ಬ್ರೇಕಿಂಗ್ ನ್ಯೂಸ್
16-08-22 03:32 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 16: ದೇಶಾದ್ಯಂತ ಸ್ವಾತಂತ್ರ್ಯೋತ್ಸವ ಆಚರಣೆಯ ಸಂಭ್ರಮದ ನಡುವಲ್ಲೇ ಬೆಂಗಳೂರಿನಲ್ಲಿ ಕೆಲವು ಕಿಡಿಗೇಡಿಗಳು ಸೇರಿಕೊಂಡು ಕ್ಲಬ್ ಹೌಸ್ ನಲ್ಲಿ ಪಾಕಿಸ್ಥಾನದ ಪರವಾಗಿ ಘೋಷಣೆ ಹಾಕಿರುವ ಪ್ರಸಂಗ ಬೆಳಕಿಗೆ ಬಂದಿದೆ.
ಬೆಂಗಳೂರಿನ ಟೆಕ್ಕಿಗಳು ಸೇರಿದಂತೆ ವಿವಿಧ ಕಡೆಯ ಯುವಕ- ಯುವತಿಯರಿದ್ದ ಕ್ಲಬ್ ಹೌಸ್ ಚರ್ಚೆಯಲ್ಲಿ ಪಾಕಿಸ್ಥಾನದ ಧ್ವಜವನ್ನು ತಮ್ಮ ಡಿಪಿಗೆ ಹಾಕ್ಕೊಂಡಿದ್ದಲ್ಲದೆ, ಪಾಕಿಸ್ತಾನದ ರಾಷ್ಟ್ರಗೀತೆಯನ್ನು ಹಾಕಿ ಸಂಭ್ರಮಿಸಿದ್ದಾರೆ. ಪಾಕಿಸ್ತಾನ ಜಿಂದಾಬಾದ್, ಇಂಡಿಯಾ ಮುರ್ದಾಬಾದ್ ಎಂಬ ಟ್ಯಾಗ್ ಲೈನನ್ನೂ ಹಾಕ್ಕೊಂಡಿದ್ದರು. ಕನ್ನಡದಲ್ಲೇ ಮಾತನಾಡುತ್ತಿದ್ದ ಯುವಕರು ಪಾಕಿಸ್ಥಾನದ ಧ್ವಜವುಳ್ಳ ಡಿಪಿಗಳನ್ನು ಹಾಕ್ಕೊಳ್ಳುವಂತೆ ಗ್ರೂಪಿನಲ್ಲಿದ್ದವರಿಗೆ ಪ್ರಚೋದಿಸುತ್ತಿದ್ದರು. ಕನ್ನಡದಲ್ಲಿಯೇ ಅಶ್ಲೀಲವಾಗಿ ಮಾತನಾಡಿಕೊಂಡು ಕೆಲವರು ವಿಕೃತಿ ಮೆರೆದಿದ್ದಾರೆ.


ಆಗಸ್ಟ್ 14ರ ಮಧ್ಯರಾತ್ರಿ ಕ್ಲಬ್ ಹೌಸ್ ಚರ್ಚೆ ನಡೆದಿದ್ದು, ಗ್ರೂಪಿನಲ್ಲಿದ್ದ ಹತ್ತಕ್ಕೂ ಹೆಚ್ಚು ಸದಸ್ಯರು ಪಾಕಿಸ್ತಾನದ ಬಾವುಟವನ್ನು ತಮ್ಮ ಡಿಪಿಯನ್ನಾಗಿ ಹಾಕ್ಕೊಂಡಿದ್ದರು. ರಿಕಿ, ಸೌರವ್, ರೊಲೆಕ್ಸ್, ಸೂರಜ್, ಸ್ನೂಪ್ ಎಂದು ಕೆಲವರ ಖಾತೆಯಲ್ಲಿ ಹೆಸರುಗಳಿದ್ದವು. ಭಾರತದ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದು, ಪಾಕಿಸ್ತಾನದ ಪರವಾಗಿ ಜಯಕಾರ ಹಾಕಿದ್ದಾರೆ. ಬೆಂಗಳೂರಿನ ಮಾನ್ಯತಾ ಟೆಕ್ ಪಾರ್ಕ್ ನಲ್ಲಿ ಟೆಕ್ಕಿಯಾಗಿರುವ ಸೌರಭ್ ಎಂಬಾತ ಕೃತ್ಯದಲ್ಲಿ ಭಾಗಿಯಾಗಿದ್ದಾನೆಂದು ಆರೋಪ ಕೇಳಿಬಂದಿದೆ. ಇದನ್ನು ಗಮನಿಸಿದ ಯುವತಿಯೊಬ್ಬಳು ಕ್ಲಬ್ ಹೌಸ್ ಚರ್ಚೆಯ ಸ್ಕ್ರೀನ್ ಶಾಟ್ ತೆಗೆದು ಜಾಲತಾಣದಲ್ಲಿ ಹರಿಯಬಿಟ್ಟಿದ್ದು, ಹಿಂದು ಸಂಘಟನೆಗಳಿಂದ ಭಾರೀ ಆಕ್ರೋಶ ವ್ಯಕ್ತವಾಗಿದೆ.
Pro Pakistan slogans heard from techies during independence day on Club house in Bangalore. Manayata Tech Park techie Sowrabh has shouted pro pak slogans later a girl in the group shared it on social media.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm