ಬ್ರೇಕಿಂಗ್ ನ್ಯೂಸ್
17-08-22 10:31 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 17: ಚುನಾವಣೆ ಹೊಸ್ತಿಲಲ್ಲಿರುವ ಕರ್ನಾಟಕ ರಾಜ್ಯದಲ್ಲಿ ವಿವಿಧ ಸಮುದಾಯಗಳಿಗೆ ಸೇರಿದ ಮಠಗಳು, ದೇವಾಲಯಗಳು, ಟ್ರಸ್ಟ್ ಗಳಿಗೆ ಅನುದಾನ ಬಿಡುಗಡೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಮುಜರಾಯಿ ಇಲಾಖೆಯಿಂದ ಒಟ್ಟು 142.59 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಿದ್ದು, ಅವುಗಳಲ್ಲಿ 178 ಮಠಗಳು, 59 ದೇವಸ್ಥಾನಗಳು, 26 ಸಂಘ-ಸಂಸ್ಥೆಗಳು ಸೇರಿವೆ. ಸಮಾಜಮುಖಿ ಚಟುವಟಿಕೆಗಳು, ಅಭಿವೃದ್ಧಿ, ಜೀರ್ಣೋದ್ಧಾರ ಕಾರ್ಯಗಳಿಗೆ ಈ ಹಣ ಬಳಸಿಕೊಳ್ಳಲು ಅವಕಾಶವಿದೆ. 178 ಮಠಗಳಿಗೆ 108.24 ಕೋಟಿ ರೂ., 59 ದೇವಸ್ಥಾನಗಳಿಗೆ 21.35 ಕೋಟಿ ರೂಪಾಯಿ, 26 ಸಂಘ-ಸಂಸ್ಥೆಗಳು ಹಾಗೂ ಟ್ರಸ್ಟ್ಗಳಿಗೆ 13 ಕೋಟಿ ರೂಪಾಯಿ ಅನುದಾನ ಘೋಷಿಸಲಾಗಿದೆ. ಆರ್ಥಿಕ ಇಲಾಖೆಯ ಸಹಮತದ ಮೇರೆಗೆ 148.59 ಕೋಟಿ ರೂಪಾಯಿ ಅನುದಾನಕ್ಕೆ ಸರ್ಕಾರವು ಆಡಳಿತಾತ್ಮಕ ಮಂಜೂರಾತಿ ನೀಡಿದೆ.
ಅನುದಾನ ಬಳಕೆಗೆ ಷರತ್ತು
ಸರ್ಕಾರ ಬಿಡುಗಡೆ ಮಾಡಿರುವ ಅನುದಾನಗಳನ್ನು ಬಳಸಿಕೊಳ್ಳಲು ಇದೇ ಸಂದರ್ಭದಲ್ಲಿ ಷರತ್ತು ವಿಧಿಸಲಾಗಿದೆ. ಮಂಜೂರಾದ ಅನುದಾನವನ್ನು 'ಖಜಾನೆ-2' ಮೂಲಕ ಜಿಲ್ಲಾಧಿಕಾರಿಗಳ ಡಿಡಿಒಒ ಸಂಕೇತಕ್ಕೆ ಅಪ್ಲೋಡ್ ಮಾಡಬೇಕು. ಸಂಬಂಧಿಸಿದ ಜಿಲ್ಲಾಧಿಕಾರಿಗಳು ತಹಶೀಲ್ದಾರ್ ಮೂಲಕ ನಿಯಮಾನುಸಾರ ಪ್ರಸ್ತಾವನೆ ಪಡೆದು, ಅನುದಾನ ಮಂಜೂರಾತಿಗೆ ಒಪ್ಪಿಗೆ ನೀಡಬೇಕು. ತಹಶೀಲ್ದಾರ್ ಅವರೇ ಅನುದಾನದ ಮೊತ್ತವನ್ನು ಡ್ರಾ ಮಾಡಿ ಸಂಸ್ಥೆಗಳಿಗೆ ಕೊಡಬೇಕು ಎಂಬ ನಿಯಮವನ್ನು ಹೇರಲಾಗಿದೆ.
ಅನುದಾನ ಪಡೆದುಕೊಂಡ ಸಂಸ್ಥೆಯು ನಿಯಮಾನುಸಾರ 'ಮುಂಗಡ ರಸೀದಿ' (Advance Receipt) ಪಡೆದು ಸಾದಿಲ್ವಾರು ಬಿಲ್ಗೆ ಲಗತ್ತಿಸಿ ಸಂಸ್ಥೆಯ ಹೆಸರಿಗೆ ಖಜಾನೆಯ ಚೆಕ್ ನೀಡಬೇಕು. ಉದ್ದೇಶಿತ ಕಾಮಗಾರಿಗಳ ಅಂದಾಜುಪಟ್ಟಿಗೆ ಸಂಬಂಧಿಸಿದ ಸಕ್ಷಮ ಪ್ರಾಧಿಕಾರದಿಂದ ತಾಂತ್ರಿಕ ಮತ್ತು ಆಡಳಿತಾತ್ಮಕ ಅನುಮೋದನೆ ಪಡೆದುಕೊಳ್ಳಬೇಕು ಎಂದು ಮುಜರಾಯಿ ಇಲಾಖೆಯ ಆದೇಶದಲ್ಲಿ ತಿಳಿಸಿದೆ.
Karnataka government releases funds for temples and trusts before election.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm