ಬ್ರೇಕಿಂಗ್ ನ್ಯೂಸ್
17-08-22 10:31 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 17: ಚುನಾವಣೆ ಹೊಸ್ತಿಲಲ್ಲಿರುವ ಕರ್ನಾಟಕ ರಾಜ್ಯದಲ್ಲಿ ವಿವಿಧ ಸಮುದಾಯಗಳಿಗೆ ಸೇರಿದ ಮಠಗಳು, ದೇವಾಲಯಗಳು, ಟ್ರಸ್ಟ್ ಗಳಿಗೆ ಅನುದಾನ ಬಿಡುಗಡೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಮುಜರಾಯಿ ಇಲಾಖೆಯಿಂದ ಒಟ್ಟು 142.59 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಿದ್ದು, ಅವುಗಳಲ್ಲಿ 178 ಮಠಗಳು, 59 ದೇವಸ್ಥಾನಗಳು, 26 ಸಂಘ-ಸಂಸ್ಥೆಗಳು ಸೇರಿವೆ. ಸಮಾಜಮುಖಿ ಚಟುವಟಿಕೆಗಳು, ಅಭಿವೃದ್ಧಿ, ಜೀರ್ಣೋದ್ಧಾರ ಕಾರ್ಯಗಳಿಗೆ ಈ ಹಣ ಬಳಸಿಕೊಳ್ಳಲು ಅವಕಾಶವಿದೆ. 178 ಮಠಗಳಿಗೆ 108.24 ಕೋಟಿ ರೂ., 59 ದೇವಸ್ಥಾನಗಳಿಗೆ 21.35 ಕೋಟಿ ರೂಪಾಯಿ, 26 ಸಂಘ-ಸಂಸ್ಥೆಗಳು ಹಾಗೂ ಟ್ರಸ್ಟ್ಗಳಿಗೆ 13 ಕೋಟಿ ರೂಪಾಯಿ ಅನುದಾನ ಘೋಷಿಸಲಾಗಿದೆ. ಆರ್ಥಿಕ ಇಲಾಖೆಯ ಸಹಮತದ ಮೇರೆಗೆ 148.59 ಕೋಟಿ ರೂಪಾಯಿ ಅನುದಾನಕ್ಕೆ ಸರ್ಕಾರವು ಆಡಳಿತಾತ್ಮಕ ಮಂಜೂರಾತಿ ನೀಡಿದೆ.
ಅನುದಾನ ಬಳಕೆಗೆ ಷರತ್ತು
ಸರ್ಕಾರ ಬಿಡುಗಡೆ ಮಾಡಿರುವ ಅನುದಾನಗಳನ್ನು ಬಳಸಿಕೊಳ್ಳಲು ಇದೇ ಸಂದರ್ಭದಲ್ಲಿ ಷರತ್ತು ವಿಧಿಸಲಾಗಿದೆ. ಮಂಜೂರಾದ ಅನುದಾನವನ್ನು 'ಖಜಾನೆ-2' ಮೂಲಕ ಜಿಲ್ಲಾಧಿಕಾರಿಗಳ ಡಿಡಿಒಒ ಸಂಕೇತಕ್ಕೆ ಅಪ್ಲೋಡ್ ಮಾಡಬೇಕು. ಸಂಬಂಧಿಸಿದ ಜಿಲ್ಲಾಧಿಕಾರಿಗಳು ತಹಶೀಲ್ದಾರ್ ಮೂಲಕ ನಿಯಮಾನುಸಾರ ಪ್ರಸ್ತಾವನೆ ಪಡೆದು, ಅನುದಾನ ಮಂಜೂರಾತಿಗೆ ಒಪ್ಪಿಗೆ ನೀಡಬೇಕು. ತಹಶೀಲ್ದಾರ್ ಅವರೇ ಅನುದಾನದ ಮೊತ್ತವನ್ನು ಡ್ರಾ ಮಾಡಿ ಸಂಸ್ಥೆಗಳಿಗೆ ಕೊಡಬೇಕು ಎಂಬ ನಿಯಮವನ್ನು ಹೇರಲಾಗಿದೆ.
ಅನುದಾನ ಪಡೆದುಕೊಂಡ ಸಂಸ್ಥೆಯು ನಿಯಮಾನುಸಾರ 'ಮುಂಗಡ ರಸೀದಿ' (Advance Receipt) ಪಡೆದು ಸಾದಿಲ್ವಾರು ಬಿಲ್ಗೆ ಲಗತ್ತಿಸಿ ಸಂಸ್ಥೆಯ ಹೆಸರಿಗೆ ಖಜಾನೆಯ ಚೆಕ್ ನೀಡಬೇಕು. ಉದ್ದೇಶಿತ ಕಾಮಗಾರಿಗಳ ಅಂದಾಜುಪಟ್ಟಿಗೆ ಸಂಬಂಧಿಸಿದ ಸಕ್ಷಮ ಪ್ರಾಧಿಕಾರದಿಂದ ತಾಂತ್ರಿಕ ಮತ್ತು ಆಡಳಿತಾತ್ಮಕ ಅನುಮೋದನೆ ಪಡೆದುಕೊಳ್ಳಬೇಕು ಎಂದು ಮುಜರಾಯಿ ಇಲಾಖೆಯ ಆದೇಶದಲ್ಲಿ ತಿಳಿಸಿದೆ.
Karnataka government releases funds for temples and trusts before election.
28-08-25 02:41 pm
HK News Desk
ಬಿಳಿಯಲ್ಲ ಮಾರಾಯರೇ ನೀಲಿ ಮೊಟ್ಟೆ ಇಟ್ಟ ನಾಟಿ ಕೋಳಿ ;...
28-08-25 11:56 am
Banumustak, DK Shivakumar, Chamundi Hill: ದೇವ...
27-08-25 06:21 pm
Congress, MP Yaduveer, DK Shivakumar: ಕಾಂಗ್ರೆ...
27-08-25 06:17 pm
ದಸರಾ ಉದ್ಘಾಟಕರ ಆಯ್ಕೆ ವಿವಾದ ; ನೀವು ನಂಬಿರುವ ನಿಮ್...
27-08-25 03:17 pm
28-08-25 12:19 pm
HK News Desk
ಕೈ ಗ್ಯಾರಂಟಿಗೆ ಬೊಕ್ಕಸ ಪೂರ ಖಾಲಿ - ಖಾಲಿ ; ತೆಲಂಗಾ...
26-08-25 09:02 pm
ಜಮ್ಮು ಭಾರಿ ಮಳೆಗೆ ಒಂಬತ್ತು ಮಂದಿ ಬಲಿ ; ಹಲವೆಡೆ ಭೂ...
26-08-25 07:39 pm
Trump Immigrant Population: ಟ್ರಂಪ್ ಸಾಮ್ರಾಜ್ಯದ...
24-08-25 01:47 pm
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
28-08-25 02:51 pm
Mangalore Correspondent
SIT, Sujata Bhat, Dharmasthala Case: ಕೇಸ್ ಹಿಂ...
28-08-25 11:27 am
Pastor John Shamine, Madan Bugadi, IHRACSJC:...
27-08-25 11:02 pm
FIR, Chinnayya, Dharmasthala, Mahesh Thimarod...
27-08-25 09:19 pm
Praveen Nettaru, NIA, Mangalore: ಪ್ರವೀಣ್ ನೆಟ್...
27-08-25 08:46 pm
27-08-25 10:23 pm
HK News Desk
Karkala Murder, Arrest, Crime: ಹೆಂಡ್ತಿ ಮಕ್ಕಳನ...
26-08-25 10:39 pm
ಟೆಕ್ನಾಲಜಿಯಲ್ಲಿ ಮುಂದಿರುವ ಅಮೆರಿಕದ ಪ್ರಜೆಗಳನ್ನೇ ಯ...
26-08-25 05:24 pm
ದುಬೈನಲ್ಲಿ ಗಂಡ, ಮೈಸೂರಿನಲ್ಲಿ ಪತ್ನಿಯ ಲವ್ವಿ ಡವ್ವಿ...
25-08-25 08:29 pm
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm