ಬ್ರೇಕಿಂಗ್ ನ್ಯೂಸ್
17-08-22 10:58 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 17: ವಿಶ್ವದ ಅತಿ ದೊಡ್ಡ ವಿಮಾನ ಏರ್ಬಸ್ ಎ-380 ಸೂಪರ್ಜಂಬೋ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬರುವ ಅಕ್ಟೋಬರ್ 30ರಂದು ಲ್ಯಾಂಡ್ ಆಗಲಿದೆ.
ಈ ಮೂಲಕ ದಕ್ಷಿಣ ಭಾರತದಲ್ಲಿ ಮೊದಲ ಬಾರಿಗೆ ಅತಿ ದೊಡ್ಡ ಏರ್ ಬಸ್ ಭೂಸ್ವರ್ಶ ಮಾಡಲಿದೆ. ಒಟ್ಟು 72.75 ಮೀಟರ್ ಉದ್ದ, 24.45 ಮೀಟರ್ ಎತ್ತರ ಹೊಂದಿರುವ ಈ ವಿಮಾನದಲ್ಲಿ ಒಂದು ಬಾರಿ ಗರಿಷ್ಠ 853 ಮಂದಿ ಪ್ರಯಾಣಿಸಬಹುದಾಗಿದೆ. ಒಂದು ಬಾರಿಗೆ 3 ಸಾವಿರ ಸೂಟ್ಕೇಸ್ಗಳನ್ನು ತೆಗದುಕೊಂಡು ಹೋಗುವ ಸಾಮರ್ಥ್ಯವನ್ನು ಹೊಂದಿದೆ.
ಈ ಕುರಿತು ಯುಎಇ ವಿಮಾನಯಾನ ಸಂಸ್ಥೆ ಎಮಿರೇಟ್ಸ್ ಹೇಳಿಕೆ ಬಿಡುಗಡೆ ಮಾಡಿದೆ. ಅಕ್ಟೋಬರ್ 30 ರಿಂದ ಪ್ರತಿನಿತ್ಯ ಬೆಂಗಳೂರಿನಿಂದ ದುಬೈಗೆ ಸೇವೆ ನೀಡಲಾಗುವುದು ಎಂದು ಅದು ತಿಳಿಸಿದೆ. ಎಮಿರೇಟ್ಸ್ ಸಂಸ್ಥೆಯ ಏರ್ಬಸ್ ಎ-380 ವಿಮಾನ ಲ್ಯಾಂಡ್ ಆಗುವ ಎರಡನೇ ನಿಲ್ದಾಣ ಬೆಂಗಳೂರು ಆಗಲಿದೆ. ಈ ಮೊದಲು 2014ರಲ್ಲಿ ಎಮಿರೇಟ್ಸ್ ಸಂಸ್ಥೆ ಮುಂಬೈನಿಂದ ದುಬೈಗೆ ಈ ಸೇವೆಯನ್ನು ನೀಡಿತ್ತು.
ದುಬೈನಿಂದ ಟೇಕ್ ಆಫ್ ಆದ ಏರ್ ಬಸ್ ಆಕ್ಟೋಬರ್ 30 ರಂದು ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಆಗಲಿದೆ. ಈ ಡಬ್ಬಲ್ ಡೆಕ್ಕರ್ ವಿಮಾನದಲ್ಲಿ ಮೂರು ದರ್ಜೆಯಲ್ಲಿ ಪ್ರಯಾಣಿಕರು ಪ್ರಯಾಣ ಮಾಡಬಹುದಾಗಿದೆ. ಎಕಾನಮಿ, ಬಿಸಿನೆಸ್, ಫಸ್ಟ್ ಕ್ಲಾಸ್ ಟಿಕೆಟ್ ಲಭ್ಯವಿದೆ.
ಬೋಯಿಂಗ್ 777 ಹೋಲಿಕೆ ಮಾಡಿದರೆ ಶೇ.45 ರಷ್ಟು ಹೆಚ್ಚು ಪ್ರಯಾಣಿಕರು ಈ ವಿಮಾನದಲ್ಲಿ ಪ್ರಯಾಣಿಸಬಹುದಾಗಿದೆ. ವಿಶ್ವದ 30 ವಿಮಾನ ನಿಲ್ದಾಣಗಳಿಗೆ ಏರ್ಬಸ್ 380 ವಿಮಾನ ಸೇವೆಯನ್ನು ಎಮಿರೇಟ್ಸ್ ನೀಡುತ್ತಿದೆ. 1985ರಿಂದ ಎಮಿರೇಟ್ಸ್ ಭಾರತದಲ್ಲಿ ಸೇವೆ ನೀಡಲು ಆರಂಭಿಸಿದೆ. 2003 ರಲ್ಲಿ ಏರ್ಬಸ್ ಕಂಪನಿ ಈ ವಿಮಾನವನ್ನು ನಿರ್ಮಾಣ ಮಾಡಿದೆ. ಇಲ್ಲಿಯವರೆಗೆ 3 ಪರೀಕ್ಷಾರ್ಥ ವಿಮಾನ ಸೇರಿದಂತೆ ಒಟ್ಟು 254 ವಿಮಾನಗಳನ್ನು ಉತ್ಪಾದನೆ ಮಾಡಲಾಗಿದೆ.
Emirates airline on Tuesday announced to put the world’s largest commercial airplane A380 into service for flights between Dubai and Bengaluru from October 30. So far, the service between the two destinations was offered by the airline through Boeing 777.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm