ಬ್ರೇಕಿಂಗ್ ನ್ಯೂಸ್
12-08-22 02:40 pm HK News Desk ಕರ್ನಾಟಕ
ಮೈಸೂರು, ಆಗಸ್ಟ್ 12 : 2016 ರಲ್ಲಿ ಲೋಕಾಯುಕ್ತವನ್ನ ತಿರುಚಿ ಎಸಿಬಿ ತರಲಾಗಿತ್ತು. ಒಂದು ಕಾನೂನು ಇರುವಾಗಲೇ ಮತ್ತೊಂದು ಮಾಡುವುದು ಕಾನೂನು ವಿರೋಧ ಎಂದು ಜಸ್ಟಿಸ್ ಗೋಪಾಲರಾವ್ ಹೇಳಿದ್ದರು. ಈಗ ಎಸಿಬಿ ಹೋಗಿದೆ, ಲೋಕಾಯುಕ್ತ ಬಂದಿದೆ. ಇದನ್ನ ಅತ್ಯಂತ ಗೌರವದಿಂದ ನಾನು ಸ್ವಾಗತಿಸುತ್ತೇನೆ ಎಂದು ಎಂಎಲ್ಸಿ ಎಚ್. ವಿಶ್ವನಾಥ್ ಹೇಳಿದ್ದಾರೆ.
ಮತ್ತೆ ಲೋಕಾಯುಕ್ತ ತರುವಂತೆ ಹೈಕೋರ್ಟ್ ಹೇಳಿದ್ದರಿಂದ ಮೂರು ರಾಜಕೀಯ ಪಕ್ಷಗಳು ಕೂಡ ಬೆತ್ತಲಾಗಿವೆ. ಸಿಎಂ ಪ್ರತಿಕ್ರಿಯೆ ನೀಡಿ, ಎಸಿಬಿ ರದ್ದು ಮಾಡಿರುವುದನ್ನ ಕೇಳಿದ್ದೇನೆ. ಆದೇಶ ಪ್ರತಿ ಗಮನಿಸಿ ಪ್ರತಿಕ್ರಿಯೆ ನೀಡುತ್ತೇನೆ ಎಂದಿದ್ದಾರೆ. ರಾಜ್ಯದ ಸಿಎಂ ಆದವರು ಏನು ಗೊತ್ತಿಲ್ಲದಂತೆ ವರ್ತಿಸುತ್ತಿದ್ದಾರೆ. ಮತ್ತೊಂದೆಡೆ ಮಾಜಿ ಸಿಎಂ ಸಿದ್ದರಾಮಯ್ಯ ಎಸಿಬಿ ರದ್ದು ಮಾಡಿರುವುದು ಸ್ವಾಗತಾರ್ಹ ಎಂದಿದ್ದಾರೆ. ಇನ್ನೊಂದೆಡೆ ಮಾಜಿ ಸಿಎಂ ಕುಮಾರಸ್ವಾಮಿ, ಎಸಿಬಿ ರದ್ದಿನಿಂದ ಭ್ರಷ್ಟಾಚಾರ ಕಡಿಮೆಯಾಗುತ್ತದೆ ಎಂಬ ವಿಶ್ವಾಸವಿಲ್ಲ ಎಂದಿದ್ದಾರೆ. ಎಸಿಬಿ ಹಲವು ರಾಜ್ಯಗಳಲ್ಲಿದೆ, ಆದರೆ ಇಲ್ಲಿ ಮೂರೂ ಪಕ್ಷಗಳ ನಾಯಕರು ಬೆತ್ತಲಾಗಿದ್ದಾರೆ ಎಂದು ಎಂಎಲ್ಸಿ ಎಚ್. ವಿಶ್ವನಾಥ್ ಹೇಳಿದ್ದಾರೆ.





ಯಾವುದೋ ರಾಜಕೀಯ ಪಾರ್ಟಿಗಾಗಿ ಕಾನೂನುಗಳು ಇರುವುದಲ್ಲ. ಆಡಳಿತ ಮಾಡುವವರು ರಾಜ್ಯದ ಹಿತದೃಷ್ಟಿಯಿಂದ ಲೋಕಾಯುಕ್ತವನ್ನ ಸೂಕ್ತ ರೀತಿಯಲ್ಲಿ ಬಳಸಬೇಕು. ಕೋರ್ಟ್ ತೀರ್ಪನ್ನ ಸರ್ಕಾರ ಸರಿಯಾಗಿ ಪಾಲಿಸಬೇಕು. ಇದೇ ಲೋಕಾಯುಕ್ತದಿಂದಾಗಿ ಹಿಂದೊಮ್ಮೆ ಸಿಎಂ ಆಗಿದ್ದವರೇ ಜೈಲಿಗೆ ಹೋಗಿದ್ದರು. ಈಶ್ವರಪ್ಪ ಮನೆಯಲ್ಲಿ ಹಣ ಎಣಿಸುವ ಮೆಷಿನ್ ಸಿಕ್ಕಿತ್ತು. ಆಗಲೇ ಲೋಕಾಯುಕ್ತ ಮುಚ್ಚುವ ನಿರ್ಧಾರ ಆಗಿತ್ತು. ಸಿದ್ದರಾಮಯ್ಯ ಬಂದು ಮುಚ್ಚಿಬಿಟ್ಟು ಇವರಿಗೆಲ್ಲ ಒಳಿತು ಮಾಡಿದ್ದರು ಎಂದು ಎಚ್. ವಿಶ್ವನಾಥ್ ವ್ಯಂಗ್ಯವಾಡಿದರು.
HC abolishes ACB in State MLC Vishwanath slams bjp says three ministers went naked.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 12:29 pm
Mangalore Correspondent
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
Mangalore, Volvo Driver Satish Shetty: ರಸ್ತೆ...
03-02-26 09:49 pm
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm