ಬ್ರೇಕಿಂಗ್ ನ್ಯೂಸ್
13-08-22 09:59 pm Bangalore Correspondent ಕರ್ನಾಟಕ
ಬೆಂಗಳೂರು, ಆ.13: ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಅಂಗವಾಗಿ ರಾಜ್ಯದಲ್ಲಿ ಸುಮಾರು 1.20 ಕೋಟಿ ಮನೆಗಳ ಮೇಲೆ ರಾಷ್ಟ್ರಧ್ವಜ ಹಾರಾಡಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಬೆಂಗಳೂರಿನ ವಿಧಾನಸೌಧ ಮಹಾ ಮೆಟ್ಟಿಲುಗಳ ಮೇಲೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಯೋಜಿಸಿದ್ದ ಮನೆ ಮನೆಯಲ್ಲಿ ತ್ರಿವರ್ಣ ಧ್ವಜ ಕಾರ್ಯಕ್ರಮಕ್ಕೆ ಬಲೂನು ಹಾರಿ ಬಿಡುವ ಮೂಲಕ ಚಾಲನೆ ನೀಡಿ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.

ಪ್ರಧಾನಿ ನರೇಂದ್ರ ಮೋದಿ ಅವರ ಕರೆಯ ಮೇರೆಗೆ ಹರ್ ಘರ್ ತಿರಂಗಾ ಅಭಿಯಾನ ಇಂದಿನಿಂದ ರಾಜ್ಯದಲ್ಲಿ ಪ್ರಾರಂಭವಾಗಿದೆ. ಸರ್ಕಾರದಿಂದ ಈಗಾಗಲೇ 1.08 ಕೋಟಿ ಧ್ವಜಗಳನ್ನು ವಿತರಿಸಲಾಗಿದೆ. ಇದಲ್ಲದೆ, ಸಂಘ ಸಂಸ್ಥೆಗಳೂ ಸಹ ಕೈ ಜೋಡಿಸಿದ್ದು ಮೂರು ದಿನಗಳ ಅಭಿಯಾನದಲ್ಲಿ 1.20 ಕೋಟಿ ರಾಷ್ಟ್ರಧ್ವಜಗಳು ಹಾರಾಡುತ್ತವೆ ಎಂದು ಹೇಳಿದರು.

ಹರ್ ಘರ್ ತಿರಂಗಾ ಪ್ರತಿ ಹಳ್ಳಿಯಲ್ಲೂ ವಿಸ್ತಾರಗೊಂಡಿದೆ. ಜನರು ತಮ್ಮ ತಮ್ಮ ಮನೆಗಳ ಮೇಲೆ ರಾಷ್ಟ್ರಧ್ವಜಗಳನ್ನು ಹಾಕುತ್ತಿದ್ದಾರೆ. ವಾಸ್ತವವಾಗಿ ಅಭಿಯಾನ ಇಂದಿನಿಂದ ಆಂಭವಾಗುತ್ತಿದ್ದರೂ ಸಹ ಕಳೆದ ಎರಡು ದಿನಗಳಿಂದಲೇ ಜನರಿಂದ ಸ್ಪಂದನೆ ವ್ಯಕ್ತವಾಗುತ್ತಿದೆ. ಶಾಲಾ ಮಕ್ಕಳು ಎಲ್ಲಾ ಕಡೆ ಪಥಸಂಚಲನ ನಡೆಸಿ ಧ್ವಜದ ಬಗ್ಗೆ ಜಾಗೃತಿ ಮೂಡಿಸುತ್ತಿದ್ದಾರೆ ಎಂದು ಹೇಳಿದರು.
ಭಾರತಕ್ಕೆ ಸ್ವಾತಂತ್ರ್ಯ ಸಿಕ್ಕು 75 ವರ್ಷಗಳಾಗಿವೆ. ಅಮೃತ ಮಹೋತ್ಸವ ನೆನಪಿಗೆ ದೇಶದ ಎಲ್ಲಾ ಜನರಿಂದಲೂ ಧ್ವಜ ಹಾರಿಸುವ ಅಭಿಯಾನ ನಡೆಸುವ ಮೂಲಕ ನಾವೆಲ್ಲರೂ ಒಂದು, ನಾವೆಲ್ಲರೂ ದೇಶಭಕ್ತರು ಎಂದು ಸಾರಲಾಗುತ್ತದೆ. ಅಲ್ಲದೆ, ಮುಂದಿನ 25 ವರ್ಷ ಭಾರತದ ಭವ್ಯ ಭವಿಷ್ಯಕ್ಕೆ ಸಂಕಲ್ಪ ಮಾಡಲಾಗುತ್ತದೆ. ಜಾತಿ, ಮತ, ಭೇದ ಬಿಟ್ಟು ಭಾರತವನ್ನು ಶಕ್ತಿಶಾಲಿಯಾಗಿ ರೂಪಿಸಲು ನಿರ್ಣಯ ಕೈಗೊಳ್ಳಲಾಗುತ್ತದೆ ಎಂದು ಹೇಳಿದರು.
Chief Minister Basavaraj Bommai has said that the national flag will be hoisted over 1.20 crore houses in the state as part of the Amrit Mahotsav on 75th Independence day.
22-06-26 03:44 pm
HK News Staffer
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
22-06-26 12:55 pm
HK News Staffer
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
21-06-26 08:59 pm
HK News Staffer
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
22-06-26 12:53 pm
HK News Staffer
ಕಡಬ ; ಪತ್ನಿಯನ್ನು ಕಡಿದು ಕೊಂದು ನೇಣು ಬಿಗಿದು ಸಾವಿ...
20-06-26 09:13 pm
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm