ಬ್ರೇಕಿಂಗ್ ನ್ಯೂಸ್
17-08-22 10:31 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 17: ಚುನಾವಣೆ ಹೊಸ್ತಿಲಲ್ಲಿರುವ ಕರ್ನಾಟಕ ರಾಜ್ಯದಲ್ಲಿ ವಿವಿಧ ಸಮುದಾಯಗಳಿಗೆ ಸೇರಿದ ಮಠಗಳು, ದೇವಾಲಯಗಳು, ಟ್ರಸ್ಟ್ ಗಳಿಗೆ ಅನುದಾನ ಬಿಡುಗಡೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಮುಜರಾಯಿ ಇಲಾಖೆಯಿಂದ ಒಟ್ಟು 142.59 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಿದ್ದು, ಅವುಗಳಲ್ಲಿ 178 ಮಠಗಳು, 59 ದೇವಸ್ಥಾನಗಳು, 26 ಸಂಘ-ಸಂಸ್ಥೆಗಳು ಸೇರಿವೆ. ಸಮಾಜಮುಖಿ ಚಟುವಟಿಕೆಗಳು, ಅಭಿವೃದ್ಧಿ, ಜೀರ್ಣೋದ್ಧಾರ ಕಾರ್ಯಗಳಿಗೆ ಈ ಹಣ ಬಳಸಿಕೊಳ್ಳಲು ಅವಕಾಶವಿದೆ. 178 ಮಠಗಳಿಗೆ 108.24 ಕೋಟಿ ರೂ., 59 ದೇವಸ್ಥಾನಗಳಿಗೆ 21.35 ಕೋಟಿ ರೂಪಾಯಿ, 26 ಸಂಘ-ಸಂಸ್ಥೆಗಳು ಹಾಗೂ ಟ್ರಸ್ಟ್ಗಳಿಗೆ 13 ಕೋಟಿ ರೂಪಾಯಿ ಅನುದಾನ ಘೋಷಿಸಲಾಗಿದೆ. ಆರ್ಥಿಕ ಇಲಾಖೆಯ ಸಹಮತದ ಮೇರೆಗೆ 148.59 ಕೋಟಿ ರೂಪಾಯಿ ಅನುದಾನಕ್ಕೆ ಸರ್ಕಾರವು ಆಡಳಿತಾತ್ಮಕ ಮಂಜೂರಾತಿ ನೀಡಿದೆ.
ಅನುದಾನ ಬಳಕೆಗೆ ಷರತ್ತು
ಸರ್ಕಾರ ಬಿಡುಗಡೆ ಮಾಡಿರುವ ಅನುದಾನಗಳನ್ನು ಬಳಸಿಕೊಳ್ಳಲು ಇದೇ ಸಂದರ್ಭದಲ್ಲಿ ಷರತ್ತು ವಿಧಿಸಲಾಗಿದೆ. ಮಂಜೂರಾದ ಅನುದಾನವನ್ನು 'ಖಜಾನೆ-2' ಮೂಲಕ ಜಿಲ್ಲಾಧಿಕಾರಿಗಳ ಡಿಡಿಒಒ ಸಂಕೇತಕ್ಕೆ ಅಪ್ಲೋಡ್ ಮಾಡಬೇಕು. ಸಂಬಂಧಿಸಿದ ಜಿಲ್ಲಾಧಿಕಾರಿಗಳು ತಹಶೀಲ್ದಾರ್ ಮೂಲಕ ನಿಯಮಾನುಸಾರ ಪ್ರಸ್ತಾವನೆ ಪಡೆದು, ಅನುದಾನ ಮಂಜೂರಾತಿಗೆ ಒಪ್ಪಿಗೆ ನೀಡಬೇಕು. ತಹಶೀಲ್ದಾರ್ ಅವರೇ ಅನುದಾನದ ಮೊತ್ತವನ್ನು ಡ್ರಾ ಮಾಡಿ ಸಂಸ್ಥೆಗಳಿಗೆ ಕೊಡಬೇಕು ಎಂಬ ನಿಯಮವನ್ನು ಹೇರಲಾಗಿದೆ.
ಅನುದಾನ ಪಡೆದುಕೊಂಡ ಸಂಸ್ಥೆಯು ನಿಯಮಾನುಸಾರ 'ಮುಂಗಡ ರಸೀದಿ' (Advance Receipt) ಪಡೆದು ಸಾದಿಲ್ವಾರು ಬಿಲ್ಗೆ ಲಗತ್ತಿಸಿ ಸಂಸ್ಥೆಯ ಹೆಸರಿಗೆ ಖಜಾನೆಯ ಚೆಕ್ ನೀಡಬೇಕು. ಉದ್ದೇಶಿತ ಕಾಮಗಾರಿಗಳ ಅಂದಾಜುಪಟ್ಟಿಗೆ ಸಂಬಂಧಿಸಿದ ಸಕ್ಷಮ ಪ್ರಾಧಿಕಾರದಿಂದ ತಾಂತ್ರಿಕ ಮತ್ತು ಆಡಳಿತಾತ್ಮಕ ಅನುಮೋದನೆ ಪಡೆದುಕೊಳ್ಳಬೇಕು ಎಂದು ಮುಜರಾಯಿ ಇಲಾಖೆಯ ಆದೇಶದಲ್ಲಿ ತಿಳಿಸಿದೆ.
Karnataka government releases funds for temples and trusts before election.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
11-11-25 10:20 pm
HK News Desk
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
ದೆಹಲಿಯಲ್ಲಿ ಭಾರೀ ಬಾಂಬ್ ಸ್ಫೋಟ ; ಛಿದ್ರಗೊಂಡು ಚದುರ...
10-11-25 09:08 pm
ರಾಜಧಾನಿ ದೆಹಲಿಯಲ್ಲಿ ಪ್ರಬಲ ಬಾಂಬ್ ಸ್ಫೋಟ ; ಒಂಬತ್ತ...
10-11-25 08:23 pm
11-11-25 10:15 pm
Mangalore Correspondent
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
11-11-25 06:33 pm
Mangalore Correspondent
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm