗನಾದ ಸುಬ್ಬಣ್ಣ ಶಿವಮೊಗ್ಗ ನಗರದಲ್ಲಿ 1938ರಲ್ಲಿ ಜನಿಸಿದರು. ಬಿ.ಎ., ಬಿ.ಕಾಂ., ಎಲ್.ಎಲ್.ಬಿ. ಪದವಿ ಪಡೆದಿದ್ದ ಅವರು ವಕೀಲರಾಗಿ ವೃತ್ತಿ ಬದುಕು ಆರಂಭಿಸಿದ್ದರು. ಬಳಿಕ ನೋಟರಿಯಾಗಿಯೂ ಕೆಲಸ ಮಾಡಿದ್ದರು. ಶಾಲಾ ದಿನಗಳಲ್ಲಿಯೇ ಹಾಡುವುದನ್ನು ರೂಢಿ ಮಾಡಿಕೊಂಡಿದ್ದ ಸುಬ್ಬಣ್ಣ ಹಲವಾರು ಪ್ರಶಸ್ತಿಗಳನ್ನು ಪಡೆದಿದ್ದರು. ಆನಂತರ, ವಕೀಲಿ ವೃತ್ತಿಯನ್ನೇ ಬಿಟ್ಟು ಕನ್ನಡ ಗಾಯನ ಕ್ಷೇತ್ರದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದ ಸುಬ್ಬಣ್ಣ 1963ರಲ್ಲಿ ಆಕಾಶವಾಣಿ ಗಾಯಕರಾಗಿ ಸೇರಿದ್ದರು. ಬಳಿಕ ಹಿನ್ನೆಲೆ ಗಾಯಕರಾಗಿ ಸಿನಿಮಾ ರಂಗಕ್ಕೂ ಸುಬ್ಬಣ್ಣ ಖ್ಯಾತಿ ಗಳಿಸಿದ್ದರು.
ಸುಗಮ ಸಂಗೀತದ ಸಾಧನೆಗಾಗಿ 1979ರಲ್ಲಿ ಅಂದಿನ ರಾಷ್ಟ್ರಪತಿ ನೀಲಂ ಸಂಜೀವ ರೆಡ್ಡಿ ಅವರಿಂದ ರಜತಕಮಲ ಪ್ರಶಸ್ತಿ ಸ್ವೀಕರಿಸಿದ್ದರು. ಆಕಾಶವಾಣಿ ಪ್ರಸಾರ ಮಾಡಿದ ಜನಪ್ರಿಯ ಕಾರ್ಯಕ್ರಮದಲ್ಲಿ ‘ಕೋಡಗನ ಕೋಳಿ ನುಂಗಿತ್ತಾ..’, ‘ಅಳಬೇಡಾ ತಂಗಿ ಅಳಬೇಡ…’ ‘ಬಿದ್ದೀಯಬ್ಬೇ ಮುದುಕಿ..’ ಮೊದಲಾದ ಶಿಶುನಾಳ ಷರೀಫರ ಗೀತೆಗಳನ್ನು ಹಾಡಿದ ಸುಬ್ಬಣ್ಣ ಮನೆ ಮಾತಾಗಿದ್ದರು. ಸುಬ್ಬಣ್ಣ ಅವರ ಸಾಧನೆಯನ್ನು ಮನ್ನಿಸಿ ರಾಜ್ಯ ಸರ್ಕಾರ ಪ್ರತಿಷ್ಠಿತ ಸಂತ ಶಿಶುನಾಳ ಶರೀಫ ಪ್ರಶಸ್ತಿ, ರಾಜ್ಯೋತ್ಸವ ಪ್ರಶಸ್ತಿ, ಸಂಗೀತ ಅಕಾಡೆಮಿಯ ಕರ್ನಾಟಕ ಕಲಾ ತಿಲಕ ಪ್ರಶಸ್ತಿ ನೀಡಿ ಗೌರವಿಸಿದರೆ, ಅಭಿಮಾನಿಗಳು ನೂರಾರು ಪ್ರಶಸ್ತಿಗಳನ್ನು ನೀಡಿ ಸನ್ಮಾನಿಸಿದ್ದಾರೆ.
Noted Kannada singer Shivamogga Subbanna passed away following a heart attack at a hospital here on Thursday night, sources close to the family said.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 12:29 pm
Mangalore Correspondent
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
Mangalore, Volvo Driver Satish Shetty: ರಸ್ತೆ...
03-02-26 09:49 pm
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm