ಬ್ರೇಕಿಂಗ್ ನ್ಯೂಸ್
13-08-22 09:59 pm Bangalore Correspondent ಕರ್ನಾಟಕ
ಬೆಂಗಳೂರು, ಆ.13: ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಅಂಗವಾಗಿ ರಾಜ್ಯದಲ್ಲಿ ಸುಮಾರು 1.20 ಕೋಟಿ ಮನೆಗಳ ಮೇಲೆ ರಾಷ್ಟ್ರಧ್ವಜ ಹಾರಾಡಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಬೆಂಗಳೂರಿನ ವಿಧಾನಸೌಧ ಮಹಾ ಮೆಟ್ಟಿಲುಗಳ ಮೇಲೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಯೋಜಿಸಿದ್ದ ಮನೆ ಮನೆಯಲ್ಲಿ ತ್ರಿವರ್ಣ ಧ್ವಜ ಕಾರ್ಯಕ್ರಮಕ್ಕೆ ಬಲೂನು ಹಾರಿ ಬಿಡುವ ಮೂಲಕ ಚಾಲನೆ ನೀಡಿ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.

ಪ್ರಧಾನಿ ನರೇಂದ್ರ ಮೋದಿ ಅವರ ಕರೆಯ ಮೇರೆಗೆ ಹರ್ ಘರ್ ತಿರಂಗಾ ಅಭಿಯಾನ ಇಂದಿನಿಂದ ರಾಜ್ಯದಲ್ಲಿ ಪ್ರಾರಂಭವಾಗಿದೆ. ಸರ್ಕಾರದಿಂದ ಈಗಾಗಲೇ 1.08 ಕೋಟಿ ಧ್ವಜಗಳನ್ನು ವಿತರಿಸಲಾಗಿದೆ. ಇದಲ್ಲದೆ, ಸಂಘ ಸಂಸ್ಥೆಗಳೂ ಸಹ ಕೈ ಜೋಡಿಸಿದ್ದು ಮೂರು ದಿನಗಳ ಅಭಿಯಾನದಲ್ಲಿ 1.20 ಕೋಟಿ ರಾಷ್ಟ್ರಧ್ವಜಗಳು ಹಾರಾಡುತ್ತವೆ ಎಂದು ಹೇಳಿದರು.

ಹರ್ ಘರ್ ತಿರಂಗಾ ಪ್ರತಿ ಹಳ್ಳಿಯಲ್ಲೂ ವಿಸ್ತಾರಗೊಂಡಿದೆ. ಜನರು ತಮ್ಮ ತಮ್ಮ ಮನೆಗಳ ಮೇಲೆ ರಾಷ್ಟ್ರಧ್ವಜಗಳನ್ನು ಹಾಕುತ್ತಿದ್ದಾರೆ. ವಾಸ್ತವವಾಗಿ ಅಭಿಯಾನ ಇಂದಿನಿಂದ ಆಂಭವಾಗುತ್ತಿದ್ದರೂ ಸಹ ಕಳೆದ ಎರಡು ದಿನಗಳಿಂದಲೇ ಜನರಿಂದ ಸ್ಪಂದನೆ ವ್ಯಕ್ತವಾಗುತ್ತಿದೆ. ಶಾಲಾ ಮಕ್ಕಳು ಎಲ್ಲಾ ಕಡೆ ಪಥಸಂಚಲನ ನಡೆಸಿ ಧ್ವಜದ ಬಗ್ಗೆ ಜಾಗೃತಿ ಮೂಡಿಸುತ್ತಿದ್ದಾರೆ ಎಂದು ಹೇಳಿದರು.
ಭಾರತಕ್ಕೆ ಸ್ವಾತಂತ್ರ್ಯ ಸಿಕ್ಕು 75 ವರ್ಷಗಳಾಗಿವೆ. ಅಮೃತ ಮಹೋತ್ಸವ ನೆನಪಿಗೆ ದೇಶದ ಎಲ್ಲಾ ಜನರಿಂದಲೂ ಧ್ವಜ ಹಾರಿಸುವ ಅಭಿಯಾನ ನಡೆಸುವ ಮೂಲಕ ನಾವೆಲ್ಲರೂ ಒಂದು, ನಾವೆಲ್ಲರೂ ದೇಶಭಕ್ತರು ಎಂದು ಸಾರಲಾಗುತ್ತದೆ. ಅಲ್ಲದೆ, ಮುಂದಿನ 25 ವರ್ಷ ಭಾರತದ ಭವ್ಯ ಭವಿಷ್ಯಕ್ಕೆ ಸಂಕಲ್ಪ ಮಾಡಲಾಗುತ್ತದೆ. ಜಾತಿ, ಮತ, ಭೇದ ಬಿಟ್ಟು ಭಾರತವನ್ನು ಶಕ್ತಿಶಾಲಿಯಾಗಿ ರೂಪಿಸಲು ನಿರ್ಣಯ ಕೈಗೊಳ್ಳಲಾಗುತ್ತದೆ ಎಂದು ಹೇಳಿದರು.
Chief Minister Basavaraj Bommai has said that the national flag will be hoisted over 1.20 crore houses in the state as part of the Amrit Mahotsav on 75th Independence day.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 12:29 pm
Mangalore Correspondent
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
Mangalore, Volvo Driver Satish Shetty: ರಸ್ತೆ...
03-02-26 09:49 pm
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm