ಬ್ರೇಕಿಂಗ್ ನ್ಯೂಸ್
05-10-20 01:52 pm Bangalore Correspondent ಕರ್ನಾಟಕ
ಬೆಂಗಳೂರು, ಅಕ್ಟೋಬರ್ 05: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮನೆ ಮತ್ತು ಆಸ್ತಿ - ಕಚೇರಿಗಳಿಗೆ ದಿಢೀರ್ ದಾಳಿ ನಡೆಸಿರುವ ಸಿಬಿಐ ಅಧಿಕಾರಿಗಳು 50 ಲಕ್ಷ ನಗದನ್ನು ವಶಕ್ಕೆ ಪಡೆದಿದ್ದಾರೆ.
ಡಿಕೆಶಿಗೆ ಸಂಬಂಧಪಟ್ಟ ಕಚೇರಿ, ಆಸ್ತಿಗಳು ಇರುವಂತಹ ಕರ್ನಾಟಕ, ದೆಹಲಿ ಮತ್ತು ಮುಂಬೈನಲ್ಲಿ ಏಕಕಾಲದಲ್ಲಿ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಂಗಳೂರಿನ ದೊಡ್ಡಆಲಹಳ್ಳಿ, ಕನಕಪುರ ಮತ್ತು ಸದಾಶಿವನಗರ ಹೀಗೆ 9 ಕಡೆ ದಾಳಿ ನಡೆಸಿದ್ದಾರೆ. ಡಿಕೆ ಶಿವಕುಮಾರ್, ಡಿ.ಕೆ.ಸುರೇಶ್, ಆಪ್ತ ಸಚಿನ್ ನಾರಾಯಣ್ ಸೇರಿದಂತೆ ಹಲವರ ಮನೆ, ಕಚೇರಿಗಳಿಗೆ ದಾಳಿಯಾಗಿದೆ. ಈ ವೇಳೆ, 50 ಲಕ್ಷ ರೂಪಾಯಿ ನಗದನ್ನು ವಶಕ್ಕೆ ಪಡೆಯಲಾಗಿದೆ.

ಇದೇ ವೇಳೆ, ಸಿಬಿಐ ಅಧಿಕಾರಿಗಳು ಬೆಂಗಳೂರಿನ ಕೇಂದ್ರದಲ್ಲಿ ಡಿಕೆಶಿ ಮತ್ತು ಆಪ್ತರ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ. ಅಕ್ರಮ ಆಸ್ತಿ ಗಳಿಕೆ ವಿಚಾರದಲ್ಲಿ ಎಫ್ಐಆರ್ ದಾಖಲಿಸಲಾಗಿದೆ ಎನ್ನಲಾಗುತ್ತಿದೆ. ಇದಕ್ಕೂ ಮುನ್ನ ಸಿಬಿಐ ಅಧಿಕಾರಿಗಳು ಡಿಕೆಶಿ ಮತ್ತು ಆಪ್ತರ ವಿರುದ್ಧ ದಾಳಿ ನಡೆಸುವ ಬಗ್ಗೆ ರಾಜ್ಯ ಸರಕಾರದ ಅನುಮತಿ ಪಡೆದಿದ್ದರು. ದಾಳಿ ವೇಳೆ, ಭದ್ರತೆ ನೀಡುವಂತೆ ಕೇಳಿಕೊಂಡಿದ್ದರು. ಎಲ್ಲದಕ್ಕೂ ತಯಾರಿ ಮಾಡಿಕೊಂಡಿದ್ದ ಸಿಬಿಐ ಅಧಿಕಾರಿಗಳು, ಬೆಳ್ಳಂಬೆಳಗ್ಗೆ 5.30ರ ವೇಳೆಗೆ ಡಿಕೆಶಿಯ ಬೆಂಗಳೂರಿನ ಮನೆ ಮೇಲೆ ದಾಳಿ ನಡೆಸಿದ್ದರು.
ಅಕ್ರಮ ಆಸ್ತಿ ಗಳಿಕೆ ವಿಚಾರದಲ್ಲಿ ಒಂದು ವರ್ಷದ ಹಿಂದೆ ಸಿಬಿಐ ಮತ್ತು ಜಾರಿ ನಿರ್ದೇಶನಾಲಯ ಅಧಿಕಾರಿಗಳು ಬೆಂಗಳೂರು ಮತ್ತು ದೆಹಲಿಯಲ್ಲಿ ದಾಳಿ ನಡೆಸಿದ್ದರು. 5 ಕೋಟಿಗೂ ಹೆಚ್ಚು ನಗದನ್ನು ವಶಕ್ಕೆ ಪಡೆದಿದ್ದರು ಎನ್ನಲಾಗಿತ್ತು. ಆನಂತರ ಡಿಕೆಶಿ ಪರ ವಕೀಲರು ಹೆಚ್ಚುವರಿ ದಾಳಿ ನಡೆಸದಂತೆ ಕೋರ್ಟಿನಿಂದ ಸ್ಟೇ ಪಡೆದಿದ್ದರು. ಆ ಬಳಿಕ ತಣ್ಣಗಾಗಿದ್ದ ಪ್ರಕರಣ ಇದೀಗ ದಿಢೀರ್ ಆಗಿ ಮತ್ತೆ ಮೇಲೆದ್ದುಕೊಂಡಿದೆ. ಹಳೇ ಪ್ರಕರಣ ಸಂಬಂಧಿಸಿಯೇ ಮತ್ತೆ ದಾಳಿ ನಡೆಸುತ್ತಿದ್ದಾರೆಯೇ ಅಥವಾ ಹೊಸ ಪ್ರಕರಣ ಏನಾದ್ರೂ ಇದೆಯೇ ಅನ್ನೋದು ತಿಳಿದುಬಂದಿಲ್ಲ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm