ಬ್ರೇಕಿಂಗ್ ನ್ಯೂಸ್
17-08-22 10:31 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 17: ಚುನಾವಣೆ ಹೊಸ್ತಿಲಲ್ಲಿರುವ ಕರ್ನಾಟಕ ರಾಜ್ಯದಲ್ಲಿ ವಿವಿಧ ಸಮುದಾಯಗಳಿಗೆ ಸೇರಿದ ಮಠಗಳು, ದೇವಾಲಯಗಳು, ಟ್ರಸ್ಟ್ ಗಳಿಗೆ ಅನುದಾನ ಬಿಡುಗಡೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಮುಜರಾಯಿ ಇಲಾಖೆಯಿಂದ ಒಟ್ಟು 142.59 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಿದ್ದು, ಅವುಗಳಲ್ಲಿ 178 ಮಠಗಳು, 59 ದೇವಸ್ಥಾನಗಳು, 26 ಸಂಘ-ಸಂಸ್ಥೆಗಳು ಸೇರಿವೆ. ಸಮಾಜಮುಖಿ ಚಟುವಟಿಕೆಗಳು, ಅಭಿವೃದ್ಧಿ, ಜೀರ್ಣೋದ್ಧಾರ ಕಾರ್ಯಗಳಿಗೆ ಈ ಹಣ ಬಳಸಿಕೊಳ್ಳಲು ಅವಕಾಶವಿದೆ. 178 ಮಠಗಳಿಗೆ 108.24 ಕೋಟಿ ರೂ., 59 ದೇವಸ್ಥಾನಗಳಿಗೆ 21.35 ಕೋಟಿ ರೂಪಾಯಿ, 26 ಸಂಘ-ಸಂಸ್ಥೆಗಳು ಹಾಗೂ ಟ್ರಸ್ಟ್ಗಳಿಗೆ 13 ಕೋಟಿ ರೂಪಾಯಿ ಅನುದಾನ ಘೋಷಿಸಲಾಗಿದೆ. ಆರ್ಥಿಕ ಇಲಾಖೆಯ ಸಹಮತದ ಮೇರೆಗೆ 148.59 ಕೋಟಿ ರೂಪಾಯಿ ಅನುದಾನಕ್ಕೆ ಸರ್ಕಾರವು ಆಡಳಿತಾತ್ಮಕ ಮಂಜೂರಾತಿ ನೀಡಿದೆ.
ಅನುದಾನ ಬಳಕೆಗೆ ಷರತ್ತು
ಸರ್ಕಾರ ಬಿಡುಗಡೆ ಮಾಡಿರುವ ಅನುದಾನಗಳನ್ನು ಬಳಸಿಕೊಳ್ಳಲು ಇದೇ ಸಂದರ್ಭದಲ್ಲಿ ಷರತ್ತು ವಿಧಿಸಲಾಗಿದೆ. ಮಂಜೂರಾದ ಅನುದಾನವನ್ನು 'ಖಜಾನೆ-2' ಮೂಲಕ ಜಿಲ್ಲಾಧಿಕಾರಿಗಳ ಡಿಡಿಒಒ ಸಂಕೇತಕ್ಕೆ ಅಪ್ಲೋಡ್ ಮಾಡಬೇಕು. ಸಂಬಂಧಿಸಿದ ಜಿಲ್ಲಾಧಿಕಾರಿಗಳು ತಹಶೀಲ್ದಾರ್ ಮೂಲಕ ನಿಯಮಾನುಸಾರ ಪ್ರಸ್ತಾವನೆ ಪಡೆದು, ಅನುದಾನ ಮಂಜೂರಾತಿಗೆ ಒಪ್ಪಿಗೆ ನೀಡಬೇಕು. ತಹಶೀಲ್ದಾರ್ ಅವರೇ ಅನುದಾನದ ಮೊತ್ತವನ್ನು ಡ್ರಾ ಮಾಡಿ ಸಂಸ್ಥೆಗಳಿಗೆ ಕೊಡಬೇಕು ಎಂಬ ನಿಯಮವನ್ನು ಹೇರಲಾಗಿದೆ.
ಅನುದಾನ ಪಡೆದುಕೊಂಡ ಸಂಸ್ಥೆಯು ನಿಯಮಾನುಸಾರ 'ಮುಂಗಡ ರಸೀದಿ' (Advance Receipt) ಪಡೆದು ಸಾದಿಲ್ವಾರು ಬಿಲ್ಗೆ ಲಗತ್ತಿಸಿ ಸಂಸ್ಥೆಯ ಹೆಸರಿಗೆ ಖಜಾನೆಯ ಚೆಕ್ ನೀಡಬೇಕು. ಉದ್ದೇಶಿತ ಕಾಮಗಾರಿಗಳ ಅಂದಾಜುಪಟ್ಟಿಗೆ ಸಂಬಂಧಿಸಿದ ಸಕ್ಷಮ ಪ್ರಾಧಿಕಾರದಿಂದ ತಾಂತ್ರಿಕ ಮತ್ತು ಆಡಳಿತಾತ್ಮಕ ಅನುಮೋದನೆ ಪಡೆದುಕೊಳ್ಳಬೇಕು ಎಂದು ಮುಜರಾಯಿ ಇಲಾಖೆಯ ಆದೇಶದಲ್ಲಿ ತಿಳಿಸಿದೆ.
Karnataka government releases funds for temples and trusts before election.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 12:29 pm
Mangalore Correspondent
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
Mangalore, Volvo Driver Satish Shetty: ರಸ್ತೆ...
03-02-26 09:49 pm
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm