ಬ್ರೇಕಿಂಗ್ ನ್ಯೂಸ್
13-08-22 09:59 pm Bangalore Correspondent ಕರ್ನಾಟಕ
ಬೆಂಗಳೂರು, ಆ.13: ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಅಂಗವಾಗಿ ರಾಜ್ಯದಲ್ಲಿ ಸುಮಾರು 1.20 ಕೋಟಿ ಮನೆಗಳ ಮೇಲೆ ರಾಷ್ಟ್ರಧ್ವಜ ಹಾರಾಡಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಬೆಂಗಳೂರಿನ ವಿಧಾನಸೌಧ ಮಹಾ ಮೆಟ್ಟಿಲುಗಳ ಮೇಲೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಯೋಜಿಸಿದ್ದ ಮನೆ ಮನೆಯಲ್ಲಿ ತ್ರಿವರ್ಣ ಧ್ವಜ ಕಾರ್ಯಕ್ರಮಕ್ಕೆ ಬಲೂನು ಹಾರಿ ಬಿಡುವ ಮೂಲಕ ಚಾಲನೆ ನೀಡಿ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.

ಪ್ರಧಾನಿ ನರೇಂದ್ರ ಮೋದಿ ಅವರ ಕರೆಯ ಮೇರೆಗೆ ಹರ್ ಘರ್ ತಿರಂಗಾ ಅಭಿಯಾನ ಇಂದಿನಿಂದ ರಾಜ್ಯದಲ್ಲಿ ಪ್ರಾರಂಭವಾಗಿದೆ. ಸರ್ಕಾರದಿಂದ ಈಗಾಗಲೇ 1.08 ಕೋಟಿ ಧ್ವಜಗಳನ್ನು ವಿತರಿಸಲಾಗಿದೆ. ಇದಲ್ಲದೆ, ಸಂಘ ಸಂಸ್ಥೆಗಳೂ ಸಹ ಕೈ ಜೋಡಿಸಿದ್ದು ಮೂರು ದಿನಗಳ ಅಭಿಯಾನದಲ್ಲಿ 1.20 ಕೋಟಿ ರಾಷ್ಟ್ರಧ್ವಜಗಳು ಹಾರಾಡುತ್ತವೆ ಎಂದು ಹೇಳಿದರು.

ಹರ್ ಘರ್ ತಿರಂಗಾ ಪ್ರತಿ ಹಳ್ಳಿಯಲ್ಲೂ ವಿಸ್ತಾರಗೊಂಡಿದೆ. ಜನರು ತಮ್ಮ ತಮ್ಮ ಮನೆಗಳ ಮೇಲೆ ರಾಷ್ಟ್ರಧ್ವಜಗಳನ್ನು ಹಾಕುತ್ತಿದ್ದಾರೆ. ವಾಸ್ತವವಾಗಿ ಅಭಿಯಾನ ಇಂದಿನಿಂದ ಆಂಭವಾಗುತ್ತಿದ್ದರೂ ಸಹ ಕಳೆದ ಎರಡು ದಿನಗಳಿಂದಲೇ ಜನರಿಂದ ಸ್ಪಂದನೆ ವ್ಯಕ್ತವಾಗುತ್ತಿದೆ. ಶಾಲಾ ಮಕ್ಕಳು ಎಲ್ಲಾ ಕಡೆ ಪಥಸಂಚಲನ ನಡೆಸಿ ಧ್ವಜದ ಬಗ್ಗೆ ಜಾಗೃತಿ ಮೂಡಿಸುತ್ತಿದ್ದಾರೆ ಎಂದು ಹೇಳಿದರು.
ಭಾರತಕ್ಕೆ ಸ್ವಾತಂತ್ರ್ಯ ಸಿಕ್ಕು 75 ವರ್ಷಗಳಾಗಿವೆ. ಅಮೃತ ಮಹೋತ್ಸವ ನೆನಪಿಗೆ ದೇಶದ ಎಲ್ಲಾ ಜನರಿಂದಲೂ ಧ್ವಜ ಹಾರಿಸುವ ಅಭಿಯಾನ ನಡೆಸುವ ಮೂಲಕ ನಾವೆಲ್ಲರೂ ಒಂದು, ನಾವೆಲ್ಲರೂ ದೇಶಭಕ್ತರು ಎಂದು ಸಾರಲಾಗುತ್ತದೆ. ಅಲ್ಲದೆ, ಮುಂದಿನ 25 ವರ್ಷ ಭಾರತದ ಭವ್ಯ ಭವಿಷ್ಯಕ್ಕೆ ಸಂಕಲ್ಪ ಮಾಡಲಾಗುತ್ತದೆ. ಜಾತಿ, ಮತ, ಭೇದ ಬಿಟ್ಟು ಭಾರತವನ್ನು ಶಕ್ತಿಶಾಲಿಯಾಗಿ ರೂಪಿಸಲು ನಿರ್ಣಯ ಕೈಗೊಳ್ಳಲಾಗುತ್ತದೆ ಎಂದು ಹೇಳಿದರು.
Chief Minister Basavaraj Bommai has said that the national flag will be hoisted over 1.20 crore houses in the state as part of the Amrit Mahotsav on 75th Independence day.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm