ಬ್ರೇಕಿಂಗ್ ನ್ಯೂಸ್
18-08-22 06:08 pm HK News Desk ಕರ್ನಾಟಕ
ಬಾಗಲಕೋಟೆ, ಆಗಸ್ಟ್ 18: ತನ್ನ ಅತ್ಯುತ್ತಮ ಮೈಮಾಟ, ಚಾಣಾಕ್ಷತನ, ವೇಗವಾಗಿ ಓಡುವ ಛಾತಿಯಂಥ ಹಲವು ವಿಶೇಷತೆ ಹೊಂದಿರುವ ಮುಧೋಳ ಶ್ವಾನ ಇದೀಗ ಮತ್ತೊಂದು ಗರಿ ತನ್ನ ಮುಡಿಗೇರಿಸಿಕೊಂಡಿದೆ.
ಮುಧೋಳ ತಾಲೂಕಿನ ತಿಮ್ಮಾಪುರದ ಮುಧೋಳ ಶ್ವಾನ ಸಂಶೋಧನಾ ಕೇಂದ್ರದ ಮುಖ್ಯಸ್ಥ ಡಾ|ಸುಶಾಂತ ಹಂಡಗೆ ಈ ವಿಷಯ ದೃಢಪಡಿಸಿದ್ದು, ಏ.25ರಂದು ಮುಧೋಳ ತಳಿಯ ಎರಡು ತಿಂಗಳ ವಯಸ್ಸಿನ ಎರಡು ಶ್ವಾನ ಮರಿಗಳನ್ನು ಕೇಂದ್ರದ ಎನ್ಎಸ್ಜಿ ಪಡೆಗೆ ಹಸ್ತಾಂತರಿಸಲಾಗಿದೆ ಎಂದು ತಿಳಿಸಿದ್ದಾರೆ.

ವಿಶೇಷತೆ ಏನು? ;
ಭಾರತದ ದೇಶೀಯ ತಳಿ ಹಾಗೂ ವಿದೇಶಿ ತಳಿಯ ಶ್ವಾನಗಳಿಗೆ ಹೋಲಿಸಿದರೆ ಮುಧೋಳ ಶ್ವಾನ ಹಲವು ವಿಶೇಷತೆ ಹೊಂದಿದೆ. ಅತ್ಯಂತ ತೆಳುವಾದ ಮೈಕಟ್ಟು (ಬೇರೆ ಶ್ವಾನಕ್ಕೆ ಹೋಲಿಸಿದರೆ ತೂಕದಲ್ಲಿ ಕಡಿಮೆ), ಗಂಟೆಗೆ 50 ಕಿಮೀ ಓಡಬಲ್ಲ, ಮೂರು ಕಿಮೀ ದೂರ (ಬೇರೆ ನಾಯಿಗಳು 1 ಕಿಮೀ ಮಾತ್ರ ಸಾಮರ್ಥ್ಯ ಹೊಂದಿವೆ)ದಿಂದಲೇ ವಾಸನೆ ಗುರುತಿಸಬಲ್ಲ ಸಾಮರ್ಥ್ಯ ಹೊಂದಿದೆ.
ಬೇರೆ ಶ್ವಾನಗಳು 10ರಿಂದ 12 ವರ್ಷ ಆಯುಷ್ಯ ಹೊಂದಿದ್ದರೆ, ಮುಧೋಳ ಶ್ವಾನ 12ರಿಂದ 15 ವರ್ಷ ಆಯುಷ್ಯ ಹೊಂದಿದೆ. ಅತ್ಯಂತ ವಿರಳ ಹಾಗೂ ವಿಶೇಷವಾದ ಈ ಮೂಧೋಳ ಶ್ವಾನವನ್ನು ಬೇಟೆಯಾಡಲು ಬಳಸಲಾಗುತ್ತಿತ್ತು. ಇಂತಹ ವಿಶಿಷ್ಟ ಶ್ವಾನ ಸಂತತಿ ಉಳಿಸಿ-ಬೆಳೆಸುವ ಉದ್ದೇಶದಿಂದಲೇ 2007-08ರಲ್ಲಿ ಮುಧೋಳದಲ್ಲಿ ಶ್ವಾನ ಸಂಶೋಧನಾ ಕೇಂದ್ರ ಸ್ಥಾಪಿಸಲಾಗಿದೆ.

ಪ್ರಧಾನಿ ಮೋದಿ 2020ರಲ್ಲಿ ತಮ್ಮ ಮನ್ ಕಿ ಬಾತ್ ಭಾಷಣದಲ್ಲಿ ಈ ಮುಧೋಳ ಶ್ವಾನಗಳ ಬಗ್ಗೆ ಪ್ರಸ್ತಾಪಿಸಿದ್ದರು. ಈ ಹಿಂದೆ ಎನ್ಎಸ್ಜಿ ಪಡೆ, ಭಾರತೀಯ ಸೇನೆಗೆ ಆಯ್ಕೆಯಾಗಿದ್ದ ಮುಧೋಳ ಶ್ವಾನ ಇದೀಗ ಪ್ರಧಾನಿ ಮೋದಿ ಭದ್ರತೆಗೂ ಆಯ್ಕೆಯಾಗಿರುವುದು ಅತ್ಯಂತ ಹೆಮ್ಮೆಯ ವಿಷಯ ಎಂದು ಮುಧೋಳ ಶ್ವಾನ ಸಂಶೋಧನಾ ಕೇಂದ್ರ ಸ್ಥಾಪನೆಗೆ ವಿಶೇಷ ಕಾಳಜಿ ವಹಿಸಿರುವ ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ
News reports on Thursday (August 18) said Mudhol hounds, a breed of hunting dogs native to north Karnataka, could be inducted into the Special Protection Group (SPG), the elite force protecting the Prime Minister of India.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 12:29 pm
Mangalore Correspondent
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
Mangalore, Volvo Driver Satish Shetty: ರಸ್ತೆ...
03-02-26 09:49 pm
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm