ಬ್ರೇಕಿಂಗ್ ನ್ಯೂಸ್
17-08-22 10:58 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 17: ವಿಶ್ವದ ಅತಿ ದೊಡ್ಡ ವಿಮಾನ ಏರ್ಬಸ್ ಎ-380 ಸೂಪರ್ಜಂಬೋ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬರುವ ಅಕ್ಟೋಬರ್ 30ರಂದು ಲ್ಯಾಂಡ್ ಆಗಲಿದೆ.
ಈ ಮೂಲಕ ದಕ್ಷಿಣ ಭಾರತದಲ್ಲಿ ಮೊದಲ ಬಾರಿಗೆ ಅತಿ ದೊಡ್ಡ ಏರ್ ಬಸ್ ಭೂಸ್ವರ್ಶ ಮಾಡಲಿದೆ. ಒಟ್ಟು 72.75 ಮೀಟರ್ ಉದ್ದ, 24.45 ಮೀಟರ್ ಎತ್ತರ ಹೊಂದಿರುವ ಈ ವಿಮಾನದಲ್ಲಿ ಒಂದು ಬಾರಿ ಗರಿಷ್ಠ 853 ಮಂದಿ ಪ್ರಯಾಣಿಸಬಹುದಾಗಿದೆ. ಒಂದು ಬಾರಿಗೆ 3 ಸಾವಿರ ಸೂಟ್ಕೇಸ್ಗಳನ್ನು ತೆಗದುಕೊಂಡು ಹೋಗುವ ಸಾಮರ್ಥ್ಯವನ್ನು ಹೊಂದಿದೆ.
ಈ ಕುರಿತು ಯುಎಇ ವಿಮಾನಯಾನ ಸಂಸ್ಥೆ ಎಮಿರೇಟ್ಸ್ ಹೇಳಿಕೆ ಬಿಡುಗಡೆ ಮಾಡಿದೆ. ಅಕ್ಟೋಬರ್ 30 ರಿಂದ ಪ್ರತಿನಿತ್ಯ ಬೆಂಗಳೂರಿನಿಂದ ದುಬೈಗೆ ಸೇವೆ ನೀಡಲಾಗುವುದು ಎಂದು ಅದು ತಿಳಿಸಿದೆ. ಎಮಿರೇಟ್ಸ್ ಸಂಸ್ಥೆಯ ಏರ್ಬಸ್ ಎ-380 ವಿಮಾನ ಲ್ಯಾಂಡ್ ಆಗುವ ಎರಡನೇ ನಿಲ್ದಾಣ ಬೆಂಗಳೂರು ಆಗಲಿದೆ. ಈ ಮೊದಲು 2014ರಲ್ಲಿ ಎಮಿರೇಟ್ಸ್ ಸಂಸ್ಥೆ ಮುಂಬೈನಿಂದ ದುಬೈಗೆ ಈ ಸೇವೆಯನ್ನು ನೀಡಿತ್ತು.
ದುಬೈನಿಂದ ಟೇಕ್ ಆಫ್ ಆದ ಏರ್ ಬಸ್ ಆಕ್ಟೋಬರ್ 30 ರಂದು ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಆಗಲಿದೆ. ಈ ಡಬ್ಬಲ್ ಡೆಕ್ಕರ್ ವಿಮಾನದಲ್ಲಿ ಮೂರು ದರ್ಜೆಯಲ್ಲಿ ಪ್ರಯಾಣಿಕರು ಪ್ರಯಾಣ ಮಾಡಬಹುದಾಗಿದೆ. ಎಕಾನಮಿ, ಬಿಸಿನೆಸ್, ಫಸ್ಟ್ ಕ್ಲಾಸ್ ಟಿಕೆಟ್ ಲಭ್ಯವಿದೆ.
ಬೋಯಿಂಗ್ 777 ಹೋಲಿಕೆ ಮಾಡಿದರೆ ಶೇ.45 ರಷ್ಟು ಹೆಚ್ಚು ಪ್ರಯಾಣಿಕರು ಈ ವಿಮಾನದಲ್ಲಿ ಪ್ರಯಾಣಿಸಬಹುದಾಗಿದೆ. ವಿಶ್ವದ 30 ವಿಮಾನ ನಿಲ್ದಾಣಗಳಿಗೆ ಏರ್ಬಸ್ 380 ವಿಮಾನ ಸೇವೆಯನ್ನು ಎಮಿರೇಟ್ಸ್ ನೀಡುತ್ತಿದೆ. 1985ರಿಂದ ಎಮಿರೇಟ್ಸ್ ಭಾರತದಲ್ಲಿ ಸೇವೆ ನೀಡಲು ಆರಂಭಿಸಿದೆ. 2003 ರಲ್ಲಿ ಏರ್ಬಸ್ ಕಂಪನಿ ಈ ವಿಮಾನವನ್ನು ನಿರ್ಮಾಣ ಮಾಡಿದೆ. ಇಲ್ಲಿಯವರೆಗೆ 3 ಪರೀಕ್ಷಾರ್ಥ ವಿಮಾನ ಸೇರಿದಂತೆ ಒಟ್ಟು 254 ವಿಮಾನಗಳನ್ನು ಉತ್ಪಾದನೆ ಮಾಡಲಾಗಿದೆ.
Emirates airline on Tuesday announced to put the world’s largest commercial airplane A380 into service for flights between Dubai and Bengaluru from October 30. So far, the service between the two destinations was offered by the airline through Boeing 777.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 06:59 pm
Mangalore Correspondent
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ; ಎಸ್ಐಟಿ ತನಿಖಾ...
04-02-26 12:29 pm
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
Mangalore, Volvo Driver Satish Shetty: ರಸ್ತೆ...
03-02-26 09:49 pm
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm