ಬ್ರೇಕಿಂಗ್ ನ್ಯೂಸ್
16-08-22 03:32 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 16: ದೇಶಾದ್ಯಂತ ಸ್ವಾತಂತ್ರ್ಯೋತ್ಸವ ಆಚರಣೆಯ ಸಂಭ್ರಮದ ನಡುವಲ್ಲೇ ಬೆಂಗಳೂರಿನಲ್ಲಿ ಕೆಲವು ಕಿಡಿಗೇಡಿಗಳು ಸೇರಿಕೊಂಡು ಕ್ಲಬ್ ಹೌಸ್ ನಲ್ಲಿ ಪಾಕಿಸ್ಥಾನದ ಪರವಾಗಿ ಘೋಷಣೆ ಹಾಕಿರುವ ಪ್ರಸಂಗ ಬೆಳಕಿಗೆ ಬಂದಿದೆ.
ಬೆಂಗಳೂರಿನ ಟೆಕ್ಕಿಗಳು ಸೇರಿದಂತೆ ವಿವಿಧ ಕಡೆಯ ಯುವಕ- ಯುವತಿಯರಿದ್ದ ಕ್ಲಬ್ ಹೌಸ್ ಚರ್ಚೆಯಲ್ಲಿ ಪಾಕಿಸ್ಥಾನದ ಧ್ವಜವನ್ನು ತಮ್ಮ ಡಿಪಿಗೆ ಹಾಕ್ಕೊಂಡಿದ್ದಲ್ಲದೆ, ಪಾಕಿಸ್ತಾನದ ರಾಷ್ಟ್ರಗೀತೆಯನ್ನು ಹಾಕಿ ಸಂಭ್ರಮಿಸಿದ್ದಾರೆ. ಪಾಕಿಸ್ತಾನ ಜಿಂದಾಬಾದ್, ಇಂಡಿಯಾ ಮುರ್ದಾಬಾದ್ ಎಂಬ ಟ್ಯಾಗ್ ಲೈನನ್ನೂ ಹಾಕ್ಕೊಂಡಿದ್ದರು. ಕನ್ನಡದಲ್ಲೇ ಮಾತನಾಡುತ್ತಿದ್ದ ಯುವಕರು ಪಾಕಿಸ್ಥಾನದ ಧ್ವಜವುಳ್ಳ ಡಿಪಿಗಳನ್ನು ಹಾಕ್ಕೊಳ್ಳುವಂತೆ ಗ್ರೂಪಿನಲ್ಲಿದ್ದವರಿಗೆ ಪ್ರಚೋದಿಸುತ್ತಿದ್ದರು. ಕನ್ನಡದಲ್ಲಿಯೇ ಅಶ್ಲೀಲವಾಗಿ ಮಾತನಾಡಿಕೊಂಡು ಕೆಲವರು ವಿಕೃತಿ ಮೆರೆದಿದ್ದಾರೆ.


ಆಗಸ್ಟ್ 14ರ ಮಧ್ಯರಾತ್ರಿ ಕ್ಲಬ್ ಹೌಸ್ ಚರ್ಚೆ ನಡೆದಿದ್ದು, ಗ್ರೂಪಿನಲ್ಲಿದ್ದ ಹತ್ತಕ್ಕೂ ಹೆಚ್ಚು ಸದಸ್ಯರು ಪಾಕಿಸ್ತಾನದ ಬಾವುಟವನ್ನು ತಮ್ಮ ಡಿಪಿಯನ್ನಾಗಿ ಹಾಕ್ಕೊಂಡಿದ್ದರು. ರಿಕಿ, ಸೌರವ್, ರೊಲೆಕ್ಸ್, ಸೂರಜ್, ಸ್ನೂಪ್ ಎಂದು ಕೆಲವರ ಖಾತೆಯಲ್ಲಿ ಹೆಸರುಗಳಿದ್ದವು. ಭಾರತದ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದು, ಪಾಕಿಸ್ತಾನದ ಪರವಾಗಿ ಜಯಕಾರ ಹಾಕಿದ್ದಾರೆ. ಬೆಂಗಳೂರಿನ ಮಾನ್ಯತಾ ಟೆಕ್ ಪಾರ್ಕ್ ನಲ್ಲಿ ಟೆಕ್ಕಿಯಾಗಿರುವ ಸೌರಭ್ ಎಂಬಾತ ಕೃತ್ಯದಲ್ಲಿ ಭಾಗಿಯಾಗಿದ್ದಾನೆಂದು ಆರೋಪ ಕೇಳಿಬಂದಿದೆ. ಇದನ್ನು ಗಮನಿಸಿದ ಯುವತಿಯೊಬ್ಬಳು ಕ್ಲಬ್ ಹೌಸ್ ಚರ್ಚೆಯ ಸ್ಕ್ರೀನ್ ಶಾಟ್ ತೆಗೆದು ಜಾಲತಾಣದಲ್ಲಿ ಹರಿಯಬಿಟ್ಟಿದ್ದು, ಹಿಂದು ಸಂಘಟನೆಗಳಿಂದ ಭಾರೀ ಆಕ್ರೋಶ ವ್ಯಕ್ತವಾಗಿದೆ.
Pro Pakistan slogans heard from techies during independence day on Club house in Bangalore. Manayata Tech Park techie Sowrabh has shouted pro pak slogans later a girl in the group shared it on social media.
22-06-26 03:44 pm
HK News Staffer
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
22-06-26 12:55 pm
HK News Staffer
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
21-06-26 08:59 pm
HK News Staffer
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
22-06-26 12:53 pm
HK News Staffer
ಕಡಬ ; ಪತ್ನಿಯನ್ನು ಕಡಿದು ಕೊಂದು ನೇಣು ಬಿಗಿದು ಸಾವಿ...
20-06-26 09:13 pm
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm